‘ರಾಜಾ-ರಾಣಿ ಸೀಸನ್​ 2’ ಗ್ರ್ಯಾಂಡ್​ ಓಪನಿಂಗ್​ಗೆ ದಿನಗಣನೆ; ಈ ಬಾರಿ ಇರಲಿದೆ ಇನ್ನಷ್ಟು ಮನರಂಜನೆ

Raja Rani Season 2: ಈ ಬಾರಿ ಹೆಚ್ಚಿನ ಮನರಂಜನೆ ನೀಡುವ ಉದ್ದೇಶದಿಂದ ‘ರಾಜಾ ರಾಣಿ ಸೀಸನ್​ 2’ ವೇದಿಕೆ ಸಜ್ಜಾಗಿದೆ. ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಈ ಶೋ ಪ್ರಸಾರ ಆಗಲಿದೆ.

‘ರಾಜಾ-ರಾಣಿ ಸೀಸನ್​ 2’ ಗ್ರ್ಯಾಂಡ್​ ಓಪನಿಂಗ್​ಗೆ ದಿನಗಣನೆ; ಈ ಬಾರಿ ಇರಲಿದೆ ಇನ್ನಷ್ಟು ಮನರಂಜನೆ
ತಾರಾ, ಸೃಜನ್​ ಲೋಕೇಶ್
Follow us
| Updated By: ಮದನ್​ ಕುಮಾರ್​

Updated on: Jun 06, 2022 | 11:58 AM

ಕನ್ನಡ ಕಿರುತೆರೆಯಲ್ಲಿ ಎಲ್ಲ ವಾಹಿನಿಗಳ ನಡುವೆ ಪೈಪೋಟಿ ಇದೆ. ಧಾರಾವಾಹಿ ಮಾತ್ರವಲ್ಲದೇ ರಿಯಾಲಿಟಿ ಶೋಗಳ (Reality Show) ವಿಚಾರದಲ್ಲೂ ಸಖತ್​ ಸ್ಪರ್ಧೆ ಏರ್ಪಟ್ಟಿದೆ. ಪ್ರೇಕ್ಷಕರಿಗೆ ಬಗೆಬಗೆಯ ಮನರಂಜನೆ ನೀಡಲು ಎಲ್ಲ ಚಾನೆಲ್​ಗಳು ಪ್ರಯತ್ನಿಸುತ್ತಿವೆ. ಕಲರ್ಸ್​ ಕನ್ನಡ (Colors Kannada) ವಾಹಿನಿಯಲ್ಲಿ ಹಲವು ನಾನ್​-ಫಿಕ್ಷನ್​ ಶೋಗಳು ಗಮನ ಸೆಳೆಯುತ್ತಿವೆ. ಆ ಪೈಕಿ ‘ರಾಜಾ ರಾಣಿ’ ಕಾರ್ಯಕ್ರಮಕ್ಕೆ ತನ್ನದೇ ಆದ ಚಾರ್ಮ್​ ಇದೆ. ಈಗಾಗಲೇ ಒಂದು ಸೀಸನ್​ ಅನ್ನು ಯಶಸ್ವಿಯಾಗಿ ಮುಗಿಸಿರುವ ಈ ಕಾರ್ಯಕ್ರಮದ ಎರಡನೇ ಸೀಸನ್​ಗೆ ಸಕಲ ತಯಾರಿ ನಡೆದಿದೆ. ‘ರಾಜಾ ರಾಣಿ ಸೀಸನ್​ 2’ (Raja Rani Season 2) ಆರಂಭಿಸಲು ದಿನಾಂಕ ಕೂಡ ನಿಗದಿ ಆಗಿದೆ. ಜೂನ್​ 11ರಂದು ಅದ್ದೂರಿಯಾಗಿ ಇದರ ಗ್ರ್ಯಾಂಡ್​ ಓಪನಿಂಗ್​ ಆಗಲಿದೆ. ಈ ಬಾರಿ ಕೂಡ ಕಿರುತೆರೆ ಲೋಕದ ರಿಯಲ್​ ಲೈಫ್​ ಜೋಡಿಗಳು ಪ್ರೇಕ್ಷಕರನ್ನು ರಂಜಿಸಲಿವೆ.

ಕಲರ್ಸ್​ ಕನ್ನಡದ ಸೋಶಿಯಲ್​ ಮೀಡಿಯಾದ ಖಾತೆಗಳಲ್ಲಿ ‘ರಾಜಾ ರಾಣಿ ಸೀಸನ್​ 2’ ಕಾರ್ಯಕ್ರಮದ ಪ್ರೋಮೋಗಳನ್ನು ಹಂಚಿಕೊಳ್ಳಲಾಗಿದೆ. ಈ ಹೊಸ ಸೀಸನ್​ನಲ್ಲಿ ಭಾಗವಹಿಸುವ ಜೋಡಿಗಳ ಬಗ್ಗೆ ಮಾಹಿತಿ ಇದರಲ್ಲಿ ಇದೆ. ಈಗಾಗಲೇ ಕೆಲವು ಎಪಿಸೋಡ್​ಗಳ ಶೂಟಿಂಗ್​ ಕೂಡ ಮಾಡಲಾಗಿದೆ. ಕಳೆದ ಸೀಸನ್​ಗಿಂತಲೂ ಈ ಬಾರಿ ಹೆಚ್ಚಿನ ಮನರಂಜನೆ ನೀಡುವ ಉದ್ದೇಶದಿಂದ ವೇದಿಕೆ ಸಜ್ಜಾಗಿದೆ. ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಈ ಶೋ ಪ್ರಸಾರ ಆಗಲಿದೆ.

ಇದನ್ನೂ ಓದಿ
Image
ಕಲರ್ಸ್​ನಲ್ಲಿ ಮತ್ತೆ ಬರ್ತಿದೆ ‘ರಾಜಾ-ರಾಣಿ’ ರಿಯಾಲಿಟಿ ಶೋ; ‘ಬಿಗ್​ ಬಾಸ್​’ ಬಗ್ಗೆ ಪ್ರಶ್ನೆ ಇಟ್ಟ ಫ್ಯಾನ್ಸ್
Image
ಕಿರುತೆರೆ ನಟಿ ಸುನೇತ್ರಾ ಅಪಘಾತಕ್ಕೆ ಒಳಗಾದ ಘಟನೆಯ ಸಿಸಿಟಿವಿ ದೃಶ್ಯ ಇಲ್ಲಿದೆ
Image
ಲವ್​ ಕಹಾನಿ ಹೇಳುವಂತೆ ಬೇಡಿಕೆ ಇಟ್ಟ ಅಭಿಮಾನಿ; ಕಿರುತೆರೆ ನಟಿ ಕೊಟ್ರು ಖಡಕ್ ಉತ್ತರ
Image
‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

ಈ ಬಾರಿ ಕೂಡ ಸೃಜನ್​ ಲೋಕೇಶ್​ ಮತ್ತು ನಟಿ ತಾರಾ ಅವರು ಜಡ್ಜ್​ ಆಗಿರಲಿದ್ದಾರೆ. ಕಳೆದ ಸೀಸನ್​ಗೆ ಅನುಪಮಾ ಗೌಡ ಅವರು ನಿರೂಪಕಿ ಆಗಿದ್ದರು. ಈ ಬಾರಿ ಕೂಡ ಅವರೇ ನಿರೂಪಣೆ ಮಾಡಬೇಕು ಎಂದು ಕಮೆಂಟ್​ಗಳ ಮೂಲಕ ವೀಕ್ಷಕರು ಒತ್ತಾಯಿಸಿದ್ದಾರೆ. ಮೊದಲ ಸೀಸನ್​ನಲ್ಲಿ ನೇಹಾ ಗೌಡ ಮತ್ತು ಚಂದನ್​ ವಿನ್ನರ್​ ಆಗಿದ್ದರು. ಹೊಸ ಸೀಸನ್​ನಲ್ಲಿ ಅವರೇನಾದರೂ ಅತಿಥಿಗಳಾಗಿ ಬಂದು ಹೋಗುತ್ತಾರಾ ಎಂಬ ಕೌತುಕ ಕೂಡ ಮೂಡಿದೆ.

ಶಾಲಿನಿ-ಧನರಾಜ್​, ವೀಣಾ-ಸುಂದರ್​, ಅರುಣ್​ ಮಾಧುರ್ಯಾ, ಸಂದೇಶ್​-ಮನೀಷಾ, ಕಾವ್ಯಾ-ಕುಮಾರ್​, ಸುಜಾತಾ-ಅಕ್ಷಯ್​, ಮುಂತಾದ ದಂಪತಿಗಳು ಈ ಸೀಸನ್​ನಲ್ಲಿ ಭಾಗವಹಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ