AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ

Rakesh Adiga | BBK 9 Finale: ಬಿಗ್​ ಬಾಸ್​ ಮನೆಯಲ್ಲಿ ರಾಕೇಶ್ ಅಡಿಗ ಅವರು ಸಿಂಪಲ್​ ಆಗಿ ಇದ್ದಿದ್ದೇ ಹೆಚ್ಚು. ಆದರೆ ಫಿನಾಲೆ ಸಂಚಿಕೆಯಲ್ಲಿ ತುಂಬ ಸ್ಟೈಲಿಶ್​ ಆಗಿ ಕಾಣಿಸಿಕೊಂಡಿದ್ದಾರೆ.

Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ
ರಾಕೇಶ್ ಅಡಿಗ
TV9 Web
| Edited By: |

Updated on:Dec 30, 2022 | 8:26 PM

Share

ನಟ, ಗಾಯಕ ರಾಕೇಶ್​ ಅಡಿಗ (Rakesh Adiga) ಅವರು ವಿಶೇಷ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಬಿಗ್​ ಬಾಸ್​ ಕನ್ನಡ ಒಟಿಟಿ ಮೊದಲ ಸೀಸನ್​ನಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಅಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು ಟಿವಿ ಸೀಸನ್​ಗೆ ಎಂಟ್ರಿ ಪಡೆಯುವಲ್ಲಿ ಸಫಲರಾದರು. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಅವರ ಪಾಲಿಗೆ ಮಹತ್ವದ ಘಟ್ಟವಾಗಿದೆ. ಈಗ ಅವರು ಫಿನಾಲೆಯ ತನಕ ಬಂದಿದ್ದು, ಟ್ರೋಫಿ ಗೆಲ್ಲುವ ತವಕದಲ್ಲಿದ್ದಾರೆ. ಡಿಸೆಂಬರ್​ 30 ಮತ್ತು 31ರಂದು ಫಿನಾಲೆ (Bigg Boss Kannada Finale) ಎಪಿಸೋಡ್​ ಪ್ರಸಾರ ಆಗುತ್ತಿದೆ. ಈ ವಿಶೇಷ ಸಂಚಿಕೆಗಳ ಸಲುವಾಗಿ ರಾಕೇಶ್​ ಅಡಿಗ ಗೆಟಪ್​ ಬದಲಾಯಿಸಿಕೊಂಡಿದ್ದಾರೆ. ಪಕ್ಕಾ ರ‍್ಯಾಪ್​ ಗಾಯಕನ ರೀತಿಯಲ್ಲಿ ಹೇರ್​ ಸ್ಟೈಲ್​ ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ರಾಕೇಶ್ ಅಡಿಗ ಅವರು ಸಿಂಪಲ್​ ಆಗಿ ಇದ್ದಿದ್ದೇ ಹೆಚ್ಚು. ಯಾರ ಜೊತೆಗೂ ಅವರು ಅನಗತ್ಯವಾಗಿ ರಿಲೇಷನ್​ಶಿಪ್​ ಬೆಳೆಸಲಿಲ್ಲ. ಎಲ್ಲರೊಂದಿಗೂ ಸಮನಾಗಿ ಸ್ನೇಹ ಇಟ್ಟುಕೊಂಡರು. ಎಲ್ಲ ಸಂದರ್ಭವನ್ನೂ ಆದಷ್ಟು ಕೂಲ್​ ಆಗಿ ನಿಭಾಯಿಸುವ ಮೂಲಕ ಅವರು ವೀಕ್ಷಕರಿಗೆ ಇಷ್ಟವಾದರು. ಫಿನಾಲೆಯಲ್ಲಿ ರಾಕೇಶ್​ ಅಡಿಗ ಭರವಸೆಯ ಸ್ಪರ್ಧಿಯಾಗಿ ಪೈಪೋಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: Rakesh Adiga: ಹುಡುಗಿಯ ಬೆತ್ತಲೆ ಫೋಟೋ ಅಂಟಿಸಿ, ಕಳ್ಳತನ ಮಾಡಿ, ತಾಯಿ ತಲೆ ತಗ್ಗಿಸುವಂತೆ ಮಾಡಿದ್ದ ರಾಕೇಶ್​ ಅಡಿಗ

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಬಿಗ್​ ಬಾಸ್​ ಫಿನಾಲೆ ಎಂದರೆ ಸಖತ್​ ರಂಗುರಂಗಾಗಿ ಇರುತ್ತದೆ. ಝಗಮಗಿಸುವ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆಯುತ್ತಿವೆ. ಎಲ್ಲ ಸ್ಪರ್ಧಿಗಳು ವಿಶೇಷವಾಗಿ ಡ್ರೆಸ್​ ಮಾಡಿಕೊಂಡು ಕ್ಯಾಮೆರಾ ಮುಂದೆ ಮಿಂಚುತ್ತಾರೆ. ಶೋ ನಡೆಸಿಕೊಡುವ ಕಿಚ್ಚ ಸುದೀಪ್​ ಕೂಡ ಸ್ಪೆಷಲ್​ ಕಾಸ್ಟ್ಯೂಮ್​ ಧರಿಸಿ ಬರುತ್ತಾರೆ. ವೀಕ್ಷಕರ ಗ್ಯಾಲರಿಯಲ್ಲಿ ಹಳೇ ಸ್ಪರ್ಧಿಗಳು ಇರುತ್ತಾರೆ. ಫಿನಾಲೆ ತಲುಪಿದವರ ಕುಟುಂಬಸ್ತರು ಕೂಡ ಹಾಜರಿರುತ್ತಾರೆ. ಇಂಥ ಸಂಚಿಕೆಯಲ್ಲಿ ರಾಕೇಶ್​ ಅಡಿಗ ಅವರ ಲುಕ್​ ಗಮನ ಸೆಳೆದಿದೆ.

ಇದನ್ನೂ ಓದಿ: ಬಿಗ್ ಬಾಸ್​ ಸಿನಿಮಾದಲ್ಲಿ ಸೋಮಣ್ಣ ಹೀರೋ, ಸೋನು ಹೀರೋಯಿನ್​, ರಾಕೇಶ್​ ವಿಲನ್​: ಕಾಮಿಡಿ ಯಾರು?

ಫಿನಾಲೆ ಸಲುವಾಗಿ ಕೇಶ ವಿನ್ಯಾಸಕರು ಮತ್ತು ಮೇಕಪ್​ ಕಲಾವಿದರನ್ನು ಬಿಗ್​ ಬಾಸ್​ ಮನೆ ಒಳಗೆ ಕಳಿಸಲಾಯಿತು. ರಾಕೇಶ್​ ಅಡಿಗ ಅವರು ಸಖತ್​ ಸ್ಟೈಲಿಶ್​ ಆಗಿ ಹೇರ್​ ಸ್ಟೈಲ್​ ಮಾಡಿಸಿಕೊಂಡಿದ್ದಾರೆ. ಅವರು ಮಾತ್ರವಲ್ಲದೇ ರೂಪೇಶ್​ ರಾಜಣ್ಣ, ದಿವ್ಯಾ ಉರುಡುಗ, ರೂಪೇಶ್​ ಶೆಟ್ಟಿ ಮತ್ತು ದೀಪಿಕಾ ದಾಸ್​ ಕೂಡ ಭರ್ಜರಿಯಾಗಿಯೇ ಡ್ರೆಸ್​ ಮಾಡಿಕೊಂಡು ತಯಾರಾಗಿದ್ದಾರೆ. ಎಲ್ಲರ ಹೊಸ ಲುಕ್​ ನೋಡಿ ಕಿಚ್ಚ ಸುದೀಪ್​ ಅವರು ಮೆಚ್ಚುಗೆ ಸೂಚಿಸಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಕೊನೇ ವಾರದಲ್ಲಿ ಸ್ಪರ್ಧಿಗಳಿಗೆ ಸಾಕಷ್ಟು ಸವಲತ್ತುಗಳನ್ನು ನೀಡಲಾಗಿದೆ. ಅದರ ಅನುಭವನ್ನು ಅವರೆಲ್ಲರೂ ಸುದೀಪ್​ ಎದುರಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:26 pm, Fri, 30 December 22

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ