AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ: ರಜತ್ ವಿರುದ್ಧ ಶಪತ ಮಾಡಿದ ಚೈತ್ರಾ

ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆಗೆ ಬಂದಿರುವ ರಜತ್ ಅವರು ನೇರವಾಗಿ ಚೈತ್ರಾ ಕುಂದಾಪುರ ಅವರನ್ನು ಎದುರು ಹಾಕಿಕೊಂಡಿದ್ದಾರೆ. ದೊಡ್ಮನೆಗೆ ಕಾಲಿಟ್ಟ ದಿನದಿಂದಲೇ ಅವರು ಚೈತ್ರಾಗೆ ಟಕ್ಕರ್​ ನೀಡುತ್ತಿದ್ದಾರೆ. ಈ ವಾರ ರಜತ್ ನಾಮಿನೇಟ್ ಆಗಿಲ್ಲ. ಆದರೆ ಚೈತ್ರಾ ಕುಂದಾಪುರ ಅವರು ನಾಮಿನೇಟ್​ ಆಗಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ: ರಜತ್ ವಿರುದ್ಧ ಶಪತ ಮಾಡಿದ ಚೈತ್ರಾ
ಚೈತ್ರಾ ಕುಂದಾಪುರ, ರಜತ್
ಮದನ್​ ಕುಮಾರ್​
|

Updated on: Nov 27, 2024 | 11:14 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಚೈತ್ರಾ ಕುಂದಾಪುರ ಅವರು ಮಾತಿನ ಬಲವನ್ನೇ ನಂಬಿಕೊಂಡಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಬಂದಿರುವ ರಜತ್ ಅವರು ದೈಹಿಕ ಬಲವನ್ನೇ ನಂಬಿಕೊಂಡು ಆಟ ಆಡುತ್ತಿದ್ದಾರೆ. ಇಬ್ಬರ ನಡುವೆ ಕ್ಲ್ಯಾಶ್ ಆಗುತ್ತಿದೆ. ಚೈತ್ರಾ ಕುಂದಾಪುರ ಅವರನ್ನು ರಜತ್ ಪ್ರತಿಕ್ಷಣವೂ ವಿರೋಧಿಸುತ್ತಿದ್ದಾರೆ. ರಜತ್ ಆಡುವ ಮಾತುಗಳು ತುಂಬ ಒರಟಾಗಿ ಇರುತ್ತವೆ. ಹಾಗಾಗಿ ಮಾತಿನ ಮೂಲಕ ಫೈಟ್​ ಮಾಡಲು ಕೂಡ ಚೈತ್ರಾ ಕುಂದಾಪುರ ಅವರಿಗೆ ಕಷ್ಟ ಆಗುತ್ತಿದೆ. ನವೆಂಬರ್​ 27ರ ಸಂಚಿಕೆಯಲ್ಲಿ ಅವರಿಬ್ಬರು ಜಗಳ ಮಾಡಿಕೊಂಡಿದ್ದಾರೆ.

ನಾಮಿನೇಷನ್​ ಪ್ರಕ್ರಿಯೆಯಲ್ಲಿ ಚೈತ್ರಾ ಕುಂದಾಪುರ ಅವರು ಸರಿಯಾದ ಕಾರಣಗಳನ್ನು ನೀಡಿಲ್ಲ ಎಂದು ರಜತ್ ಅವರು ಅಸಮಾಧಾನಗೊಂಡಿದ್ದಾರೆ. ಆದರೆ ತಮ್ಮ ಕಾರಣಗಳು ಸರಿ ಇದೆ ಚೈತ್ರಾ ಅವರು ವಾದ ಮಾಡಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ. ದ್ವೇಷ ಹೆಚ್ಚಾಗುತ್ತಿದೆ. ಒಬ್ಬರ ಕಣ್ಣಿನಲ್ಲಿ ಇನ್ನೊಬ್ಬರು ದುಷ್ಮನ್​ಗಳಾಗಿದ್ದಾರೆ.

‘ನನಗೆ ಚೆನ್ನಾಗಿ ಗೊತ್ತು. ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ’ ಎಂದು ಚೈತ್ರಾ ಕುಂದಾಪುರ ಅವರು ಶತಪ ಮಾಡಿದ್ದಾರೆ. ಅವರ ಈ ಬೆದರಿಕೆಯ ಮಾತುಗಳಿಗೆ ರಜತ್ ಬಗ್ಗಿಲ್ಲ. ಅವರು ಕೂಡ ಜೋರಾಗಿಯೇ ಜಗಳಕ್ಕೆ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಬ್ಬರ ನಡುವಿನ ಜಗಳ ಇನ್ನಷ್ಟು ಜೋರಾಗುವ ಸಾಧ್ಯತೆ ಇದೆ. ಎಲ್ಲ ಸಂದರ್ಭದಲ್ಲಿಯೂ ಇಬ್ಬರ ಮಧ್ಯೆ ವಿರೋಧ ಬೆಳೆಯುತ್ತಿದೆ.

ಇದನ್ನೂ ಓದಿ: ನಿಮ್ಮನ್ನು ಮನೆಗೆ ಕಳಿಸಿಯೇ ನಾನು ಹೋಗೋದು: ಚೈತ್ರಾಗೆ ರಜತ್ ಸವಾಲು

ದೈಹಿಕ ಬಲ ಅಗತ್ಯ ಇರುವ ಟಾಸ್ಕ್​​ನಲ್ಲಿ ಚೈತ್ರಾ ಅವರು ಸರಿಯಾಗಿ ಆಡುವುದಿಲ್ಲ ಎಂಬ ಅಭಿಪ್ರಾಯ ರಜತ್ ಅವರಿಗೆ ಇದೆ. ಅದೇ ರೀತಿ, ಕೇವಲ ದೈಹಿಕ ಬಲದಿಂದ ಬಿಗ್ ಬಾಸ್ ಆಡಲು ಸಾಧ್ಯವಿಲ್ಲ, ತಂತ್ರಗಾರಿಕೆ ಕೂಡ ಮುಖ್ಯ ಎಂಬುದು ಚೈತ್ರಾ ವಾದ. ಇಂತಹ ಹಲವು ವಿಚಾರಗಳಲ್ಲಿ ಅವರಿಬ್ಬರ ನಡುವೆ ಜಗಳ ಆಗುತ್ತಲೇ ಇರುತ್ತದೆ. ರಜತ್ ಬಂದ ದಿನದಿಂದಲೂ ತಮಗೆ ಅಸಮಾಧಾನ ಇದೆ ಎಂದು ಚೈತ್ರಾ ಕುಂದಾಪುರ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ