AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಾ-ರಾಣಿ ಸೀಸನ್​ 2’ ಗ್ರ್ಯಾಂಡ್​ ಓಪನಿಂಗ್​ಗೆ ದಿನಗಣನೆ; ಈ ಬಾರಿ ಇರಲಿದೆ ಇನ್ನಷ್ಟು ಮನರಂಜನೆ

Raja Rani Season 2: ಈ ಬಾರಿ ಹೆಚ್ಚಿನ ಮನರಂಜನೆ ನೀಡುವ ಉದ್ದೇಶದಿಂದ ‘ರಾಜಾ ರಾಣಿ ಸೀಸನ್​ 2’ ವೇದಿಕೆ ಸಜ್ಜಾಗಿದೆ. ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಈ ಶೋ ಪ್ರಸಾರ ಆಗಲಿದೆ.

‘ರಾಜಾ-ರಾಣಿ ಸೀಸನ್​ 2’ ಗ್ರ್ಯಾಂಡ್​ ಓಪನಿಂಗ್​ಗೆ ದಿನಗಣನೆ; ಈ ಬಾರಿ ಇರಲಿದೆ ಇನ್ನಷ್ಟು ಮನರಂಜನೆ
ತಾರಾ, ಸೃಜನ್​ ಲೋಕೇಶ್
TV9 Web
| Edited By: |

Updated on: Jun 06, 2022 | 11:58 AM

Share

ಕನ್ನಡ ಕಿರುತೆರೆಯಲ್ಲಿ ಎಲ್ಲ ವಾಹಿನಿಗಳ ನಡುವೆ ಪೈಪೋಟಿ ಇದೆ. ಧಾರಾವಾಹಿ ಮಾತ್ರವಲ್ಲದೇ ರಿಯಾಲಿಟಿ ಶೋಗಳ (Reality Show) ವಿಚಾರದಲ್ಲೂ ಸಖತ್​ ಸ್ಪರ್ಧೆ ಏರ್ಪಟ್ಟಿದೆ. ಪ್ರೇಕ್ಷಕರಿಗೆ ಬಗೆಬಗೆಯ ಮನರಂಜನೆ ನೀಡಲು ಎಲ್ಲ ಚಾನೆಲ್​ಗಳು ಪ್ರಯತ್ನಿಸುತ್ತಿವೆ. ಕಲರ್ಸ್​ ಕನ್ನಡ (Colors Kannada) ವಾಹಿನಿಯಲ್ಲಿ ಹಲವು ನಾನ್​-ಫಿಕ್ಷನ್​ ಶೋಗಳು ಗಮನ ಸೆಳೆಯುತ್ತಿವೆ. ಆ ಪೈಕಿ ‘ರಾಜಾ ರಾಣಿ’ ಕಾರ್ಯಕ್ರಮಕ್ಕೆ ತನ್ನದೇ ಆದ ಚಾರ್ಮ್​ ಇದೆ. ಈಗಾಗಲೇ ಒಂದು ಸೀಸನ್​ ಅನ್ನು ಯಶಸ್ವಿಯಾಗಿ ಮುಗಿಸಿರುವ ಈ ಕಾರ್ಯಕ್ರಮದ ಎರಡನೇ ಸೀಸನ್​ಗೆ ಸಕಲ ತಯಾರಿ ನಡೆದಿದೆ. ‘ರಾಜಾ ರಾಣಿ ಸೀಸನ್​ 2’ (Raja Rani Season 2) ಆರಂಭಿಸಲು ದಿನಾಂಕ ಕೂಡ ನಿಗದಿ ಆಗಿದೆ. ಜೂನ್​ 11ರಂದು ಅದ್ದೂರಿಯಾಗಿ ಇದರ ಗ್ರ್ಯಾಂಡ್​ ಓಪನಿಂಗ್​ ಆಗಲಿದೆ. ಈ ಬಾರಿ ಕೂಡ ಕಿರುತೆರೆ ಲೋಕದ ರಿಯಲ್​ ಲೈಫ್​ ಜೋಡಿಗಳು ಪ್ರೇಕ್ಷಕರನ್ನು ರಂಜಿಸಲಿವೆ.

ಕಲರ್ಸ್​ ಕನ್ನಡದ ಸೋಶಿಯಲ್​ ಮೀಡಿಯಾದ ಖಾತೆಗಳಲ್ಲಿ ‘ರಾಜಾ ರಾಣಿ ಸೀಸನ್​ 2’ ಕಾರ್ಯಕ್ರಮದ ಪ್ರೋಮೋಗಳನ್ನು ಹಂಚಿಕೊಳ್ಳಲಾಗಿದೆ. ಈ ಹೊಸ ಸೀಸನ್​ನಲ್ಲಿ ಭಾಗವಹಿಸುವ ಜೋಡಿಗಳ ಬಗ್ಗೆ ಮಾಹಿತಿ ಇದರಲ್ಲಿ ಇದೆ. ಈಗಾಗಲೇ ಕೆಲವು ಎಪಿಸೋಡ್​ಗಳ ಶೂಟಿಂಗ್​ ಕೂಡ ಮಾಡಲಾಗಿದೆ. ಕಳೆದ ಸೀಸನ್​ಗಿಂತಲೂ ಈ ಬಾರಿ ಹೆಚ್ಚಿನ ಮನರಂಜನೆ ನೀಡುವ ಉದ್ದೇಶದಿಂದ ವೇದಿಕೆ ಸಜ್ಜಾಗಿದೆ. ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಈ ಶೋ ಪ್ರಸಾರ ಆಗಲಿದೆ.

ಇದನ್ನೂ ಓದಿ
Image
ಕಲರ್ಸ್​ನಲ್ಲಿ ಮತ್ತೆ ಬರ್ತಿದೆ ‘ರಾಜಾ-ರಾಣಿ’ ರಿಯಾಲಿಟಿ ಶೋ; ‘ಬಿಗ್​ ಬಾಸ್​’ ಬಗ್ಗೆ ಪ್ರಶ್ನೆ ಇಟ್ಟ ಫ್ಯಾನ್ಸ್
Image
ಕಿರುತೆರೆ ನಟಿ ಸುನೇತ್ರಾ ಅಪಘಾತಕ್ಕೆ ಒಳಗಾದ ಘಟನೆಯ ಸಿಸಿಟಿವಿ ದೃಶ್ಯ ಇಲ್ಲಿದೆ
Image
ಲವ್​ ಕಹಾನಿ ಹೇಳುವಂತೆ ಬೇಡಿಕೆ ಇಟ್ಟ ಅಭಿಮಾನಿ; ಕಿರುತೆರೆ ನಟಿ ಕೊಟ್ರು ಖಡಕ್ ಉತ್ತರ
Image
‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

ಇದನ್ನೂ ಓದಿ: ‘ರಾಜಾ-ರಾಣಿ’ ಕಿರೀಟ ತೊಟ್ಟ ನೇಹಾ ಗೌಡ-ಚಂದನ್; ಫಿನಾಲೆಯಲ್ಲಿ ಗೆದ್ದ ‘ಗೊಂಬೆ’ ದಂಪತಿ

ಈ ಬಾರಿ ಕೂಡ ಸೃಜನ್​ ಲೋಕೇಶ್​ ಮತ್ತು ನಟಿ ತಾರಾ ಅವರು ಜಡ್ಜ್​ ಆಗಿರಲಿದ್ದಾರೆ. ಕಳೆದ ಸೀಸನ್​ಗೆ ಅನುಪಮಾ ಗೌಡ ಅವರು ನಿರೂಪಕಿ ಆಗಿದ್ದರು. ಈ ಬಾರಿ ಕೂಡ ಅವರೇ ನಿರೂಪಣೆ ಮಾಡಬೇಕು ಎಂದು ಕಮೆಂಟ್​ಗಳ ಮೂಲಕ ವೀಕ್ಷಕರು ಒತ್ತಾಯಿಸಿದ್ದಾರೆ. ಮೊದಲ ಸೀಸನ್​ನಲ್ಲಿ ನೇಹಾ ಗೌಡ ಮತ್ತು ಚಂದನ್​ ವಿನ್ನರ್​ ಆಗಿದ್ದರು. ಹೊಸ ಸೀಸನ್​ನಲ್ಲಿ ಅವರೇನಾದರೂ ಅತಿಥಿಗಳಾಗಿ ಬಂದು ಹೋಗುತ್ತಾರಾ ಎಂಬ ಕೌತುಕ ಕೂಡ ಮೂಡಿದೆ.

ಶಾಲಿನಿ-ಧನರಾಜ್​, ವೀಣಾ-ಸುಂದರ್​, ಅರುಣ್​ ಮಾಧುರ್ಯಾ, ಸಂದೇಶ್​-ಮನೀಷಾ, ಕಾವ್ಯಾ-ಕುಮಾರ್​, ಸುಜಾತಾ-ಅಕ್ಷಯ್​, ಮುಂತಾದ ದಂಪತಿಗಳು ಈ ಸೀಸನ್​ನಲ್ಲಿ ಭಾಗವಹಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?