AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಬಗ್ಗೆ ಅಪಸ್ವರ ತೆಗೆದ ಕಾವ್ಯಾ; ಭುಗಿಲೆದ್ದ ಅಸಮಾಧಾನ

ಬಿಗ್ ಬಾಸ್ ಕನ್ನಡ 12ರ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ವಯಸ್ಸಿನ ಬಗ್ಗೆ ಕಾವ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾವ್ಯಾ ಮತ್ತು ಸ್ಪಂದನಾ ನಡುವಿನ ಚರ್ಚೆಯಲ್ಲಿ, ರಕ್ಷಿತಾ ತನ್ನ ವಯಸ್ಸನ್ನು ಉಪಯೋಗಿಸಿಕೊಂಡು ಅನುಕೂಲ ಪಡೆಯುತ್ತಿದ್ದಾರೆಂದು ಕಾವ್ಯಾ ಆರೋಪಿಸಿದ್ದಾರೆ.ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.

ರಕ್ಷಿತಾ ಬಗ್ಗೆ ಅಪಸ್ವರ ತೆಗೆದ ಕಾವ್ಯಾ; ಭುಗಿಲೆದ್ದ ಅಸಮಾಧಾನ
ರಕ್ಷಿತಾ-ಕಾವ್ಯಾ
ರಾಜೇಶ್ ದುಗ್ಗುಮನೆ
|

Updated on: Nov 15, 2025 | 7:58 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBk 12) ಕಿರಿಯ ಸ್ಪರ್ಧಿ ಎಂದರೆ ಅದು ರಕ್ಷಿತಾ ಶೆಟ್ಟಿ. ಅವರಿಗೆ ಇನ್ನೂ 24 ವರ್ಷ. ದೊಡ್ಮನೆಯಲ್ಲಿ ಅಷ್ಟು ಕಿರಿಯ ಸ್ಪರ್ಧಿಗಳು ಈ ಸೀಸನ್​ನಲ್ಲಿ ಯಾರೂ ಇಲ್ಲ. ಕೆಲವರು ಅವರ ವಯಸ್ಸು ಇನ್ನೂ ಸಣ್ಣದು ಎಂದು ಭಾವಿಸಿದ್ದರು. ಆದರೆ, ಕಳೆದ ವಾರ ವೇದಿಕೆ ಮೇಲೆ ಅವರು ತಮ್ಮ ವಯಸ್ಸನ್ನು ರಿವೀಲ್ ಮಾಡಿದರು. ಈಗ ಕಾವ್ಯಾ ಅವರು ರಕ್ಷಿತಾ ಶೆಟ್ಟಿ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಸ್ಪಂದನಾ ಹಾಗೂ ಕಾವ್ಯಾ ಅವರು ಎದುರುಬದುರು ಕುಳಿತು ಕೆಲವು ವಿಷಯಗಳನ್ನು ಚರ್ಚೆ ಮಾಡುತ್ತಿದ್ದರು. ಈ ವೇಳೆ ಸ್ಪಂದನಾ ಅವರು, ‘ರಕ್ಷಿತಾ ಮಾಡಿದ್ದು ಸರಿ ಎಂದು ನಿನಗೆ ಅನಿಸುತ್ತಿದೆಯೇ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ಉತ್ತರಿಸಿದರು. ಅವರ ಮಾತುಗಳಲ್ಲಿ ಅಸಮಾಧಾನ ಸ್ಪಷ್ಟವಾಗಿ ಕಾಣಿಸುತ್ತಾ ಇತ್ತು.

‘ತಪ್ಪು ನಿರ್ಧಾರ ತೆಗೆದುಕೊಂಡಾಗ ಪ್ರಬುದ್ಧತೆ ಇಲ್ಲ ಪಾಪ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ, ಅವಳು ಸರಿಯಾದ ನಿರ್ಧಾರ ತೆಗೆದುಕೊಂಡಾಗ ಚಿಕ್ಕವಳಾದರೂ ಒಳ್ಳೆಯ ನಿರ್ಧಾರ ತೆಗೆದುಕೊಂಡಳು ಎಂದು ಆಗುತ್ತಿದೆ. ಈ ಕಾರಣಕ್ಕೆ ಅವಳು ಯಾರ ಬಳಿಯೂ ವಯಸ್ಸು ಹೇಳುತ್ತಾ ಇರಲಿಲ್ಲ. ಸುದೀಪ್ ಅವರು ಕೇಳಿದ ಮೇಲೆ ವಯಸ್ಸು ಹೇಳಿದಳು’ ಎಂದಿದ್ದಾರೆ ಕಾವ್ಯಾ.

‘ಎಲ್ಲಾ ಪರಿಸ್ಥಿತಿಗಳು ಅವಳ ಪರವಾಗಿಯೇ ಇದೆ’ ಎಂದರು ಕಾವ್ಯಾ. ‘ಅವಳು ಸ್ಟ್ರೆಟಜಿ ಮಾಡುತ್ತಿಲ್ಲ, ಹೊರಗೆ ಇರುವ ರೀತಿಯೇ ಇದ್ದಾಳೆ ಎಂದರೆ ನನಗೆ ನಂಬಲು ಸಾಧ್ಯವೇ ಆಗುತ್ತಿಲ್ಲ’ ಎಂದು ಸ್ಪಂದನಾ ಹೇಳಿದರು. ಈ ವಿಷಯ ವೀಕೆಂಡ್​ನಲ್ಲಿ ಚರ್ಚೆಗೆ ಬರೋ ಸಾಧ್ಯತೆ ಇದೆ.

ಇದನ್ನೂ ಓದಿ: ವೀಕೆಂಡ್​ನಲ್ಲಿ ಸುದೀಪ್ ಚರ್ಚೆ ಮಾಡಲೇಬೇಕಾದ ವಿಷಯಗಳಿವು; ಪಟ್ಟಿ ದೊಡ್ಡದಿದೆ

ರಕ್ಷಿತಾ ಶೆಟ್ಟಿ ಅವರು ಈ ವಾರ ಕೆಲವು ತಪ್ಪುಗಳನ್ನು ಮಾಡಿದ್ದಾರೆ. ರಘುನ ನಾಮಿನೇಟ್ ಮಾಡಬೇಕು ಎಂದು ಹಠ ಹಿಡಿದರು. ಆ ಬಳಿಕ ಇದು ತಪ್ಪು ನಿರ್ಧಾರ ಎಂಬುದು ಅವರಿಗೆ ಅರಿವಾಗಿತ್ತು. ಈ ಅರಿವು ಮಾಡಿಸಿದ್ದು ಕಾವ್ಯಾ ಅವರೇ. ಈ ವಾರ ರಕ್ಷಿತಾ ಸಾಕಷ್ಟು ಎಡವಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್