Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸ್ಟೈಲ್ ಕಾಪಿ ಮಾಡಿದ ರಕ್ಷಕ್ ಬುಲೆಟ್; ರಚಿತಾ ರಾಮ್ ಫುಲ್ ಫಿದಾ

ರಕ್ಷಕ್ ಬುಲೆಟ್, ಬುಲೆಟ್ ಪ್ರಕಾಶ್ ಅವರ ಪುತ್ರ, 'ಭರ್ಜರಿ ಬ್ಯಾಚುಲರ್ಸ್ ಸೀಸನ್ 2' ರಲ್ಲಿ ದರ್ಶನ್ ಅವರ 'ಬುಲ್ ಬುಲ್' ಸಿನಿಮಾದ ಶೈಲಿಯನ್ನು ಅನುಕರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ರಚಿತಾ ರಾಮ್ ಅವರನ್ನು ಸಹ ಖುಷಿಪಡಿಸಿದೆ. ರಕ್ಷಕ್ ತಮ್ಮ ತಂದೆಯನ್ನು ಕಳೆದುಕೊಂಡ ಬೇಸರವನ್ನು ಹಂಚಿಕೊಂಡಿದ್ದಾರೆ, ತಂದೆ ತಮ್ಮ ನಟನೆಯನ್ನು ನೋಡದಿರುವುದು ಅವರಿಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

ದರ್ಶನ್ ಸ್ಟೈಲ್ ಕಾಪಿ ಮಾಡಿದ ರಕ್ಷಕ್ ಬುಲೆಟ್; ರಚಿತಾ ರಾಮ್ ಫುಲ್ ಫಿದಾ
ದರ್ಶನ್ ಸ್ಟೈಲ್ ಕಾಪಿ ಮಾಡಿದ ರಕ್ಷಕ್ ಬುಲೆಟ್; ರಚಿತಾ ರಾಮ್ ಫುಲ್ ಫಿದಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 12, 2025 | 8:11 AM

ನಟ ದರ್ಶನ್ ಅವರು ‘ಬುಲ್ ಬುಲ್’ ಸಿನಿಮಾ ಮಾಡಿದ್ದರು. ಈ ಚಿತ್ರದಲ್ಲಿ ರಚಿತಾ ರಾಮ್ (Rachita Ram) ಅವರು ದರ್ಶನ್​ಗೆ ಜೊತೆಯಾಗಿದ್ದರು. ಈ ಚಿತ್ರ ರಚಿತಾ ರಾಮ್ ಪಾಲಿಗೆ ಈಗಲೂ ವಿಶೇಷ. ಈಗ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ದರ್ಶನ್ ಅವರ ಸ್ಟೈಲ್​ನ ರಕ್ಷಕ್ ಬುಲೆಟ್ ಅವರು ಕಾಪಿ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಕ್ಷಕ್ ಬುಲೆಟ್ ಅವರು ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ. ಈ ಕಾರಣಕ್ಕೆ ಚಿತ್ರರಂಗದಲ್ಲಿ ಅವರಿಗೆ ಅವಕಾಶ ಸಿಗುತ್ತಿದೆ. ಆದರೆ ಅವರು ನಡೆದುಕೊಳ್ಳುವ ರೀತಿಗೆ ಅನೇಕ ಬಾರಿ ಟ್ರೋಲ್ ಆಗಿದ್ದೂ ಇದೆ. ರಕ್ಷಕ್ ಬುಲೆಟ್ ಅವರು ತಮ್ಮ ಇಮೇಜ್​ನ ಪಾಸಿಟಿವ್ ಆಗಿ ಬದಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗುತ್ತಿಲ್ಲ. ಈಗ ರಕ್ಷಕ್ ಬುಲೆಟ್ ಅವರು ದರ್ಶನ್ ಸ್ಟೈಲ್​ನ ಯಥಾವತ್ತು ಕಾಪಿ ಮಾಡಿದ್ದಾರೆ.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ
View this post on Instagram

A post shared by Zee Kannada (@zeekannada)

ರಕ್ಷಕ್ ಬುಲೆಟ್ ಹಾಗೂ ರಮೋಲಾ ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಒಂದಾಗಿದ್ದಾರೆ. ದರ್ಶನ್ ಸಿನಿಮಾದ ದೃಶ್ಯವನ್ನು ಮರುಸೃಷ್ಟಿ ಮಾಡಲಾಗಿದೆ. ಈ ದೃಶ್ಯ ನೋಡಿ ರಚಿತಾ ರಾಮ್ ಖುಷಿಪಟ್ಟರು. ‘ಸತ್ಯವಾಗಲೂ ಸಿನಿಮಾ ನೋಡಿದ ಹಾಗೆಯೇ ಇತ್ತು’ ಎಂದು ಬಾಯ್ತುಂಬ ಹೊಗಳಿದರು ರಚಿತಾ ರಾಮ್. ಖುಷಿ ಆಯ್ತು ಎಂದು ರವಿಚಂದ್ರನ್ ಕೂಡ ಹೇಳಿದರು.

ಇದನ್ನೂ ಓದಿ: ರಕ್ಷಕ್​ಗೆ ಯಾಕೆ ಹೀಗೆಲ್ಲ ಆಗುತ್ತೆ? ವೇದಿಕೆ ಮೇಲೆ ಮುಜುಗರ ಅನುಭವಿಸಿದ ನಟ

ರಕ್ಷಕ್ ಹೀರೋ ಆಗುವ ಮೊದಲೇ ಬುಲೆಟ್ ಪ್ರಕಾಶ್ ನಿಧನ ಹೊಂದಿದರು. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ತಂದೆ ನನ್ನ ನಟನೆ ನೋಡಿಲ್ಲವಲ್ಲ ಎನ್ನುವ ಕೊರಗು ಕೊನೆಯವರೆಗೂ ಅವರಿಗೆ ಇರಲಿದೆ. ‘ಈ ಸ್ಟುಡಿಯೋಗೆ ಅಪ್ಪನ ಜೊತೆ ಬರುತ್ತಿದ್ದೆ. ಆದರೆ, ನನ್ನ ಸ್ಟೇಜ್ ಪರ್ಫಾರ್ಮೆನ್ಸ್ ನೋಡೋಕೆ ಅವರು ಇಲ್ಲ ಎಂಬ ವಿಚಾರ ನನಗೆ ದುಃಖ ತಂದಿದೆ’ ಎಂದು ಬೇಸರದಿಂದ ರಕ್ಷಕ್ ಹೇಳಿಕೊಂಡು ಕಣ್ಣೀರು ಹಾಕಿದರು. ಅವರನ್ನು ಸಮಾಧಾನ ಮಾಡುವ ಕೆಲಸವೂ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ