ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

| Updated By: ರಾಜೇಶ್ ದುಗ್ಗುಮನೆ

Updated on: Aug 21, 2021 | 2:27 PM

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ.

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
Follow us on

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ.

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ. ಈಗ ರಾಜೇಶ್​ ಕೃಷ್ಣನ್​ ಕೂಡ ಭಾವುಕರಾಗಿದ್ದಾರೆ.

ಎಸ್​ಪಿಬಿ ಕಂಡರೆ ರಾಜೇಶ್​​ ಕೃಷ್ಣನ್​ ಅವರಿಗೆ ಅಪಾರ ಗೌರವ. ಈಗ ಅವರಿಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಜಡ್ಜ್​​ ಆಗುವ ಸದಾವಕಾಶ ಸಿಕ್ಕಿದೆ. ಇದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ. ‘ನಿಮಗಿದೆ ಮರುಜನ್ಮ.. ಜನಿಸಿರಿ ದಯಮಾಡಿ.. ಕಾಯುತಿದೆ ಕರುನಾಡು..’ ಎನ್ನುವ ಸಾಲುಗಳನ್ನು ಹೇಳುತ್ತಿದ್ದಂತೆ ಅವರು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ. ಅವರು ವೇದಿಕೆ ಮೇಲೆಯೇ ಗಳಗಳನೆ ಅತ್ತಿದ್ದಾರೆ.

ಇಂದು (ಆಗಸ್ಟ್​ 21) ರಾತ್ರಿ 9 ಗಂಟೆಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಪ್ರಸಾರವಾಗಲಿದೆ. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಹಾಗೂ ಎಸ್​ಪಿಬಿ ಮಗ ಚರಣ್​ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಅದರ ಮುಂದುವರಿದ ಭಾಗ ಇದಾಗಿದೆ. ಇತ್ತೀಚೆಗೆ ಚರಣ್​ ಅವರು ವೇದಿಕೆ ಮೇಲೆ ಮಾತನಾಡಿದ್ದರು.  ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದರು.

ಇದನ್ನೂ ಓದಿ: ಎSPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​