AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

Raja Rani Winner: ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ 'ಗೊಂಬೆ' ದಂಪತಿ
ನೇಹಾ-ಚಂದನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 22, 2021 | 2:20 PM

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಅಂತ್ಯಗೊಂಡಿದೆ. ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ತಾರಾ ಜಡ್ಜ್​ ಆಗಿದ್ದ ಈ ಕಾರ್ಯಕ್ರಮದ ಫಿನಾಲೆ ಭಾನುವಾರ (ನವೆಂಬರ್​ 21) ನಡೆದಿದೆ. ರಿಯಾಲಿಟಿ ಶೋ ಫಿನಾಲೆ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಅದೇ ರೀತಿ ಈ ಶೋನ ಕೊನೆಯ ಎಪಿಸೋಡ್​ ಸಖತ್​ ಗ್ರ್ಯಾಂಡ್​ ಆಗಿತ್ತು. ಈ ರಿಯಾಲಿಟಿಶೋನಲ್ಲಿ ‘ಗೊಂಬೆ’ ನೇಹಾ ಗೌಡ ಹಾಗೂ ಅವರ ಪತಿ ಚಂದನ್​ ಗೆದ್ದು ಬೀಗಿದ್ದಾರೆ. ಈ ಮೂಲಕ ರಾಜಾ-ರಾಣಿ ಕಿರೀಟ ತೊಟ್ಟಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ಸಾಕಷ್ಟು ಸೆಲೆಬ್ರಿಟಿಗಳು ಈ ಶೋಗೆ ಸ್ಪರ್ಧಿಗಳಾಗಿ ಆಗಮಿಸಿದ್ದರು. ಹೆಸರೇ ಸೂಚಿಸುವಂತೆ ಈ ಶೋಗೆ ಒಬ್ಬರೇ ಬರುವಂತಿರಲಿಲ್ಲ. ಜೋಡಿ ಸಮೇತವೇ ಬರಬೇಕಿತ್ತು. ಅಂತಿಮವಾಗಿ ಗೊಂಬೆ ದಂಪತಿ ಗೆದ್ದು ಬೀಗಿದೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಬರೋಬ್ಬರಿ 7 ವರ್ಷಗಳ ಕಾಲ ಪ್ರಸಾರವಾಗಿತ್ತು. ಈ ಮೂಲಕ ಈ ಧಾರಾವಾಹಿ ಸಾವಿರಾರು ಕಂತುಗಳನ್ನು  ಪ್ರಸಾರ ಮಾಡಿತ್ತು. ಅಲ್ಲದೆ, ವೀಕ್ಷಕರಿಗೂ ಧಾರಾವಾಹಿ ಇಷ್ಟವಾಗಿತ್ತು. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಗೊಂಬೆ ಎಂದೇ ಜನಪ್ರಿಯರಾದವರು ನೇಹಾ ಗೌಡ. ಅವರು ಚಂದನ್​ ಜತೆ ಮದುವೆ ಆಗಿ ಸುಖ ಸಂಸಾರ ನಡೆಸುತ್ತಿದ್ದಾರೆ.  ಈಗ ಈ ದಂಪತಿಗೆ ರಾಜಾ ರಾಣಿ ಕಿರೀಟ ಗೆದ್ದಿದೆ

‘ರಾಜಾ-ರಾಣಿ’ ಶೋ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಮನೆ ಮಂದಿ ಎಲ್ಲರೂ ಈ ಶೋನ ಇಷ್ಟಪಟ್ಟಿದ್ದರು. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಅನೇಕರಲ್ಲಿ ಇರುತ್ತದೆ. ‘ರಾಜಾ-ರಾಣಿ’ ವೇದಿಕೆ ಮೇಲೆ ಕಿರುತೆರೆ ಸೆಲೆಬ್ರಿಟಿಗಳ ಸಾಕಷ್ಟು ಗುಟ್ಟುಗಳು ರಟ್ಟಾಗಿತ್ತು. ಇದು ಪ್ರೇಕ್ಷಕರಿಗೆ ದೊಡ್ಡ ಮಟ್ಟದಲ್ಲಿ ಮನರಂಜನೆ ನೀಡಿತ್ತು.

ಭಾನುವಾರ ನಡೆದ ಫಿನಾಲೆ ತುಂಬಾನೇ ಅದ್ದೂರಿಯಾಗಿತ್ತು. ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ವಿನ್ನರ್​ ಮಂಜು ಪಾವಗಡ, ಸ್ಪರ್ಧಿಗಳಾದ ಶುಭಾ ಪೂಂಜಾ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಒಟ್ಟಿನಲ್ಲಿ ಸಂಪೂರ್ಣ ಕಾರ್ಯಕ್ರಮ ಭರ್ಜರಿಯಾಗಿ ಮನರಂಜನೆ ನೀಡಿತ್ತು.

ಇದನ್ನೂ ಓದಿ: ‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Published On - 1:32 pm, Mon, 22 November 21

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್