AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಕ್ಷಕರ ಒತ್ತಾಯಕ್ಕೆ ಮಣಿದ ಬಿಗ್​​ಬಾಸ್, ಮತ್ತೆ ಬಿಗ್​​ಬಾಸ್​​ ಮನೆಗೆ ಮರಳಿದ ರಕ್ಷಿತಾ ಶೆಟ್ಟಿ

Bigg Boss Kannada Season 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಓಪನಿಂಗ್ ದಿನದಂದು ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ ರಕ್ಷಿತಾ ಶೆಟ್ಟಿಯನ್ನು 24 ಗಂಟೆ ಕಳೆಯುವುದರೊಳಗೆ ಎಲಿಮಿನೇಷನ್ ಮಾಡಲಾಗಿತ್ತು. ಆದರೆ ಇದೀಗ ಪ್ರೇಕ್ಷಕರ ಒತ್ತಾಯದ ಮೇರೆಗೆ ರಕ್ಷಿತಾರನ್ನು ಮತ್ತೆ ಮನೆಯ ಒಳಗೆ ಸೇರಿಸಿಕೊಳ್ಳಲಾಗಿದೆ. ಇಲ್ಲಿದೆ ನೋಡಿ ವಿಡಿಯೋ...

ಪ್ರೇಕ್ಷಕರ ಒತ್ತಾಯಕ್ಕೆ ಮಣಿದ ಬಿಗ್​​ಬಾಸ್, ಮತ್ತೆ ಬಿಗ್​​ಬಾಸ್​​ ಮನೆಗೆ ಮರಳಿದ ರಕ್ಷಿತಾ ಶೆಟ್ಟಿ
Rakshita Shetty
ಮಂಜುನಾಥ ಸಿ.
|

Updated on:Oct 04, 2025 | 4:35 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭವಾಗಿ ವಾರವಾಗಿದೆ. ಕಳೆದ ಭಾನುವಾರ ಶೋ ಪ್ರಾರಂಭವಾಗಿತ್ತು. 19 ಮಂದಿ ಸದಸ್ಯರು ಮನೆ ಸೇರಿದ್ದರು. ಆದರೆ ಶೋ ಶುರುವಾಗಿ 24 ಗಂಟೆಗಳಲ್ಲೇ ಒಬ್ಬರು ಮನೆಯಿಂದ ಎಲಿಮಿನೇಟ್ ಆಗಿಬಿಟ್ಟರು. ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಏಕಾ ಏಕಿ ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ ಬಿಗ್​​ಬಾಸ್ ಇತಿಹಾಸದಲ್ಲಿಯೇ ಇಷ್ಟು ತ್ವರಿತವಾಗಿ ಯಾರೂ ಎಲಿಮಿನೇಟ್ ಆಗಿರಲಿಲ್ಲ. ರಕ್ಷಿತಾರ ಆಟವನ್ನು ನೋಡದೆ ಅವರನ್ನು ಹೊರಗೆ ಕಳಿಸಿದರ ಬಗ್ಗೆ ಪ್ರೇಕ್ಷಕರು ಬೇಸರ ವ್ಯಕ್ತಪಡಿಸಿದ್ದರು. ಬಿಗ್​​ಬಾಸ್ ಅನ್ನು ಟೀಕೆ ಸಹ ಮಾಡಲಾಗಿತ್ತು. ಪ್ರೇಕ್ಷಕರ ಒತ್ತಾಯಕ್ಕೆ ಮಣಿದ ಬಿಗ್​​ಬಾಸ್ ಇದೀಗ ರಕ್ಷಿತಾ ಶೆಟ್ಟಿಯವರನ್ನು ಮರಳಿ ಮನೆಗೆ ಕರೆತಂದಿದ್ದಾರೆ.

ಇಂದು ಸಂಜೆ ಬಿಡುಗಡೆ ಆಗಿರುವ ಬಿಗ್​​ಬಾಸ್ ಪ್ರೋಮೊನಲ್ಲಿ ರಕ್ಷಿತಾ ಶೆಟ್ಟಿ ಅವರು ಬಿಗ್​​ಬಾಸ್​​ಗೆ ಮರಳಿರುವ ದೃಶ್ಯಗಳು ಇವೆ. ಸುದೀಪ್ ಅವರು ರಕ್ಷಿತಾ ಶೆಟ್ಟಿ ಅವರನ್ನು ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ್ದಾರೆ. ಏನು ಹಠಾತ್ತನೆ ಹೊರಗೆ ಕಳಿಸಿಬಿಟ್ಟರಲ್ಲ ಎಂಬ ಸುದೀಪ್ ಅವರ ಪ್ರಶ್ನೆಗೆ, ಹೌದು ಸರ್, ಎಲ್ಲರೂ ಸೇರಿ ಹೊರಗೆ ಹಾಕಿಬಿಟ್ಟರು. ನಾನು ಹೋಗುವಾಗ ಎಲ್ಲರೂ ಬಂದು ಸಮಾಧಾನ ಮಾಡಿದರು ಆದರೆ ಯಾರೂ ಸಹ ನನ್ನ ಪರವಾಗಿ ದಿಟ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈಗ ಒಳಗೆ ಹೋಗಿ ಕೇಳುತ್ತೀನಿ, ಯಾಕೆ ಹಾಗೆ ಮಾಡಿದಿರಿ ಎಂದು ಪ್ರಶ್ನೆ ಮಾಡುತ್ತೀನಿ, ನನ್ನ ಆಟ ನೋಡದೇ ಏಕೆ ಹೀಗೆ ಮಾಡಿದಿರಿ ಎಂದು ಪ್ರಶ್ನೆ ಮಾಡುತ್ತೀನಿ ಎಂದು ಕೇಳುತ್ತೀನಿ, ಚೆನ್ನಾಗಿ ಆಡುತ್ತೀನಿ’ ಎಂದಿದ್ದಾರೆ.

ಇದನ್ನೂ ಓದಿ:‘ಫ್ಲೂಕಲ್ಲಿ ಫೇಮಸ್ ಆದವರು’ ಎಂಬ ಜಾನ್ವಿ ಮಾತಿಗೆ ರಕ್ಷಿತಾ ಶೆಟ್ಟಿ ಖಡಕ್ ಉತ್ತರ

ಯೂಟ್ಯೂಬರ್ ಆಗಿರುವ ಮುಂಬೈನ ಆದರೆ ಉಡುಪಿ ಮೂಲದ ರಕ್ಷಿತಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮಾತುಗಳಿಂದ ಅಡುಗೆ ರೆಸಿಪಿಗಳಿಂದಲೂ ಜನಪ್ರಿಯರು. ಆದರೆ ಅವರ ಆಟವನ್ನು ಸಹ ನೋಡದೆ ಅವರನನ್ನು ಹೊರಗೆ ಹಾಕಿದ್ದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ರಕ್ಷಿತಾ ಸಹ ವಿಡಿಯೋ ಒಂದರಲ್ಲಿ ತಮ್ಮ ಬೇಸರ ಹೊರಹಾಕಿದ್ದರು. ರಕ್ಷಿತಾ ಅವರು ಕೇವಲ ತಮ್ಮ ಮಾತುಗಳಿಂದ ಮಾತ್ರವಲ್ಲ ಅವರು ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿತ್ತು. ಇದೀಗ ನೆಟ್ಟಿಗರ ಒತ್ತಾಯಕ್ಕೆ ಮಣಿದು ಬಿಗ್​​ಬಾಸ್ ರಕ್ಷಿತಾರಿಗೆ ಮತ್ತೊಂದು ಅವಕಾಶ ನೀಡಿದೆ.

ವಿಶೇಷವೆಂದರೆ ಈ ವಾರ ಬಿಗ್​​ಬಾಸ್ ಮನೆಯಿಂದ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಇಬ್ಬರ ಎಲಿಮಿನೇಷನ್​​ನಿಂದ ತೆರವಾಗುವ ಜಾಗಕ್ಕೆ ಈಗ ರಕ್ಷಿತಾ ಶೆಟ್ಟಿ ಹೋಗಿ ಸೇರಲಿದ್ದಾರೆ. ಅಲ್ಲಿಗೆ ಮತ್ತೆ ಮನೆ ಸದಸ್ಯರ ಸಂಖ್ಯೆ ಹದಿನೆಂಟು ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sat, 4 October 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!