AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ತಿಕ್ಲ, ಚೈತ್ರಾ ಪುಕ್ಲು’: ಬಿಗ್ ಬಾಸ್ ಮನೆಗೆ ಬರುತ್ತಲೇ ವಿವಾದ ಎಬ್ಬಿಸಿದ ರಜತ್

ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಹೆಸರು ಮಾಡಿರುವ ರಜತ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿ ಆಗಿದ್ದಾರೆ. ವೇದಿಕೆಯಲ್ಲಿ ಸುದೀಪ್ ಜೊತೆ ಮಾತನಾಡುವಾಗ ರಜತ್ ಅವರು ಭಾರಿ ಜೋಶ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವು ಕಿರಿಕ್​ ಡೈಲಾಗ್​ಗಳಲ್ಲಿ ಹೇಳಿದ್ದಾರೆ.

‘ಮಂಜು ತಿಕ್ಲ, ಚೈತ್ರಾ ಪುಕ್ಲು’: ಬಿಗ್ ಬಾಸ್ ಮನೆಗೆ ಬರುತ್ತಲೇ ವಿವಾದ ಎಬ್ಬಿಸಿದ ರಜತ್
ರಜತ್, ಚೈತ್ರಾ ಕುಂದಾಪರ, ಉಗ್ರಂ ಮಂಜು
ಮದನ್​ ಕುಮಾರ್​
|

Updated on: Nov 17, 2024 | 11:18 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ 50 ದಿನಗಳು ಕಳೆದಿವೆ. ಈ ಹಂತದಲ್ಲಿ ಹೊಸ ಸ್ಪರ್ಧಿಗಳನ್ನು ಪರಿಚಯಿಸಲಾಗಿದೆ. ಈಗಾಗಲೇ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಗಮನ ಸೆಳೆದಿದ್ದಾರೆ. ಮತ್ತೆ ಇಬ್ಬರು ಸ್ಪರ್ಧಿಗಳಿಗೆ ವೈಲ್ಡ್ ಕಾರ್ಡ್​ ಮೂಲಕ ಅವಕಾಶ ನೀಡಲಾಗಿದೆ. ತೆಲುಗು ಕಿರುತೆರೆಯಲ್ಲಿ ಹೆಸರು ಮಾಡಿರುವ ಶೋಭಾ ಶೆಟ್ಟಿ ಹಾಗೂ ಒಂದಷ್ಟು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಅನುಭವ ಪಡೆದಿರುವ ರಜತ್ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯ ಒಳಗೆ ಹೋಗುವುದಕ್ಕೂ ಮುನ್ನ ರಜತ್​ ಮತ್ತು ಶೋಭಾ ಶೆಟ್ಟಿ ಅವರನ್ನು ವೇದಿಕೆಯಲ್ಲಿ ಸುದೀಪ್ ಮಾತನಾಡಿಸಿದ್ದಾರೆ. ಭಾರಿ ಉತ್ಸಾಹ ಮತ್ತು ಕಾನ್ಫಿಡೆನ್ಸ್​ನಲ್ಲಿ ರಜತ್ ಮಾತನಾಡಿದ್ದಾರೆ. ಆದರೆ ಮಾತಿನ ಭರದಲ್ಲಿ ಅವರು ಕೆಲವು ಸ್ಪರ್ಧಿಗಳ ಬಗ್ಗೆ ಹಗುರವಾದ ಮಾತುಗಳನ್ನು ಹೇಳಿದ್ದಾರೆ. ಇದರಿಂದ ಮನೆಯ ಒಳಗೆ ವಿವಾದ ಹೊತ್ತಿಕೊಳ್ಳುವ ಸಾಧ್ಯತೆ ಇದೆ.

ಉಪೇಂದ್ರ ನಟನೆಯ ‘ರಕ್ತಕಣ್ಣೀರು’ ಸಿನಿಮಾದ ಡೈಲಾಗ್ ರೀತಿಯಲ್ಲಿ ರಜತ್ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ‘ಈ ಮನೆಯಲ್ಲಿ ಅರ್ಧ ಜನ ತಿಕ್ಲು, ಇನ್ನು ಅರ್ಧ ಜನ ಪುಕ್ಲು. ಇವರು ಯಾರೂ ಉದ್ಧಾರ ಆಗಲ್ಲ’ ಎಂದು ರಜತ್ ಹೇಳಿದರು. ‘ತಿಕ್ಲು ಯಾರು, ಪುಕ್ಲು ಯಾರು’ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಕ್ಕೆ ಉಗ್ರಂ ಮಂಜು ಮತ್ತು ಚೈತ್ರಾ ಕುಂದಾಪರ ಅವರ ಹೆಸರನ್ನು ರಜತ್ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ

‘ಉಗ್ರಂ ಮಂಜು ಮನಸ್ಸಿಗೆ ಬಂದಂಗೆ ಆಡುತ್ತಾರೆ. ತ್ರಿವಿಕ್ರಮ್​ ಅವರದ್ದು ಮುಖವಾಡದ ಆಟ. ಗೌತಮಿ ಕೂಡ ಮುಖವಾಡ ಹಾಕಿಕೊಂಡಿದ್ದಾರೆ. ಆದರೆ ನಾನು ಸಂಪೂರ್ಣ ಮನರಂಜನೆ ನೀಡುತ್ತೇನೆ.’ ಎಂದು ರಜತ್ ಹೇಳಿದ್ದಾರೆ. ‘ಇಷ್ಟು ವರ್ಷ ಮಾಡಿದ ಬೇರೆ ಬೇರೆ ರಿಯಾಲಿಟಿ ಶೋನಲ್ಲಿ ನನ್ನನ್ನು ಬೆಂಬಲಿಸಿದ್ದೀರಿ. ಈಗ ದೊಡ್ಡ ವೇದಿಕೆ ಸಿಕ್ಕಿದೆ. ಈಗಲೂ ಬೆಂಬಲ ನೀಡಿ’ ಎಂದು ಪ್ರೇಕ್ಷಕರಲ್ಲಿ ರಜತ್ ಮನವಿ ಮಾಡಿದ್ದಾರೆ. ಸೋಮವಾರ (ನವೆಂಬರ್​ 18) ಬೆಳಗ್ಗೆ ರಜತ್ ಮತ್ತು ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯ ಒಳಗೆ ಕಾಲಿಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ