Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಕ್​ಗೆ ಯಾಕೆ ಹೀಗೆಲ್ಲ ಆಗುತ್ತೆ? ವೇದಿಕೆ ಮೇಲೆ ಮುಜುಗರ ಅನುಭವಿಸಿದ ನಟ

ಜೀ ಕನ್ನಡದ ರಿಯಾಲಿಟಿ ಶೋ 'ಭರ್ಜರಿ ಬ್ಯಾಚುಲರ್ಸ್ 2' ರಲ್ಲಿ ರಕ್ಷಕ್ ಬುಲೆಟ್ ಅವರ ಹೆಸರನ್ನು ರಮೋಲಾ ತಪ್ಪಾಗಿ 'ರಕ್ಷಿತ್' ಎಂದು ಕರೆದಿದ್ದಾರೆ. ಇದರಿಂದ ರಕ್ಷಕ್ ಮುಜುಗರಕ್ಕೀಡಾಗಿದ್ದಾರೆ. ಆ್ಯಂಕರ್ ನಿರಂಜನ್ ದೇಶಪಾಂಡೆ ಅವರು ರಮೋಲಾ ತಪ್ಪನ್ನು ಸರಿಪಡಿಸಿದರು. ಈ ಶೋನಲ್ಲಿ ರಕ್ಷಕ್ ಗ್ರೂಮಿಂಗ್ ಸೆಷನ್‌ನಲ್ಲೂ ಭಾಗವಹಿಸಿ, ಹೊಸ ಗೆಟಪ್​ನಲ್ಲಿ ಬಂದಿದ್ದಾರೆ.

ರಕ್ಷಕ್​ಗೆ ಯಾಕೆ ಹೀಗೆಲ್ಲ ಆಗುತ್ತೆ? ವೇದಿಕೆ ಮೇಲೆ ಮುಜುಗರ ಅನುಭವಿಸಿದ ನಟ
ರಕ್ಷಕ್ ಬುಲೆಟ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 01, 2025 | 8:03 AM

ರಕ್ಷಕ್ ಬುಲೆಟ್ ಅವರು ಹಿರಿಯ ನಟ, ಕಾಮಿಡಿಯನ್ ಬುಲೆಟ್ ಪ್ರಕಾಶ್ ಅವರ ಮಗ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ರಕ್ಷಕ್ ಅವರು ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ಸಾಕಷ್ಟು ಟ್ರೋಲ್ ಕೂಡ ಆಗಿದ್ದಾರೆ. ಇದಕ್ಕೆ ಕಾರಣ ಆಗೋದು ಅವರ ನಡೆ. ಸುಖಾಸುಮ್ಮನೆ ಬಿಲ್ಡಪ್ ಕೊಡೋಕೆ ಹೋಗಿ ಅವರು ಟೀಕೆ ಎದುರಿಸಿದ ಉದಾಹರಣೆಯೂ ಇದೆ. ಈಗ ಜೀ ಕನ್ನಡ ವೇದಿಕೆ ಮೇಲೆ ಅವರಿಗೆ ಮುಜುಗರ ಆಗುವಂಥ ಘಟನೆಯೊಂದು ನಡೆದಿದೆ.

ಜೀ ಕನ್ನಡದಲ್ಲಿ ‘ಭರ್ಜರಿ ಬ್ಯಾಚುಲರ್ಸ್’ ಹೆಸರಿನ ರಿಯಾಲಿಟಿ ಶೋನ ಎರಡನೇ ಸೀಸನ್ ಆರಂಭ ಆಗಿದೆ. ಇದರಲ್ಲಿ ಡ್ರೋನ್ ಪ್ರತಾಪ್, ಪವಿ ಪೂವಪ್ಪ, ರಕ್ಷಕ್ ಬುಲೆಟ್ ಮೊದಲಾದವರು ಭಾಗಿ ಆಗಿದ್ದಾರೆ. ರಕ್ಷಕ್ ಬುಲೆಟ್ ಅವರಿಗೆ ರಮೋಲಾ ಜೊತೆಯಾಗಿದ್ದಾರೆ. ಅವರು ವೇದಿಕೆ ಮೇಲೆ ರಕ್ಷಕ್ ಹೆಸರನ್ನು ತಪ್ಪಾಗಿ ಹೇಳಿದ್ದಾರೆ.

ಇದನ್ನೂ ಓದಿ
Image
ಒಂದೇ ವಾರಕ್ಕೆ ಬೇರೆ ಭಾಷೆಗೆ ರಿಮೇಕ್ ಆಯ್ತು ಸೂಪರ್ ಹಿಟ್ ಧಾರಾವಾಹಿ
Image
ಮೇಕಿಂಗ್ ಮೂಲಕ ಗಮನ ಸೆಳೆದ ನಾ ನಿನ್ನ ಬಿಡಲಾರೆ ಧಾರಾವಾಹಿ; ಸಿನಿಮಾ ಗುಣಮಟ್ಟ
Image
ಸುದೀಪ್ ‘ಬಿಗ್ ಬಾಸ್’ ಕಂಬ್ಯಾಕ್​ಗೆ ಸಿಕ್ತು ಭರ್ಜರಿ ಟಿಆರ್​ಪಿ
Image
ಅಪಘಾತದಲ್ಲಿ ಸ್ನೇಹಾ ಮರಣ; ಕೊನೆ ಆಯಿತು ಸಂಜನಾ ಬುರ್ಲಿ ಪಾತ್ರ

ರಮೋಲಾಗೆ ರಕ್ಷಕ್ ಜೊತೆಯಾಗಿದ್ದಾರೆ. ರಕ್ಷಕ್ ಎನ್ನುವ ಬದಲು ರಕ್ಷಿತ್ ಎಂದು ಕರೆದಿದ್ದಾರೆ ರಮೋಲಾ. ಆಗ ಆ್ಯಂಕರ್ ನಿರಂಜನ್ ದೇಶಪಾಂಡೆ ಅವರು ರಮೋಲಾ ತಪ್ಪನ್ನು ಹೇಳಿದರು. ಇದರಿಂದ ರಕ್ಷಕ್ ಅವರು ಮುಜುಗರಕ್ಕೆ ಒಳಗಾದರು. ನನ್ನ ಬಗ್ಗೆ ಎಲ್ಲರಿಗೂ ಗೊತ್ತು, ನಾನು ಎಂದರೆ ಇಡೀ ಕರ್ನಾಟಕ ಗುರುತಿಸುತ್ತದೆ ಎಂದೆಲ್ಲ ರಕ್ಷಕ್ ಅವರು ಈ ಮೊದಲು ಹೇಳಿಕೊಂಡಿದ್ದರು. ಆದರೆ, ಅವರ ಹೆಸರನ್ನು ಈಗ ತಪ್ಪಾಗಿ ಹೇಳಲಾಗಿದೆ.

View this post on Instagram

A post shared by Zee Kannada (@zeekannada)

ರಕ್ಷಕ್ ಅವರಿಗೆ ಗ್ರೂಮಿಂಗ್ ಸೆಷನ್ ಕೂಡ ನಡೆದಿದೆ. ಈ ಮೂಲಕ ರಕ್ಷಕ್ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ಷಕ್ ಅವರ ಬಗ್ಗೆ ಎಷ್ಟೇ ಟ್ರೋಲ್ ಆದರೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ತಮ್ಮ ಕೆಲಸ ಮುಂದುವರಿಸಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಮಾಡೋದಾಗಿಯೂ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್

ಇನ್ನು, ‘ಭರ್ಜರಿ ಬ್ಯಾಚುಲರ್ಸ್ 2’ ಬಗ್ಗೆ ಹೇಳೋದಾದರೆ ಕೆಲ ವರ್ಷಗಳ ಹಿಂದೆ ‘ಭರ್ಜರಿ ಬ್ಯಾಚುಲರ್ಸ್’ ಬಂದು ಯಶಸ್ಸು ಕಂಡಿತ್ತು. ಈ ಕಾರಣಕ್ಕೆ ಇದಕ್ಕೆ ಎರಡನೇ ಸೀಸನ್ ಆರಂಭಿಸಲಾಗಿದೆ. ರಚಿತಾ ರಾಮ್ ಹಾಗೂ ರವಿಚಂದ್ರನ್ ಅವರು ಇದಕ್ಕೆ ಜಡ್ಜ್ ಆಗಿದ್ದಾರೆ. ಈ ಶೋ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ