AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷ್​​​ಗೆ ಕಾಟ ಕೊಟ್ಟ ಇಬ್ಬರು ಹೆಂಡತಿಯರು; ಅವರ ಒದ್ದಾಟವನ್ನು ನೀವೇ ನೋಡಿ

ಈ ಬಾರಿ ಕಿರುತೆರೆ ನಿರ್ದೇಶಕ ರಾಮ್​ಜಿ, ಅನುಪಮಾ ಗೌಡ, ನಮೃತಾ ಗೌಡ ಹಾಗೂ ರಕ್ಷ್​ ಆಗಮಿಸಿದ್ದಾರೆ. ಈ ವೇಳೆ ಗಣೇಶ್​ ನೀಡಿದ ಒಂದು ಟಾಸ್ಕ್​ ಸಖತ್ ಮಜಾ ನೀಡಿದೆ.

ರಕ್ಷ್​​​ಗೆ ಕಾಟ ಕೊಟ್ಟ ಇಬ್ಬರು ಹೆಂಡತಿಯರು; ಅವರ ಒದ್ದಾಟವನ್ನು ನೀವೇ ನೋಡಿ
ಗೋಲ್ಡನ್​ ಗ್ಯಾಂಗ್ ಶೋ
TV9 Web
| Edited By: |

Updated on: Mar 27, 2022 | 2:20 PM

Share

ರಕ್ಷ್​ (Raksh) ಅವರು ‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಈಗ ಅವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯಿಂದ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈಗ ಅವರು ಗೋಲ್ಡನ್​ ಸ್ಟಾರ್​ ಗಣೇಶ್ (Golden Star Ganesh) ನಡೆಸಿಕೊಡುವ ‘ಗೋಲ್ಡನ್​ ಗ್ಯಾಂಗ್​’ ಶೋಗೆ ಬಂದಿದ್ದಾರೆ. ಅವರ ಜತೆಗೆ ಅನುಪಮಾ ಗೌಡ (Anupama Gowda) ಹಾಗೂ ನಮೃತಾ ಗೌಡ ಕೂಡ ಆಗಮಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಡೆದ ಒಂದು ಸಣ್ಣ ಡ್ರಾಮಾ ಪ್ರೇಕ್ಷಕರಿಗೆ ಸಖತ್ ಮಜಾ ನೀಡಿದೆ. ಈ ಪ್ರೋಮೋವನ್ನು ಜೀ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಖತ್​ ವೈರಲ್ ಆಗುತ್ತಿದೆ.

‘ಗೋಲ್ಡನ್​ ಗ್ಯಾಂಗ್​’ ಕಾರ್ಯಕ್ರಮ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ತಮ್ಮ ಫ್ರೆಂಡ್ಸ್​ ಗ್ಯಾಂಗ್​ ಜತೆ ಈ ಶೋಗೆ ಬರುತ್ತಾರೆ. ಅಲ್ಲಿ ನಾನಾ ರೀತಿಯ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ಕಿರುತೆರೆ ನಿರ್ದೇಶಕ ರಾಮ್​ಜಿ, ಅನುಪಮಾ ಗೌಡ, ನಮೃತಾ ಗೌಡ ಹಾಗೂ ರಕ್ಷ್​ ಆಗಮಿಸಿದ್ದಾರೆ. ಈ ವೇಳೆ ಗಣೇಶ್​ ನೀಡಿದ ಒಂದು ಟಾಸ್ಕ್​ ಸಖತ್ ಮಜಾ ನೀಡಿದೆ.

‘ವ್ಯಕ್ತಿಯೊಬ್ಬರಿಗೆ ಇಬ್ಬರು ಹೆಂಡತಿಯರು. ಅವರಿಬ್ಬರೂ ಒಂದೇ ಮನೆಯಲ್ಲಿ ಇದ್ದಾರೆ. ಒಬ್ಬರು ವೆಜ್​ ಹಾಗೂ ಮತ್ತೊಬ್ಬರು ನಾನ್​ವೆಜ್ ಅಡುಗೆ ಮಾಡಿದ್ದಾರೆ. ಆದರೆ, ನೀವು ಬೇರೆ ಕಡೆ ಊಟ ಮಾಡಿ ಬಂದಿರುತ್ತೀರಿ. ಇಬ್ಬರನ್ನೂ ಹೇಗೆ ಮ್ಯಾನೇಜ್​ ಮಾಡ್ತೀರಾ ಅನ್ನೋದು ನಿಮಗೆ ಬಿಟ್ಟಿದ್ದು’ ಎಂದು ರಕ್ಷ್​ಗೆ ಟಾಸ್ಕ್​ ನೀಡಿದರು ಗಣೇಶ್​. ಅನುಪಮಾ ಗೌಡ ವೆಜ್​ ಅಡುಗೆ ಮಾಡಿಕೊಂಡು ಬಂದರೆ, ನಮೃತಾ ಗೌಡ ನಾನ್​ವೆಜ್​ ಅಡುಗೆ ಹಿಡಿದು ಬಂದಿದ್ದಾರೆ.

View this post on Instagram

A post shared by Zee Kannada (@zeekannada)

ನಮೃತಾ ಹಾಗೂ ಅನುಪಮಾ ಗೌಡ ಇಬ್ಬರೂ ರಕ್ಷ್​ಗೆ ಸಖತ್​ ಟಾರ್ಚರ್​ ನೀಡಿದ್ದಾರೆ. ನಾನು ಬೇರೆಕಡೆ ಊಟ ಮಾಡಿ ಬಂದಿದ್ದೇನೆ ಎಂದು ರಕ್ಷ್​ ಹೇಳಿದರೂ ಅದನ್ನು ಕೇಳದೇ ಊಟ ತಿನ್ನಿಸಿದ್ದಾರೆ. ಈ ವಿಡಿಯೋ ಸಖತ್​ ಮಜಾ ನೀಡಿದೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ಕೆಲವರು ಈ ಶೋಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಶನಿವಾರ ಹಾಗೂ ಭಾನುವಾರ ಈ ಶೋ ಪ್ರಸಾರ ಆಗಿದೆ.

ಇದನ್ನೂ ಓದಿ: ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಉಕ್ರೇನ್​ನಲ್ಲಿ ಸಿಲುಕಿದ್ದಾರೆ ಕಿರುತೆರೆ ನಟಿ?; ಸ್ಪಷ್ಟನೆ ನೀಡಿದ ಪ್ರಿಯಾ ಮೋಹನ್  

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ