AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ.

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
TV9 Web
| Edited By: |

Updated on: Aug 21, 2021 | 2:27 PM

Share

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ.

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ. ಈಗ ರಾಜೇಶ್​ ಕೃಷ್ಣನ್​ ಕೂಡ ಭಾವುಕರಾಗಿದ್ದಾರೆ.

ಎಸ್​ಪಿಬಿ ಕಂಡರೆ ರಾಜೇಶ್​​ ಕೃಷ್ಣನ್​ ಅವರಿಗೆ ಅಪಾರ ಗೌರವ. ಈಗ ಅವರಿಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಜಡ್ಜ್​​ ಆಗುವ ಸದಾವಕಾಶ ಸಿಕ್ಕಿದೆ. ಇದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ. ‘ನಿಮಗಿದೆ ಮರುಜನ್ಮ.. ಜನಿಸಿರಿ ದಯಮಾಡಿ.. ಕಾಯುತಿದೆ ಕರುನಾಡು..’ ಎನ್ನುವ ಸಾಲುಗಳನ್ನು ಹೇಳುತ್ತಿದ್ದಂತೆ ಅವರು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ. ಅವರು ವೇದಿಕೆ ಮೇಲೆಯೇ ಗಳಗಳನೆ ಅತ್ತಿದ್ದಾರೆ.

ಇಂದು (ಆಗಸ್ಟ್​ 21) ರಾತ್ರಿ 9 ಗಂಟೆಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಪ್ರಸಾರವಾಗಲಿದೆ. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಹಾಗೂ ಎಸ್​ಪಿಬಿ ಮಗ ಚರಣ್​ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಅದರ ಮುಂದುವರಿದ ಭಾಗ ಇದಾಗಿದೆ. ಇತ್ತೀಚೆಗೆ ಚರಣ್​ ಅವರು ವೇದಿಕೆ ಮೇಲೆ ಮಾತನಾಡಿದ್ದರು.  ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದರು.

ಇದನ್ನೂ ಓದಿ: ಎSPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು