AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​

Raksha Bandhan | Akshay Kumar: ‘ರಕ್ಷಾ ಬಂಧನ್’ ಸಿನಿಮಾ ​ಆಗಸ್ಟ್​ 11ರಂದು ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಸಿನಿಮಾದಲ್ಲಿ ಅಣ್ಣ-ತಂಗಿಯರ ಕಥೆ ಇದೆ.

Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
ಅಕ್ಷಯ್ ಕುಮಾರ್
TV9 Web
| Edited By: |

Updated on:Aug 05, 2022 | 11:31 AM

Share

ನಟ ಅಕ್ಷಯ್​ ಕುಮಾರ್ (Akshay Kumar)​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಾಧ್ಯವಾದಷ್ಟು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟಪಡುತ್ತಾರೆ. ಫ್ಯಾಮಿಲಿ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡೇ ಅವರು ಸಿನಿಮಾ ಮಾಡುತ್ತಾರೆ. ಈಗ ಅವರ ಹೊಸ ಸಿನಿಮಾ ‘ರಕ್ಷಾ ಬಂಧನ್​’ (Raksha Bandhan) ಬಿಡುಗಡೆಗೆ ಸಜ್ಜಾಗಿದೆ. ಅದರ ಸಲುವಾಗಿ ಅವರು ಅನೇಕ ಕಡೆಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಈಗ ಅವರು ‘ಸೂಪರ್​ಸ್ಟಾರ್​ ಸಿಂಗರ್​ 2(Superstar Singer 2) ರಿಯಾಲಿಟಿ ಶೋ ವೇದಿಕೆಗೆ ಅತಿಥಿಯಾಗಿ ಹೋಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಸಖತ್​ ಎಮೋಷನಲ್​ ಆಗಿ ಕಣ್ಣೀರು ಹಾಕಿದ್ದಾರೆ. ಸಹೋದರಿಯನ್ನು ನೆನಪು ಮಾಡಿಕೊಂಡು ಗಳಗಳನೆ ಅತ್ತಿದ್ದಾರೆ. ಇದರ ಪ್ರೋಮೋ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಾರಾಂತ್ಯದಲ್ಲಿ ಪೂರ್ತಿ ಎಪಿಸೋಡ್​ ನೋಡಲು ಅಕ್ಷಯ್​ ಕುಮಾರ್ ಅಭಿಮಾನಿಗಳು ಕಾದಿ​ದ್ದಾರೆ.

‘ರಕ್ಷಾ ಬಂಧನ್’ ಸಿನಿಮಾ ​ಆಗಸ್ಟ್​ 11ರಂದು ರಿಲೀಸ್​ ಆಗಲಿದೆ. ಹೆಸರೇ ಹೇಳುವಂತೆ ಈ ಸಿನಿಮಾದಲ್ಲಿ ಅಣ್ಣ-ತಂಗಿಯರ ಕಥೆ ಇದೆ. ನಾಲ್ವರು ತಂಗಿಯರನ್ನು ಮದುವೆ ಮಾಡಲು ಕಷ್ಟಪಡುವ ಅಣ್ಣನ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಸೂಪರ್​ ಹಿಟ್​ ಆಗಿದೆ. ಫ್ಯಾಮಿಲಿ ಪ್ರೇಕ್ಷಕರು ಈ ಚಿತ್ರವನ್ನು ಬಹುವಾಗಿ ಮೆಚ್ಚಿಕೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ
Image
Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
Image
Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ
Image
ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಸೋನಿ ಟಿವಿಯಲ್ಲಿ ‘ಸೂಪರ್​ಸ್ಟಾರ್​ ಸಿಂಗರ್​ 2’ ರಿಯಾಲಿಟಿ ಶೋ ಪ್ರಸಾರ ಆಗುತ್ತಿದೆ. ಅಲ್ಕಾ ಯಾಗ್ನಿಕ್​, ಹಿಮೇಶ್​ ರೇಶಮಿಯಾ, ಜಾವೇದ್​ ಅಲಿ ಅವರು ನಿರ್ಣಾಯಕರಾಗಿದ್ದಾರೆ. ‘ಇಂಡಿಯನ್​ ಐಡಲ್​ 12’ ಖ್ಯಾತಿಯ ಪವನ್​ದೀಪ್​ ರಾಜನ್​, ಅರುಣಿತಾ ಕಂಜಿಲಾಲ್​ ಮುಂತಾದವರು ಮೆಂಟರ್​ಗಳಾಗಿದ್ದಾರೆ. ಈ ವೇದಿಕೆಯಲ್ಲಿ ಅಕ್ಷಯ್​ ಕುಮಾರ್​ ಎದುರು ಸ್ಪರ್ಥಿಯೊಬ್ಬರು ಸಹೋದರಿಯ ಕುರಿತ ಗೀತೆಯೊಂದನ್ನು ಹೇಳಿದರು. ಹಿನ್ನೆಲೆಯ ಎಲ್​ಇಡಿ ಪರದೆಯಲ್ಲಿ ಅಕ್ಷಯ್​ ಕುಮಾರ್​ ಮತ್ತು ಅವರ ತಂಗಿ ಅಲ್ಕಾ ಭಾಟಿಯಾ ಫೋಟೋ, ವಿಡಿಯೋಗಳನ್ನು ಬಿತ್ತರ ಮಾಡಲಾಯಿತು. ಅದನ್ನು ನೋಡಿ ಅಕ್ಷಯ್​ ಕುಮಾರ್ ತುಂಬ ಎಮೋಷನಲ್​ ಆದರು. ಅಳು ತಡೆಯಲಾಗದೇ ಎಲ್ಲರ ಎದುರು ಕಣ್ಣೀರು ಹಾಕಿದರು.

ಈ ಎಪಿಸೋಡ್​ ಶನಿವಾರ (ಆಗಸ್ಟ್​ 6) ಮತ್ತು ಭಾನುವಾರ (ಆಗಸ್ಟ್​ 7) ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ. ಸೋದರಿ ಬಗ್ಗೆ ಅಕ್ಷಯ್​ ಕುಮಾ​ರ್​ ಏನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ. ‘ರಕ್ಷಾ ಬಂಧನ್​’ ಚಿತ್ರಕ್ಕೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡಿದ್ದಾರೆ. ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಭೂಮಿ ಪೆಡ್ನೇಕರ್​ ನಟಿಸಿದ್ದಾರೆ.

Published On - 11:15 am, Fri, 5 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ