AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSE Side B: ‘ಜೀ ಕನ್ನಡ’ದಲ್ಲಿ ಬರ್ತಿದೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’

‘ಸಪ್ತ ಸಾಗರದಾಚೆ ಎಲ್ಲೋ: ಸೈಡ್​ ಬಿ’ ಸಿನಿಮಾ ಇದೇ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರಕ್ಕೆ ಸಜ್ಜಾಗಿದೆ. ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್​, ಚೈತ್ರಾ ಆಚಾರ್​, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುವ ಈ ಚಿತ್ರವು ಭಾನುವಾರ ಸಂಜೆ 7.30ಕ್ಕೆ ‘ಜೀ ಕನ್ನಡ’ ವಾಹಿನಿಯಲ್ಲಿ ಬಿತ್ತರ ಆಗಲಿದೆ.

SSE Side B: ‘ಜೀ ಕನ್ನಡ’ದಲ್ಲಿ ಬರ್ತಿದೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on: Mar 22, 2024 | 8:42 PM

Share

ಹೇಮಂತ್​ ರಾವ್​ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು. ಬಳಿಕ ಸಿನಿಪ್ರಿಯರೆಲ್ಲ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ (Sapta Sagaradaache Ello Side B) ಸಿನಿಮಾ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದರು. ರಕ್ಷಿತ್​ ಶೆಟ್ಟಿ (Rakshit Shetty) ಅವರ ಅಭಿಮಾನಿಗಳ ನಿರೀಕ್ಷೆಯನ್ನು ‘SIDE B’ ಸಿನಿಮಾ ಸುಳ್ಳು ಮಾಡಲಿಲ್ಲ. ಸೈಡ್​ ಎ ರೀತಿಯೇ ಸೈಡ್​ ಬಿ ಕೂಡ ಪ್ರಶಂಸೆ ಗಿಟ್ಟಿಸಿತು. ಈಗ ಇದೇ ಮೊದಲ ಬಾರಿಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾ ಕಿರುತೆರೆಯಲ್ಲಿ ಪ್ರಸಾರಕ್ಕೆ ಸಜ್ಜಾಗಿದೆ. ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ.

ಹೊಸ ಸಿನಿಮಾಗಳು ಮೊದಲ ಬಾರಿ ಪ್ರಸಾರ ಆದಾಗ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಸಿಗುತ್ತದೆ. ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರವನ್ನು ಮಿಸ್​ ಮಾಡಿಕೊಂಡವರು ಈಗ ‘ಜೀ ಕನ್ನಡ’ದಲ್ಲಿ ವೀಕ್ಷಿಸುವ ಸಮಯ ಬಂದಿದೆ. ಇದೇ ಭಾನುವಾರ, ಅಂದರೆ ಮಾರ್ಚ್ 24ರಂದು ಸಂಜೆ 7.30 ಕ್ಕೆ ಈ ಸಿನಿಮಾದ ವರ್ಲ್ಡ್​ ಟಿಲಿವಿಷನ್​ ಪ್ರೀಮಿಯರ್​ ಆಗಲಿದೆ. ಕಿರುತೆರೆಯಲ್ಲಿ ಸಿನಿಮಾ ಕಣ್ತುಂಬಿಕೊಳ್ಳಲು ರಕ್ಷಿತ್​ ಶೆಟ್ಟಿ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಶಿವರಾತ್ರಿ ಹಬ್ಬದಂದು ಸಿಂಪಲ್​ ಸುನಿ, ರಕ್ಷಿತ್​ ಶೆಟ್ಟಿಗೆ ಎರಡನೇ ಹುಟ್ಟು ದಿನ

ಹಲವು ಕಾರಣಗಳಿಂದ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾ ಮೆಚ್ಚುಗೆ ಗಳಿಸಿದೆ. ರಕ್ಷಿತ್ ಶೆಟ್ಟಿ ಅವರು ಮುಖ್ಯ ಭೂಮಿಕೆ ನಿಭಾಯಿಸುವುದರ ಜೊತೆಗೆ ಈ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ. ಚಿತ್ರದ ಎಲ್ಲ ವಿಭಾಗಗಳಿಗೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಚರಣ್ ರಾಜ್ ಅವರ ಸಂಗೀತ, ಅದ್ವೈತ್​ ಗುರುಮೂರ್ತಿ ಅವರ ಛಾಯಾಗ್ರಹಣ ಹೈಲೈಟ್​ ಆಗಿದೆ. ರಕ್ಷಿತ್ ಶೆಟ್ಟಿ, ಚೈತ್ರಾ ಜೆ. ಆಚಾರ್​, ರುಕ್ಮಿಣಿ ವಸಂತ್​ ಅವರ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಿರುತೆರೆ ಪ್ರೇಕ್ಷಕರಿಗೆ ಈ ಸಿನಿಮಾವನ್ನು ತೋರಿಸಲು ‘ಜೀ ಕನ್ನಡ’ ವಾಹಿನಿ ಸಜ್ಜಾಗಿದೆ.

View this post on Instagram

A post shared by Zee Kannada (@zeekannada)

ಕನ್ನಡ ಕಿರುತೆರೆಯ ಪ್ರಮುಖ ವಾಹಿನಿಗಳಲ್ಲಿ ಒಂದಾದ ‘ಜೀ ಕನ್ನಡ’ದಲ್ಲಿ ಅನೇಕ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳು ಜನಮನ ಗೆದ್ದಿವೆ. ಅಷ್ಟೇ ಅಲ್ಲದೇ, ಸೂಪರ್​ ಹಿಟ್​ ಸಿನಿಮಾಗಳನ್ನು ಪ್ರಸಾರ ಮಾಡುವ ಮೂಲಕವೂ ಈ ವಾಹಿನಿ ಮನರಂಜನೆ ನೀಡಿದೆ. ಈಗಾಗಲೇ ‘ಕೆಜಿಎಫ್’, ‘ಗರುಡ ಗಮನ ವೃಷಭ ವಾಹನ’, ‘ವಿಕ್ರಾಂತ್ ರೋಣ’, ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಮುಂತಾದ ಸಿನಿಮಾಗಳನ್ನು ಪ್ರಸಾರ ಮಾಡಿದ ಖ್ಯಾತಿ ‘ಜೀ ಕನ್ನಡ’ ವಾಹಿನಿಯದ್ದು. ಈಗ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರವನ್ನು ಪ್ರಸಾರ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​