AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ: ರಜತ್ ವಿರುದ್ಧ ಶಪತ ಮಾಡಿದ ಚೈತ್ರಾ

ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆಗೆ ಬಂದಿರುವ ರಜತ್ ಅವರು ನೇರವಾಗಿ ಚೈತ್ರಾ ಕುಂದಾಪುರ ಅವರನ್ನು ಎದುರು ಹಾಕಿಕೊಂಡಿದ್ದಾರೆ. ದೊಡ್ಮನೆಗೆ ಕಾಲಿಟ್ಟ ದಿನದಿಂದಲೇ ಅವರು ಚೈತ್ರಾಗೆ ಟಕ್ಕರ್​ ನೀಡುತ್ತಿದ್ದಾರೆ. ಈ ವಾರ ರಜತ್ ನಾಮಿನೇಟ್ ಆಗಿಲ್ಲ. ಆದರೆ ಚೈತ್ರಾ ಕುಂದಾಪುರ ಅವರು ನಾಮಿನೇಟ್​ ಆಗಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ: ರಜತ್ ವಿರುದ್ಧ ಶಪತ ಮಾಡಿದ ಚೈತ್ರಾ
ಚೈತ್ರಾ ಕುಂದಾಪುರ, ರಜತ್
Follow us
ಮದನ್​ ಕುಮಾರ್​
|

Updated on: Nov 27, 2024 | 11:14 PM

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಚೈತ್ರಾ ಕುಂದಾಪುರ ಅವರು ಮಾತಿನ ಬಲವನ್ನೇ ನಂಬಿಕೊಂಡಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಬಂದಿರುವ ರಜತ್ ಅವರು ದೈಹಿಕ ಬಲವನ್ನೇ ನಂಬಿಕೊಂಡು ಆಟ ಆಡುತ್ತಿದ್ದಾರೆ. ಇಬ್ಬರ ನಡುವೆ ಕ್ಲ್ಯಾಶ್ ಆಗುತ್ತಿದೆ. ಚೈತ್ರಾ ಕುಂದಾಪುರ ಅವರನ್ನು ರಜತ್ ಪ್ರತಿಕ್ಷಣವೂ ವಿರೋಧಿಸುತ್ತಿದ್ದಾರೆ. ರಜತ್ ಆಡುವ ಮಾತುಗಳು ತುಂಬ ಒರಟಾಗಿ ಇರುತ್ತವೆ. ಹಾಗಾಗಿ ಮಾತಿನ ಮೂಲಕ ಫೈಟ್​ ಮಾಡಲು ಕೂಡ ಚೈತ್ರಾ ಕುಂದಾಪುರ ಅವರಿಗೆ ಕಷ್ಟ ಆಗುತ್ತಿದೆ. ನವೆಂಬರ್​ 27ರ ಸಂಚಿಕೆಯಲ್ಲಿ ಅವರಿಬ್ಬರು ಜಗಳ ಮಾಡಿಕೊಂಡಿದ್ದಾರೆ.

ನಾಮಿನೇಷನ್​ ಪ್ರಕ್ರಿಯೆಯಲ್ಲಿ ಚೈತ್ರಾ ಕುಂದಾಪುರ ಅವರು ಸರಿಯಾದ ಕಾರಣಗಳನ್ನು ನೀಡಿಲ್ಲ ಎಂದು ರಜತ್ ಅವರು ಅಸಮಾಧಾನಗೊಂಡಿದ್ದಾರೆ. ಆದರೆ ತಮ್ಮ ಕಾರಣಗಳು ಸರಿ ಇದೆ ಚೈತ್ರಾ ಅವರು ವಾದ ಮಾಡಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ. ದ್ವೇಷ ಹೆಚ್ಚಾಗುತ್ತಿದೆ. ಒಬ್ಬರ ಕಣ್ಣಿನಲ್ಲಿ ಇನ್ನೊಬ್ಬರು ದುಷ್ಮನ್​ಗಳಾಗಿದ್ದಾರೆ.

‘ನನಗೆ ಚೆನ್ನಾಗಿ ಗೊತ್ತು. ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ’ ಎಂದು ಚೈತ್ರಾ ಕುಂದಾಪುರ ಅವರು ಶತಪ ಮಾಡಿದ್ದಾರೆ. ಅವರ ಈ ಬೆದರಿಕೆಯ ಮಾತುಗಳಿಗೆ ರಜತ್ ಬಗ್ಗಿಲ್ಲ. ಅವರು ಕೂಡ ಜೋರಾಗಿಯೇ ಜಗಳಕ್ಕೆ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಬ್ಬರ ನಡುವಿನ ಜಗಳ ಇನ್ನಷ್ಟು ಜೋರಾಗುವ ಸಾಧ್ಯತೆ ಇದೆ. ಎಲ್ಲ ಸಂದರ್ಭದಲ್ಲಿಯೂ ಇಬ್ಬರ ಮಧ್ಯೆ ವಿರೋಧ ಬೆಳೆಯುತ್ತಿದೆ.

ಇದನ್ನೂ ಓದಿ: ನಿಮ್ಮನ್ನು ಮನೆಗೆ ಕಳಿಸಿಯೇ ನಾನು ಹೋಗೋದು: ಚೈತ್ರಾಗೆ ರಜತ್ ಸವಾಲು

ದೈಹಿಕ ಬಲ ಅಗತ್ಯ ಇರುವ ಟಾಸ್ಕ್​​ನಲ್ಲಿ ಚೈತ್ರಾ ಅವರು ಸರಿಯಾಗಿ ಆಡುವುದಿಲ್ಲ ಎಂಬ ಅಭಿಪ್ರಾಯ ರಜತ್ ಅವರಿಗೆ ಇದೆ. ಅದೇ ರೀತಿ, ಕೇವಲ ದೈಹಿಕ ಬಲದಿಂದ ಬಿಗ್ ಬಾಸ್ ಆಡಲು ಸಾಧ್ಯವಿಲ್ಲ, ತಂತ್ರಗಾರಿಕೆ ಕೂಡ ಮುಖ್ಯ ಎಂಬುದು ಚೈತ್ರಾ ವಾದ. ಇಂತಹ ಹಲವು ವಿಚಾರಗಳಲ್ಲಿ ಅವರಿಬ್ಬರ ನಡುವೆ ಜಗಳ ಆಗುತ್ತಲೇ ಇರುತ್ತದೆ. ರಜತ್ ಬಂದ ದಿನದಿಂದಲೂ ತಮಗೆ ಅಸಮಾಧಾನ ಇದೆ ಎಂದು ಚೈತ್ರಾ ಕುಂದಾಪುರ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ