AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಾಪ್​ಗೆ ಕೊಡ್ತೀನಿ ಇಷ್ಟ್ರಲ್ಲೇ’ ಎಂದಿದ್ದ ರಕ್ಷಕ್; ಹೊಡೆದು ಹೊರಗೆ ಹೋಗೋ ಪ್ಲಾನ್​ನಲ್ಲಿದ್ರಾ?

ಪ್ರತಾಪ್ ತಮಗೆ ಕೆಲಸ ಹೇಳಿದರು ಎಂದು ರಕ್ಷಕ್​ ಕೋಪಕ್ಕೆ ಮಾಡಿಕೊಂಡಿದ್ದರು. ‘ಬೇಜಾನ್ ಕೊಬ್ಬು ತೋರಿಸ್ತಾ ಇದಾನೆ. ಅವನಿಗೆ ಇಷ್ಟ್ರಲ್ಲೇ ಕೊಡ್ತೀನಿ’ ಎಂದಿದ್ದರು ರಕ್ಷಕ್.

‘ಪ್ರತಾಪ್​ಗೆ ಕೊಡ್ತೀನಿ ಇಷ್ಟ್ರಲ್ಲೇ’ ಎಂದಿದ್ದ ರಕ್ಷಕ್; ಹೊಡೆದು ಹೊರಗೆ ಹೋಗೋ ಪ್ಲಾನ್​ನಲ್ಲಿದ್ರಾ?
ಡ್ರೋನ್ ಪ್ರತಾಪ್-ರಕ್ಷಕ್
ರಾಜೇಶ್ ದುಗ್ಗುಮನೆ
|

Updated on:Nov 06, 2023 | 7:51 AM

Share

ಬುಲೆಟ್ ಪ್ರಕಾಶ್ ಮಗ ರಕ್ಷಕ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ. ಅವರು ಹೊರ ಹೋಗಿದ್ದು ಬಹುತೇಕರಿಗೆ ಖುಷಿ ನೀಡಿದೆ. ಅವರು ದೊಡ್ಮನೆಯಲ್ಲಿ ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಇಷ್ಟವಾಗುತ್ತಿರಲಿಲ್ಲ. ಡ್ರೋನ್ ಪ್ರತಾಪ್​ನ (Drone Prathap) ಕಂಡರೆ ಅವರಿಗೆ ಸಿಟ್ಟಿತ್ತು. ಅವರಿಗೆ ಹೊಡೆಯುವ ಆಲೋಚನೆಯಲ್ಲೂ ರಕ್ಷಕ್ ಇದ್ದರು ಎನ್ನಲಾಗುತ್ತಿದೆ. ಅವರು ಆಡಿದ ಮಾತುಗಳು ಇದಕ್ಕೆ ಸಾಕ್ಷಿ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರು ಹೊರಹೋಗಿದ್ದೇ ಒಳ್ಳೆಯದಾಯಿತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಶುಕ್ರವಾರ (ನವೆಂಬರ್ 3) ಪ್ರತಾಪ್ ಅವರು ಕಿಚನ್​​ನಲ್ಲಿ ಆಡಿದ ಮಾತು ಚರ್ಚೆ ಹುಟ್ಟುಹಾಕಿತ್ತು. ಪ್ರತಾಪ್ ತಮಗೆ ಕೆಲಸ ಹೇಳಿದರು ಎಂದು ರಕ್ಷಕ್​ ಕೋಪಕ್ಕೆ ಮಾಡಿಕೊಂಡಿದ್ದರು. ‘ಬೇಜಾನ್ ಕೊಬ್ಬು ತೋರಿಸ್ತಾ ಇದಾನೆ. ಅವನಿಗೆ ಇಷ್ಟ್ರಲ್ಲೇ ಕೊಡ್ತೀನಿ’ ಎಂದಿದ್ದರು ರಕ್ಷಕ್. ಈ ಮಾತನ್ನು ವೀಕ್ಷಕರು ಗಮನಿಸಿದ್ದಾರೆ. ಶನಿವಾರದ (ನವೆಂಬರ್ 7) ಎಪಿಸೋಡ್ ಮುಗಿದ ಬಳಿಕವೂ ಅವರು ಇದೇ ರೀತಿಯ ಮಾತನ್ನು ಹೇಳಿದ್ದಾರೆ.

ತುಕಾಲಿ ಸಂತೋಷ್, ರಕ್ಷಕ್, ವಿನಯ್ ಮೊದಲಾದವರಿಗೆ ಕ್ಲಾಸ್ ತೆಗೆದುಕೊಂಡಿದ್ದರು ಸುದೀಪ್. ಇದರಿಂದ ರಕ್ಷಕ್​ಗೆ ಏನು ಮಾಡಬೇಕು ಎನ್ನುವುದೇ ತಿಳಿದಿಲ್ಲ. ಹೀಗಾಗಿ, ಈ ಬಗ್ಗೆ ಅವರು ಸಂತೋಷ್ ಬಳಿ ಮಾತನಾಡಿದ್ದರು. ‘ನನಗೆ ಏನು ಮಾಡಬೇಕು ಅನ್ನೋದೆ ತಿಳಿಯುತ್ತಿಲ್ಲ. ಏನು ಮಾಡೋಣ ಹೇಳಿ. ಎಲ್ಲರ ಜೊತೆ ಮಾತಾಡುತ್ತಾ ಇದ್ದೀನಿ, ಎಲ್ಲರ ಜೊತೆ ಚೆನ್ನಾಗಿ ಬೆರೆಯುತ್ತಿದ್ದೇನೆ. ಆದರೂ ಅದು ಸರಿ ಆಗುತ್ತಿಲ್ಲ. ಯಾರಿಗಾದರೂ ಹೊಡೆದು ಹೊರಗೆ ಹೋಗೋಣವೇ’ ಎಂದು ಸಂತೋಷ್ ಬಳಿ ಕೇಳಿದ್ದರು.

ಇದನ್ನೂ ಓದಿ: ವಿನಯ್ ಅಲ್ಲ, ಸಂಗೀತಾ ಬಿಗ್ ಬಾಸ್​ನಲ್ಲಿ ಅತಿ ಹೆಚ್ಚು ಹೇಟ್ ಮಾಡುವ ಸ್ಪರ್ಧಿ ಇವರೇ

ಬಿಗ್ ಬಾಸ್ ಮನೆಯಿಂದ ರಕ್ಷಕ್ ಔಟ್ ಆದ ಬಳಿಕ ಈ ವಿಚಾರ ಚರ್ಚೆಗೆ ಬರುತ್ತಿದೆ. ಅವರು ಔಟ್ ಆಗಿದ್ದು ಸರಿ ಇದೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಎರಡು ಗುಂಪು ರೂಪುಗೊಂಡಿದೆ. ವಿನಯ್ ಗುಂಪಲ್ಲಿ ರಕ್ಷಕ್ ಗುರುತಿಸಿಕೊಂಡಿದ್ದರು. ಈ ಗುಂಪಲ್ಲಿ ಒಬ್ಬರು ಔಟ್ ಆಗಿದ್ದು ಅನೇಕರಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Mon, 6 November 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ