AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshak Bullet: ಒಂದೇ ಒಂದು ವಿಡಿಯೋದಲ್ಲೂ ಕಾಣಿಸಿಲ್ಲ ರಕ್ಷಕ್ ಹಾಗೂ ಈಶಾನಿ; ನಾಲಿಗೆ ಹರಿಬಿಟ್ಟಿದ್ದಕ್ಕೆ ಸಿಕ್ಕ ಪ್ರತಿಫಲ?

ನೆಗೆಟಿವ್ ಟಾಕ್ ಮಾಡಿದವರಿಗೆ ಸುದೀಪ್ ಎಚ್ಚರಿಕೆ ನೀಡದೇ ಬಿಡುವುದಿಲ್ಲ. ರಕ್ಷಕ್ ಹಾಗೂ ಈಶಾನಿ ಇಬ್ಬರಿಗೂ ಎಚ್ಚರಿಕೆ ನೀಡುವ ಕೆಲಸವನ್ನು ಅವರು ಮಾಡಿದ್ದರು. ಇದರ ಜೊತೆ ಯಾವುದೇ ವಿಡಿಯೋ ಟೇಪ್​ನಲ್ಲಿ ಅವರು ಕಾಣಿಸಿಲ್ಲ.

Rakshak Bullet: ಒಂದೇ ಒಂದು ವಿಡಿಯೋದಲ್ಲೂ ಕಾಣಿಸಿಲ್ಲ ರಕ್ಷಕ್ ಹಾಗೂ ಈಶಾನಿ; ನಾಲಿಗೆ ಹರಿಬಿಟ್ಟಿದ್ದಕ್ಕೆ ಸಿಕ್ಕ ಪ್ರತಿಫಲ?
ರಕ್ಷಕ್-ಈಶಾನಿ
ರಾಜೇಶ್ ದುಗ್ಗುಮನೆ
|

Updated on:Jan 29, 2024 | 10:31 AM

Share

ರಕ್ಷಕ್ ಬುಲೆಟ್ (Rakshak Bullet) ಅವರು ಬಿಗ್ ಬಾಸ್ ಮನೆಯಿಂದ ಕೇವಲ ಒಂದೇ ತಿಂಗಳಿಗೆ ಔಟ್ ಆದರು. ಇದು ಅವರ ಫ್ಯಾನ್ಸ್​ಗೆ ಸಾಕಷ್ಟು ಬೇಸರ ಮೂಡಿಸಿತ್ತು. ಸ್ವತಃ ರಕ್ಷಕ್ ಅವರು ಈ ಬಗ್ಗೆ ಅಸಮಾಧಾನಗೊಂಡಿದ್ದರು. ಈ ಕಾರಣದಿಂದಲೇ ಅವರು ಬಾಯಿಗೆ ಬಂದಂತೆ ಹೇಳಿಕೆ ನೀಡೋಕೆ ಆರಂಭಿಸಿದ್ದರು. ಸಂದರ್ಶನಗಳಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದರು. ಈಶಾನಿ ಅವರು ದೊಡ್ಮನೆ ಒಳಗೆ ಅತಿಥಿಯಾಗಿ ಎಂಟ್ರಿ ಕೊಟ್ಟಾಗ ಪ್ರತಾಪ್ ಬಗ್ಗೆ ಮಾತನಾಡಿದ್ದರು. ಇದನ್ನು ಸುದೀಪ್ ಖಂಡಿಸಿದ್ದರು. ಪರಿಣಾಮ ಯಾವ ವಿಡಿಯೋ ಟೇಪ್​ನಲ್ಲೂ (ವಿಟಿ) ಅವರು ಕಾಣಿಸಿಲ್ಲ.

ತಮ್ಮ ಬಗ್ಗೆ ನೆಗೆಟಿವ್ ಟಾಕ್ ಮಾಡಿದವರಿಗೆ ಸುದೀಪ್ ಎಚ್ಚರಿಕೆ ನೀಡದೇ ಬಿಡುವುದಿಲ್ಲ. ರಕ್ಷಕ್ ಹಾಗೂ ಈಶಾನಿ ಇಬ್ಬರಿಗೂ ಎಚ್ಚರಿಕೆ ನೀಡುವ ಕೆಲಸವನ್ನು ಅವರು ಮಾಡಿದ್ದರು. ಇದರ ಜೊತೆ ಯಾವುದೇ ವಿಡಿಯೋ ಟೇಪ್​ನಲ್ಲಿ ಅವರು ಕಾಣಿಸಿಲ್ಲ. ಕಿರಿಕ್ ಮಾಡಿಕೊಂಡಿದ್ದರಿಂದಲೇ ಅವರನ್ನು ಎಲ್ಲಾ ವಿಡಿಯೋಗಳಿಂದ ಕೈ ಬಿಡಲಾಗಿದೆ ಎನ್ನುವ ಮಾತು ಕೇಳಿ ಬಂದಿದೆ.

ಬಿಗ್ ಬಾಸ್​ನಲ್ಲಿ ಫನ್, ಕಣ್ಣೀರು ಇತ್ಯಾದಿ ಘಟನೆಗಳು ನಡೆದಿರುತ್ತವೆ. ಇದರ ಸಮ್​ಅಪ್ ಮಾಡಿ ವಿಡಿಯೋ ಪ್ಲೇ ಮಾಡಲಾಗುತ್ತದೆ. ಈ ಬಾರಿ ಫನ್ ವಿಟಿ, ಕಣ್ಣೀರು ಹಾಕಿದ ವಿಟಿ, ಒಟ್ಟಾರೆ ಜರ್ನಿ ವಿಟಿಯನ್ನು ಹಾಕಲಾಗಿದೆ. ಇದರಲ್ಲಿ ಎಲ್ಲಿಯೂ ರಕ್ಷಕ್ ಹಾಗೂ ಈಶಾನಿಯನ್ನು ತೋರಿಸಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ರಕ್ಷಕ್ ಹಾಗೂ ಈಶಾನಿ ಮಾಡಿಕೊಂಡ ಕಿರಿಕ್​ನಿಂದಲೇ ಈ ರೀತಿ ಆಗಿರಬಹುದು ಎಂದು ಅನೇಕರು ಭಾವಿಸಿದ್ದಾರೆ.

ಇದನ್ನೂ ಓದಿ: ‘ಗೆಳೆಯ ಬುಲೆಟ್ ಪ್ರಕಾಶ್ ಮನಸ್ಸಿನಲ್ಲಿದ್ದಾರೆ, ಅಂದ್ರೆ ನಿಮ್ಮನ್ನು ಪ್ರೀತ್ಸಲ್ವ?’; ರಕ್ಷಕ್​ಗೆ ಸುದೀಪ್ ಪ್ರಶ್ನೆ

ರಕ್ಷಕ್ ಅವರು ಬಿಗ್ ಬಾಸ್ ಮನೆ ಒಳಗೆ ಎರಡನೇ ಬಾರಿ ಬರುವಾಗ ಅತಿಥಿಯಾಗಿ ಬಂದಿದ್ದರು. ಈ ವೇಳೆ ಪ್ರತಾಪ್ ಬಳಿ ಅವರು ಕಿರಿಕ್ ಮಾಡಿಕೊಂಡಿದ್ದರು. ಸ್ನೇಹಿತ್ ಅವರು ಇದನ್ನು ಖಂಡಿಸಿದ್ದರು. ‘ಪ್ರತಾಪ್ ಬಗ್ಗೆ ಸಿಂಪತಿ ಮೂಡುವಂತೆ ಮಾಡಲು ನಾವೇ ಕಾರಣ’ ಎಂದು ಅವರು ಹೇಳಿದ್ದರು. ಈಶಾನಿ ಕೂಡ ಪ್ರತಾಪ್​ನ ಟಾರ್ಗೆಟ್ ಮಾಡಿದ್ದರು. ‘ಕಾಗೆ ಕಕ್ಕ ಮಾಡಿಕೊಂಡು ಎಲ್ಲ ಕಡೆಗಳಲ್ಲೂ ಓಡಾಡುತ್ತಿದೆ’ ಎಂದು ಅವರು ಹೇಳಿದ್ದರು. ಈ ಬಾರಿಯ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:00 am, Mon, 29 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ