AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮತ್ತು ಅವರ ಮಧ್ಯೆ ಯಾರೂ ಬರಬೇಡಿ’; ಅಶ್ವಿನಿಗೆ ಎಚ್ಚರಿಸಿದ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ತಮ್ಮ ಆಟದ ಮೂಲಕ ಗಮನ ಸೆಳೆದಿದ್ದಾರೆ. ಅಶ್ವಿನಿ ಗೌಡ ಎದುರು ಖಂಡಿತವಾಗಿ ಉತ್ತರ ನೀಡುವ ಮೂಲಕ ರಕ್ಷಿತಾ ಗಮನ ಸೆಳೆದರು. ರಕ್ಷಿತಾ ಅವರ ಈ ನಡೆ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

‘ನನ್ನ ಮತ್ತು ಅವರ ಮಧ್ಯೆ ಯಾರೂ ಬರಬೇಡಿ’; ಅಶ್ವಿನಿಗೆ ಎಚ್ಚರಿಸಿದ ರಕ್ಷಿತಾ ಶೆಟ್ಟಿ
ರಕ್ಷಿತಾ-ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 30, 2025 | 7:31 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ರಕ್ಷಿತಾ ಶೆಟ್ಟಿ ಅವರು ತಮ್ಮ ಆಟದ ಮೂಲಕ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಯಾರೇ ಅವರ ವಿರುದ್ಧ ತಿರುಗಿ ಬಿದ್ದರೂ ಅದನ್ನು ಲೆಕ್ಕಿಸೋದಿಲ್ಲ. ಅಶ್ವಿನಿ ಗೌಡ ಅವರು ಮಾತನಾಡಲು ನಿಂತರೆ ಸುಮಾರಾಗಿ ಯಾರೂ ಎದುರುತ್ತರ ನೀಡಲು ಬರೋದಿಲ್ಲ. ಆದರೆ, ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಇದಕ್ಕೆ ವಿರುದ್ಧ. ಅಶ್ವಿನಿ ಗೌಡ ಎದುರಿದ್ದಾರೆ ಎಂದರೆ ಅವರು ಖಡಾಖಂಡಿತವಾಗಿ ಉತ್ತರ ನೀಡೇ ನೀಡುತ್ತಾರೆ. ಈಗಲೂ ಹಾಗೆಯೇ ಆಗಿದೆ. ಅಶ್ವಿನಿ ಗೌಡ ಅವರಿಗೆ ರಕ್ಷಿತಾ ಟಾಂಗ್ ಕೊಟ್ಟಿದ್ದಾರೆ.

ಬಿಗ್ ಬಾಸ್​ನಲ್ಲಿ ರಕ್ಷಿತಾನ ರಾಶಿಕಾ ಹಾಗೂ ಅಶ್ವಿನಿ ಗೌಡ ಟಾರ್ಗೆಟ್ ಮಾಡಿದ್ದರು. ಆಟ ಆಡುವ ವೇಳೆಯೂ ರಾಶಿಕಾ ಅವರು ರಕ್ಷಿತಾನ ಗಟ್ಟಿಯಾಗಿ ಹಿಡಿದಿದ್ದರು. ಇದೆರಡೂ ವಿಚಾರದಲ್ಲಿ ಗಿಲ್ಲಿಗೆ ಸೇಡು ತೀರಿಸಿಕೊಳ್ಳಲು ಒಂದು ಅವಕಾಶ ಬೇಕಿತ್ತು. ಕೊನೆಗೂ ಆ ಅವಕಾಶ ಸಿಕ್ಕೇ ಬಿಟ್ಟಿತು. ರಾಶಿಕಾ ವಿರುದ್ಧ ಗಿಲ್ಲಿ ಸೇಡು ತೀರಿಸಿಕೊಂಡರು.

ರಾಶಿಕಾ, ಗಿಲ್ಲಿ, ಅಶ್ವಿನಿ ಮೊದಲಾದವರು ಒಂದೇ ತಂಡದಲ್ಲಿ ಇದ್ದಾರೆ ಗಿಲ್ಲಿ ತಂಡ ಟಾಸ್ಕ್​ನಲ್ಲಿ ಗೆದ್ದಿತು. ಈ ಮೂಲಕ ಕ್ಯಾಪ್ಟನ್ ಟಾಸ್ಕ್ ಆಡಲು ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ಈ ವೇಳೆ ತಂಡದಲ್ಲಿರುವ ಆರು ಮಂದಿ ರಾಶಿಕಾ ಹೆಸರು ಹೇಳಿದರೆ ಗಿಲ್ಲಿ ಮಾತ್ರ ಇದಕ್ಕೆ ಸಹಮತ ಸೂಚಿಸಲೇ ಇಲ್ಲ. ‘ಎಲ್ಲರ ಸಹಮತ ಬೇಕು’ ಎಂದು ಬಿಗ್ ಬಾಸ್ ಎರಡು ಬಾರಿ ಹೇಳಿದರು. ಆದರೆ, ರಾಶಿಕಾ ಹೆಸರು ಆಯ್ಕೆ ಮಾಡಲು ಗಿಲ್ಲಿಯ ಸಹಮತ ಸಿಕ್ಕಿಲ್ಲ. ಇದರಿಂದ ಬಿಗ್ ಬಾಸ್ ಈ ಅವಕಾಶವನ್ನು ಹಿಂದೆ ಪಡೆದರು. ಈ ಬಗ್ಗೆ ಘೋಷಣೆ ಕೂಡ ಮಾಡಿದರು.

ಇದನ್ನೂ ಓದಿ
Image
ಸೇಡು ತೀರಿಸಿಕೊಳ್ಳಲು ತಮ್ಮದೇ ತಂಡದ ರಾಶಿಕಾಗೆ ಮಣ್ಣು ಮುಕ್ಕಿಸಿದ ಗಿಲ್ಲಿ ನಟ
Image
ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ
Image
ಪುನೀತ್ ಪುಣ್ಯಸ್ಮರಣೆ; 4 ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ

ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ತಮ್ಮದೇ ತಂಡದ ರಾಶಿಕಾಗೆ ಮಣ್ಣು ಮುಕ್ಕಿಸಿದ ಗಿಲ್ಲಿ ನಟ

ಎಲ್ಲರೂ ರಾಶಿಕಾಗೆ ಕ್ಯಾಪ್ಟನ್ಸಿ ರೇಸ್​ನಲ್ಲಿ ನಿಲ್ಲೋ ಅವಕಾಶ ಸಿಗುತ್ತದೆ ಎಂದೇ ಭಾವಿಸಿದ್ದರು. ಆದರೆ, ಹಾಗಾಗಲೇ ಇಲ್ಲ. ಬಿಗ್ ಬಾಸ್ ಆದೇಶ ಕೇಳಿ ರಾಶಿಕಾ ಹಾಗೂ ಅಶ್ವಿನಿ ಗೌಡಗೆ ಶಾಕ್ ಆಯ್ತು. ಆಗ ರಕ್ಷಿತಾ ಶೆಟ್ಟಿ ಅವರು ಎದ್ದು ನಿಂತು, ‘ಹೇ..’ ಎಂದು ಕೂಗಿ, ‘ಥ್ಯಾಂಕ್ ಯೂ ಬಿಗ್ ಬಾಸ್’ ಎಂದರು. ಅವಕಾಶ ತಪ್ಪಿ ಹೋಗಿದ್ದನ್ನು ನೋಡಿ ಮೊದಲೇ ಉರಿದುಕೊಳ್ಳುತ್ತಿದ್ದ ಅಶ್ವಿನಿ, ರಕ್ಷಿತಾ ಮಾತಿನಿಂದ ಸಿಟ್ಟಾದರು. ಅವರು ರಕ್ಷಿತಾನ ಹೆದರಿಸೋಕೆ ಹೋದರು. ಆಗ ರಕ್ಷಿತಾ ಅವರು ಬೇರೆಯವರನ್ನು ನೋಡುತ್ತಾ, ‘ನಾನು ಬಿಗ್ ಬಾಸ್ ಜೊತೆ ಮಾತಾಡ್ತಾ ಇರೋದು. ನನ್ನ ಹಾಗೂ ಬಿಗ್ ಬಾಸ್ ಮಧ್ಯೆ ಯಾರೂ ಬರಬೇಡಿ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:26 am, Thu, 30 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?