AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ, ಬಗ್ಗಲೂ ಇಲ್ಲ

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ಗೆ ಬಂದ ವಾರವೇ ಹೊರ ಹೋದರು. ‘ಸೋಶಿಯಲ್ ಮೀಡಿಯಾದಲ್ಲಿ ತಪ್ಪು ಮಾತನಾಡಿ ಫ್ಲೂಕ್​ನಲ್ಲಿ ಫೇಮಸ್ ಆದವರು’ ಎಂಬ ಪಟ್ಟವನ್ನು ರಕ್ಷಿತಾ ಶೆಟ್ಟಿಗೆ ಜಾನ್ವಿ ಕಟ್ಟಿದ್ದರು. ಈ ಮಾತು ರಕ್ಷಿತಾಗೆ ಸಾಕಷ್ಟು ಬೇಸರ ಮೂಡಿಸಿದೆ. ಈ ಕಾರಣದಿಂದಲೇ ಜಾನ್ವಿ ಹೇಳಿದ ಮಾತಿಗೆ ಸರಿಯಾಗಿ ತಿರುಗೇಟು ನೀಡುತ್ತಿದ್ದಾರೆ.

ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ, ಬಗ್ಗಲೂ ಇಲ್ಲ
ರಕ್ಷಿತಾ-ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 17, 2025 | 10:12 AM

Share

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಇದನ್ನು ನೋಡಿ ಅಶ್ವಿನಿ ಹೊಟ್ಟೆ ಉರಿದುಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಈಗ ರಕ್ಷಿತಾ ಅವರನ್ನು ತುಳಿಯಲು ಜಾನ್ವಿ ಹಾಗೂ ಅಶ್ವಿನಿ ಪಣ ತೊಟ್ಟಂತೆ ಇದೆ. ರಕ್ಷಿತಾ ಶೆಟ್ಟಿ ಹೇಗೇಗೋ ಆಡುತ್ತಿದ್ದಾರೆ ಎಂದು ಅವರ ವಿರುದ್ಧ ಕಥೆ ಕಟ್ಟಲು ಮುಂದಾಗಿದ್ದಾರೆ. ಈಗ ಇವರ ವಿರುದ್ಧ ರಕ್ಷಿತಾ ಶೆಟ್ಟಿ ತಿರುಗಿಬಿದ್ದಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ಗೆ ಬಂದ ವಾರವೇ ಹೊರ ಹೋದರು. ‘ಸೋಶಿಯಲ್ ಮೀಡಿಯಾದಲ್ಲಿ ತಪ್ಪು ಮಾತನಾಡಿ ಫ್ಲೂಕ್​ನಲ್ಲಿ ಫೇಮಸ್ ಆದವರು’ ಎಂಬ ಪಟ್ಟವನ್ನು ರಕ್ಷಿತಾ ಶೆಟ್ಟಿಗೆ ಜಾನ್ವಿ ಕಟ್ಟಿದ್ದರು. ಈ ಮಾತು ರಕ್ಷಿತಾಗೆ ಸಾಕಷ್ಟು ಬೇಸರ ಮೂಡಿಸಿದೆ. ಈ ಕಾರಣದಿಂದಲೇ ಜಾನ್ವಿ ಹೇಳಿದ ಮಾತಿಗೆ ಸರಿಯಾಗಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ
Image
ಸಪ್ತಪದಿ ತುಳಿಯುವಾಗಲೇ ಕರ್ಣನಿಗೆ ಗೊತ್ತಾಯ್ತು ನಿಧಿ ಪ್ರೆಗ್ನೆನ್ಸಿ ವಿಚಾರ
Image
ಬಕ್ರಾ ಮಾಡಲು ಬಂದ ಜಾನ್ವಿ-ಅಶ್ವಿನಿಗೆ ಮಣ್ಣು ಮುಕ್ಕಿಸಿದ ರಕ್ಷಿತಾ ಶೆಟ್ಟಿ
Image
ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್; ಆ ಇಬ್ಬರು ಔಟ್?

‘ರಾರಾ ಹಾಡಿಗೆ ರಕ್ಷಿತಾ ಡ್ಯಾನ್ಸ್ ಮಾಡಿದ್ದಾರೆ, ಆ ವೇಳೆ ಅವಳಿಗೆ ಈ ಕಡೆ ಗಮನವೇ ಇರಲಿಲ್ಲ’ ಎಂದು ಅಶ್ವಿನಿ ಎಲ್ಲರ ಎದುರು ಹೇಳಿದ್ದರು. ಆ ಬಳಿಕ ರಕ್ಷಿತಾ ಶೆಟ್ಟಿ ಅವರು ಈ ವಿಚಾರಕ್ಕೆ ಕಣ್ಣೀರು ಹಾಕಿದ್ದರು. ರಾತ್ರಿ ಇಡೀ ಗೆಜ್ಜೆ ಶಬ್ದ ಮಾಡಿ, ಈ ಆರೋಪವನ್ನು ರಕ್ಷಿತಾ ಮೇಲೆ ಎತ್ತಿ ಹಾಕಲು ಅವರು ಪ್ರಯತ್ನಿಸಿದ್ದರು. ಈಗ ಅಶ್ವಿನಿ ಹಾಗೂ ರಕ್ಷಿತಾ ಮಧ್ಯೆ ಮತ್ತೆ ಕಿತ್ತಾಟ ನಡೆದಿದೆ.

ಬಿಗ್ ಬಾಸ್ ಪ್ರೋಮೋ

ರಕ್ಷಿತಾ ಅತಿಯಾಗಿ ಆಡುತ್ತಿದ್ದಾಳೆ ಎಂದು ಜಾನ್ವಿಗೆ ಅನಿಸಿದೆ. ಈ ಬಗ್ಗೆ ಅಶ್ವಿನಿ ಹಾಗೂ ಜಾನ್ವಿ ಚರ್ಚೆ ಮಾಡಿದ್ದಾರೆ. ಆಗ ರಕ್ಷಿತಾ ಮೇಲೆ ಇಬ್ಬರೂ ಮುಗಿ ಬೀಳಲು ಪ್ರಯತ್ನಿಸಿದ್ದರು. ಇದಕ್ಕೆ ರಕ್ಷಿತಾ ಹೆದರಲೇ ಇಲ್ಲ. ‘ಮುಚ್ಕೊಂಡು ಹೋಗು’ ಎಂದು ಅಶ್ವಿನಿ ಹೇಳಿದರು. ‘ನೀವು ದೊಡ್ಡ ನಾಗವಲ್ಲಿ’ ಎಂದು ಜಾನ್ವಿಗೆ ರಕ್ಷಿತಾ ನೇರ ಮಾತುಗಳಲ್ಲಿ ಹೇಳಿದರು.

ಇದನ್ನೂ ಓದಿ: ಮಧ್ಯರಾತ್ರಿ ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ವಿಚಿತ್ರ ವರ್ತನೆ? ಎಲ್ಲರಿಗೂ ಭಯ

‘ಈ ನಾಟಕಗಳನ್ನು ಬಾತ್​ರೂಂನಲ್ಲಿ ಇಟ್ಟುಕೋ’ ಎಂದು ಅಶ್ವಿನಿ ಅವರು ರಕ್ಷಿತಾಗೆ ಹೇಳಿದರು. ‘ನಾನು ನೂರು ಬಾರಿ ಹೋಗ್ತೀನಿ. ನಿಮ್ಮ ಮನೆಯ ವಾಶ್​​ರೂಮ್ ಆ’ ಎಂದು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ರಕ್ಷಿತಾ ಗುಂಡಿಗೆ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:10 am, Fri, 17 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!