AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದ ರಜತ್; ಬಿಗ್ ಬಾಸ್​ ಟ್ರೋಫಿ ಹಿಡಿಯಲು ಇನ್ನಷ್ಟು ಸಮೀಪ

ವೈಲ್ಡ್​ ಕಾರ್ಡ್​ ಮೂಲಕ ಬಿಗ್ ಬಾಸ್ ಆಟಕ್ಕೆ ಎಂಟ್ರಿ ನೀಡಿದ ರಜತ್ ಅವರು ನಿರೀಕ್ಷೆಯಂತೆಯೇ ಉತ್ತಮವಾಗಿ ಆಟವಾಡಿದ್ದಾರೆ. ಮೊದಲಿಗೆ ತುಂಬ ರಫ್ ಆ್ಯಂಡ್​ ಟಫ್ ಆಗಿ ನಡೆದುಕೊಂಡಿದ್ದ ಅವರು ನಂತರದ ದಿನಗಳಲ್ಲಿ ತಮ್ಮನ್ನು ತಿದ್ದಿಕೊಳ್ಳಲು ಪ್ರಯತ್ನಿಸಿದರು. ಈಗ ಅವರು ಕ್ಯಾಪ್ಟನ್ ಕೂಡ ಆಗಿದ್ದಾರೆ. ಆ ಮೂಲಕ ಗೆಲುವಿಗೆ ಇನ್ನಷ್ಟು ಹತ್ತಿರ ಆಗಿದ್ದಾರೆ.

ಕ್ಯಾಪ್ಟನ್ ಆದ ರಜತ್; ಬಿಗ್ ಬಾಸ್​ ಟ್ರೋಫಿ ಹಿಡಿಯಲು ಇನ್ನಷ್ಟು ಸಮೀಪ
Rajath
ಮದನ್​ ಕುಮಾರ್​
|

Updated on: Jan 03, 2025 | 10:59 PM

Share

‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್ ಕನ್ನಡ ಸೀಸನ್​ 11’ ಆಟ ಕೊನೇ ಹಂತವನ್ನು ತಲುಪುತ್ತಿದೆ. ಯಾರಿಗೆ ಬಿಗ್ ಬಾಸ್ ಟ್ರೋಫಿ ಹಿಡಿಯುವ ಅವಕಾಶ ಸಿಗಲಿದೆ ಎಂಬುದನ್ನು ತಿಳಿಯಲು ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಸೀಸನ್​ನಲ್ಲಿ ರಜತ್ ಅವರು ಸ್ಟ್ರಾಂಗ್ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ. 50 ದಿನ ಕಳೆದ ಬಳಿಕ ವೈಲ್ಡ್​ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಬಂದ ಅವರು 100 ದಿನಗಳ ಸಮೀಪದಲ್ಲಿ ಇದ್ದಾರೆ. ರಜತ್ ಈ ವಾರ ಕ್ಯಾಪ್ಟನ್ ಆಗಿದ್ದು, ಇನ್ನಷ್ಟು ಸ್ಟ್ರಾಂಗ್ ಆಗಿದ್ದಾರೆ.

ಕ್ಯಾಪ್ಟನ್ ಆದ ಸಂದರ್ಭದಲ್ಲೇ ರಜತ್ ಅವರಿಗೆ ಕಿಚ್ಚ ಸುದೀಪ್ ಕಡೆಯಿಂದ ಪತ್ರ ಬಂದಿದೆ. ‘ನಾಯಕನಿಗೂ, ಖಳನಾಯಕನಿಗೈ ವ್ಯತ್ಯಾಸ ಇಷ್ಟೇ. ಒಬ್ಬನಿಗೆ ಕೋಪ ಜಾಸ್ತಿ. ಇನ್ನೊಬ್ಬನಿಗೆ ತಾಳ್ಮೆ ಜಾಸ್ತಿ. ನೀವು ನಾಯಕನಾ ಅಥವಾ ಖಳನಾಯಕನಾ’ ಎಂದು ಸುದೀಪ್ ಪ್ರಶ್ನಿಸಿದ್ದಾರೆ. ಆ ಪತ್ರದಲ್ಲಿ ರಜತ್​ಗೆ ಕಿವಿಮಾತು ಕೂಡ ಇದೆ. ಇದಕ್ಕೆ ಉತ್ತರಿಸಿರುವ ರಜತ್ ಅವರು ‘ನಾನು ನಿಮ್ಮ ಅಭಿಮಾನಿ ಸರ್​’ ಎಂದು ಹೇಳಿದ್ದಾರೆ. ಕ್ಯಾಪ್ಟನ್ ಆಗಿ ಅವರು ಬಿಗ್ ಬಾಸ್ ಮನೆಯಲ್ಲಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು.

ರಜತ್ ಅವರು ಬಿಗ್ ಬಾಸ್ ಮನೆಗೆ ಬಂದ ಆರಂಭದಲ್ಲಿ ತುಂಬ ವೈಲ್ಡ್ ಆಗಿ ನಡೆದುಕೊಳ್ಳುತ್ತಿದ್ದರು. ಗೋಲ್ಡ್ ಸುರೇಶ್​ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಅಲ್ಲದೇ, ಧನರಾಜ್ ಮೇಲೆ ಕೈ ಮಾಡಲು ಕೂಡ ಅವರು ಮುಂದಾಗಿದ್ದರು. ಚೈತ್ರಾ ಅವರನ್ನು ಕಂಡರೆ ರಜತ್ ಉರಿದುಬೀಳುತ್ತಿದ್ದರು. ಒಂದು ಟಾಸ್ಕ್ ರದ್ದಾಗುವಂತೆ ನಡೆದುಕೊಂಡಿದ್ದರು. ಇನ್ನೊಂದು ಟಾಸ್ಕ್ ಆಡುವಾಗ ಉಗ್ರಂ ಮಂಜು ಜೊತೆ ಕೈ ಕೈ ಮಿಲಾಯಿಸುವ ಹಂತಕ್ಕೂ ರಜತ್ ಹೋಗಿದ್ದರು. ಆದರೆ ದಿನದಿಂದ ದಿನಕ್ಕೆ ಅವರು ಸುಧಾರಿಸಿದ್ದಾರೆ.

ಇದನ್ನೂ ಓದಿ: ಹಳ್ಳಿಯಿಂದ ಬಂದ ಅಪ್ಪ, ಅಮ್ಮನಿಗೆ ಹೆಮ್ಮೆಯಿಂದ ಬಿಗ್ ಬಾಸ್ ಮನೆ ತೋರಿಸಿದ ಹನುಮಂತ

ಶೀಘ್ರದಲ್ಲೇ ಬಿಗ್ ಬಾಸ್ ಫಿನಾಲೆ ಬರಲಿದೆ. ಈಗ ರಜತ್, ಚೈತ್ರಾ ಕುಂದಾಪುರ, ಧನರಾಜ್, ಹನುಮಂತ, ಉಗ್ರಂ ಮಂಜು, ಗೌತಮಿ, ತ್ರಿವಿಕ್ರಮ್​, ಭವ್ಯಾ ಗೌಡ, ಮೋಕ್ಷಿತಾ ಅವರು ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಒಂದೊಂದು ಆಯಾಮದಿಂದ ಒಬ್ಬೊಬ್ಬರು ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂತಿಮವಾಗಿ ಯಾರ ಕೈಗೆ ಬಿಗ್ ಬಾಸ್ ಟ್ರೋಫಿ ಸಿಗಲಿದೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಈ ವಾರ ಬಿಗ್ ಬಾಸ್ ಸದಸ್ಯರ ಕುಟುಂಬದವರು ದೊಡ್ಮನೆಗೆ ಬಂದಿದ್ದರು. ಆದ್ದರಿಂದ ಮನರಂಜನೆ ಜಾಸ್ತಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ