AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ರಜತ್​ಗೆ ಸಿಕ್ತು ವಿಶೇಷ ಅವಾರ್ಡ್; ಏನದು?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯ ಮೂಲಕ ಪ್ರವೇಶಿಸಿದ ರಜತ್, ಟಾಪ್ 6 ಸ್ಪರ್ಧಿಗಳಲ್ಲಿ ಒಬ್ಬರಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 50 ದಿನಗಳ ನಂತರ ಮನೆಗೆ ಪ್ರವೇಶಿಸಿದ್ದರೂ, ಟಾಸ್ಕ್‌ಗಳಲ್ಲಿ ಮತ್ತು ಮನರಂಜನೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅವರು ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ರಜತ್​ಗೆ ಸಿಕ್ತು ವಿಶೇಷ ಅವಾರ್ಡ್; ಏನದು?
ರಜತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 30, 2025 | 7:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಅವರು ಟಾಪ್ 6ರಲ್ಲಿ ಒಬ್ಬರಾಗಿದ್ದಾರೆ. ಅವರು 50 ದಿನಗಳ ಬಳಿಕ ದೊಡ್ಮನೆಗೆ ಎಂಟ್ರಿ ಕೊಟ್ಟರೂ ಮನರಂಜನೆಯಲ್ಲಿ, ಟಾಸ್ಕ್​ನಲ್ಲಿ ಅವರು ಕಡಿಮೆ ಆಗಿಲ್ಲ. ಅವರು ಟಾಪ್​ 6ರಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಒಂದು ವಿಶೇಷ ಅವಾರ್ಡ್ ಸಿಕ್ಕಿದೆ. ಅದುವೇ ಹಾರ್ಲಿಕ್ಸ್ ಶಾರ್ಪೆಸ್ಟ್ ಕಂಟೆಸ್ಟಂಟ್​. ಇದನ್ನು ಕೇಳಿ ರಜತ್ ಅವರು ಸಖತ್ ಖುಷಿಪಟ್ಟರು.

ಬಿಗ್ ಬಾಸ್ ಸ್ಪಾನ್ಸರ್​ಗಳಲ್ಲಿ ಹಾರ್ಲಿಕ್ಸ್ ಕೂಡ ಒಂದು. ಹಾರ್ಲಿಕ್ಸ್ ಕುಡಿದರೆ ಹೆಚ್ಚು ಶಾರ್ಪ್ ಆಗುತ್ತಾರೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈ ಕಾರಣದಿಂದಲೇ ‘ಶಾರ್ಪೆಸ್ಟ್ ಕಂಟೆಸ್ಟಂಟ್’ ಅವಾರ್ಡ್​ನ ಕೊಡಲಾಯಿತು. ಈ ಅವಾರ್ಡ್​ ರಜತ್​ಗೆ ಹೋಗುತ್ತಿದೆ ಎಂದು ಸುದೀಪ್ ಅವರು ಘೋಷಣೆ ಮಾಡಿದರು. ಸ್ಟೋರ್ ರೂಂಗೆ ಹೋಗಿ ‘ಹಾರ್ಲಿಕ್​’ ಸಂಸ್ಥೆ ನೀಡಿದ ಅವಾರ್ಡ್​ನ ಸ್ವೀಕರಿಸಿದರು ರಜತ್.

ರಜತ್ ಅವರು ವಿನ್ನಿಂಗ್ ಸ್ಪೀಚ್ ಕೊಟ್ಟರು. ‘ವೈಲ್ಡ್ ಕಾರ್ಡ್​ ಮೂಲಕ ಬಂದರೆ ಗೆಲ್ಲೋಕೆ ಆಗಲ್ಲ ಎಂಬುದು ಅನೇಕರ ನಂಬಿಕೆ. ಆದರೆ, ನಾನು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಲ್ಲಿಯವರೆಗೆ ಬಂದಿದ್ದೇನೆ. ಬಿಗ್ ಬಾಸ್ ಮನೆಗೆ ಬಂದು ವೈಲ್ಡ್ ಆಗಿ ಆಡ್ತೀನಿ ಎನ್ನುವವರು ನನ್ನನ್ನು ಮಾದರಿಯಾಗಿ ಇಟ್ಟುಕೊಳ್ಳಬಹುದು’ ಎಂದು ರಜತ್ ಅವರು ಖುಷಿಯಿಂದ ಹೇಳಿಕೊಂಡರು.

ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಗಮನ ಸೆಳೆಯೋದು ಅಂದರೆ ಅದು ಸಣ್ಣ ಮಾತಲ್ಲ. ಅದರಲ್ಲೂ ಟಾಪ್ 6ರಲ್ಲಿ ಒಬ್ಬರಾಗೋದು ಎಂದರಂತೂ ಅದು ಸಣ್ಣ ವಿಚಾರ ಅಲ್ಲವೇ ಅಲ್ಲ. ಈ ಸಾಧನೆಯನ್ನು ರಜತ್ ಮಾಡಿ ತೋರಿಸಿದ್ದಾರೆ. ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿ ಅವರು ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭವ್ಯಾಗಿಂತ ಫೇಮಸ್ ಆಗಿದ್ದು ಹೇಗೆ? ಸುದೀಪ್​ಗೆ ವಿವರಿಸಿದ ದಿವ್ಯಾ

ರಜತ್ ಅವರು ದೊಡ್ಮನೆಯಲ್ಲಿ ಸಾಕಷ್ಟು ವೈಲ್ಡ್ ಆಗಿ ಆಡಿದ್ದಾರೆ. ಅವರು ಟಾಸ್ಕ್​ನಲ್ಲಿ ಮಾತ್ರವಲ್ಲ, ಮನರಂಜನೆಯಲ್ಲೂ ಗಮನ ಸೆಳೆದಿದ್ದಾರೆ. ಅವರು ಮಾತಿನಲ್ಲೂ ಎಲ್ಲಿಯೋ ಸೋತಿಲ್ಲ. ಯಾರೇ ಮಾತಿಗೆ ನಿಂತರೂ ಅವರನ್ನು ಸೋಲಿಸಿದ್ದಾರೆ. ಕಿಚ್ಚ ಸುದೀಪ್ ಎದುರೂ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಅವರು ಹಿಂದೇಟು ಹಾಕಿಲ್ಲ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:50 pm, Sat, 25 January 25

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ