AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮಾತಾಡುವ ಮೊದಲೇ ರಜತ್​ಗೆ ಪಾಠ ಕಲಿಸಿದ ಬಿಗ್ ಬಾಸ್ ಸದಸ್ಯರು

ಬಾಯಿಗೆ ಬಂದಂತೆ ಮಾತನಾಡಿದ್ದ ರಜತ್ ಅವರಿಗೆ ಬಿಗ್ ಬಾಸ್​ ಮನೆಯ ಸದಸ್ಯರು ಕಳಪೆ ಪಟ್ಟ ನೀಡಿದ್ದಾರೆ. ಬಹುತೇಕ ಎಲ್ಲ ಅಭಿಪ್ರಾಯ ಇದೇ ಆಗಿದ್ದರಿಂದ ರಜತ್ ಜೈಲಿಗೆ ಹೋಗಬೇಕಾಯಿತು. ಜೈಲಿಗೆ ಹೋದರೂ ಕೂಡ ರಜತ್ ಸೊಕ್ಕು ಕಡಿಮೆ ಆಗಿಲ್ಲ. ಹಾಗಾಗಿ ವೀಕೆಂಡ್​ನಲ್ಲಿ ಅವರು ಸುದೀಪ್​ ಕಡೆಯಿಂದ ಬೈಯ್ಯಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಸುದೀಪ್ ಮಾತಾಡುವ ಮೊದಲೇ ರಜತ್​ಗೆ ಪಾಠ ಕಲಿಸಿದ ಬಿಗ್ ಬಾಸ್ ಸದಸ್ಯರು
ರಜತ್
ಮದನ್​ ಕುಮಾರ್​
|

Updated on: Nov 22, 2024 | 11:13 PM

Share

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಬಂದಿರುವ ರಜತ್ ಅವರಿಗೆ ಮಾತಿನ ಮೇಲೆ ಹಿಡಿತ ಇಲ್ಲ. ಇನ್ನುಳಿದ ಸ್ಪರ್ಧಿಗಳಿಗೆ ಅವರು ಅವಾಚ್ಯ ಪದಗಳನ್ನು ಬಳಸಿದ್ದಾರೆ. ಗೋಲ್ಡ್​ ಸುರೇಶ್​ ಅವರಿಗೆ ಅವಮಾನ ಆಗುವಂತಹ ಮಾತುಗಳನ್ನು ರಜತ್ ಹೇಳಿದ್ದಾರೆ. ಆಟದ ಮಧ್ಯೆ ಅಶ್ಲೀಲ ಪದ ಬಳಕೆ ಮಾಡಿದ್ದರಿಂದ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ಆಗಿದೆ. ಹಾಗಾಗಿ ಅವರಿಗೆ ಎಲ್ಲರೂ ಸೇರೆ ಕಳಪೆ ಪಟ್ಟ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಕಾಲಿಟ್ಟ ಮೊದಲನೇ ವಾರವೇ ರಜತ್ ಅವರು ಜೈಲು ಸೇರುವಂತಾಗಿದೆ. ಹಾಗಂತ ಅವರ ಅಹಂಕಾರ ಕಡಿಮೆ ಆಗಿಲ್ಲ.

ಇಡೀ ವಾರದ ಆಟ ಮತ್ತು ವರ್ತನೆಯನ್ನು ಪರಿಗಣಿಸಿ ದೊಡ್ಮನೆಯಲ್ಲಿ ಕಳಪೆ ಯಾರು ಮತ್ತು ಉತ್ತಮ ಯಾರು ಎಂಬುದನ್ನು ನಿರ್ಧರಿಸಲಾಗುತ್ತದೆ. ಈ ವಾರ ಉತ್ತಮ ಪಟ್ಟ ಮೋಕ್ಷಿತಾ ಅವರಿಗೆ ಸಿಕ್ಕಿತು. ಕಳಪೆ ಪಟ್ಟ ರಜತ್ ಪಾಲಾಯಿತು. ಎಲ್ಲರೂ ನೀಡಿದ್ದು ಒಂದೇ ಕಾರಣ. ರಜತ್ ಆಡುವ ಮಾತುಗಳು ಸರಿ ಇಲ್ಲ ಎಂಬುದೇ ಆ ಕಾರಣ. ಆದರೆ ತಮ್ಮ ತಪ್ಪನ್ನು ರಜತ್ ಅರಿತುಕೊಂಡಿಲ್ಲ.

ಜೈಲಿಗೆ ಹೋದಾಗಲೂ ರಜತ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ‘ಬಿಗ್ ಬಾಸ್ ಟ್ರೋಫಿ ಗೆಲ್ಲುವುದು ಹುಡುಗಿಯರ ಕೈ ಕೈ ಹಿಡಿದುಕೊಂಡು ಓಡಾಡಿದಂತೆ ಅಲ್ಲ. ಇನ್ಮೇಲೆ ಇದಕ್ಕಿಂತಲೂ ಜಾಸ್ತಿ ಮಾತನಾಡುತ್ತೇನೆ. ನಾನು ಬದಲಾಗಲ್ಲ’ ಎಂದು ರಜತ್ ಹೇಳಿದ್ದಾರೆ. ಅವರ ಮಾತುಗಳಿಂದ ಉಗ್ರಂ ಮಂಜು, ಐಶ್ವರ್ಯಾ, ಶಿಶಿರ್​ ಮುಂತಾದವರಿಗೆ ಮತ್ತೆ ಬೇಸರ ಆಗಿದೆ.

ಇದನ್ನೂ ಓದಿ: ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು

ವೀಕೆಂಡ್​ ಪಂಚಾಯ್ತಿಯಲ್ಲಿ ಸುದೀಪ್​ ಅವರು ರಜತ್​ಗೆ ಕ್ಲಾಸ್​ ತೆಗೆದುಕೊಳ್ಳಬೇಕು ಎಂಬುದು ಬಹುತೇಕರ ಬಯಕೆ. ಅದಕ್ಕೂ ಮುನ್ನವೇ ರಜತ್​ಗೆ ಕಳಪೆ ನೀಡಿ ಜೈಲಿಗೆ ಕಳಿಸುವ ಮೂಲಕ ಬಿಗ್ ಬಾಸ್​ ಸ್ಪರ್ಧಿಗಳೇ ಪಾಠ ಕಲಿಸಿದ್ದಾರೆ. ಈ ವಾರದ ಕ್ಯಾಪ್ಟೆನ್ಸಿ ಟಾಸ್ಕ್​ಗೆ ರಜತ್ ಆಯ್ಕೆ ಆಗಿದ್ದರು. ಆದರೆ ಕೊನೆಯಲ್ಲಿ ಸೋತರು. ಅಂತಿಮವಾಗಿ ಮಂಜು ಟಾಸ್ಕ್​ ಗೆದ್ದು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ಆಟದಲ್ಲಿ ಹನುಮಂತ ಕೂಡ ಭರ್ಜರಿ ಪೈಪೋಟಿ ನೀಡಿದರು. ಚೈತ್ರಾ ಕುಂದಾಪುರ ಹಾಗೂ ಶೋಭಾ ಶೆಟ್ಟಿ ಸಹ ಕ್ಯಾಪ್ಟೆನ್ಸಿ ಆಟದಲ್ಲಿ ಸೋತರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್