AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಶೆಟ್ಟಿ ಆಟವೇಕೆ ಹೀಗಾಯ್ತು? ಬದಲಾಗದಿದ್ದರೆ ಇದೆ ಕಷ್ಟ

ರಕ್ಷಿತಾ ಶೆಟ್ಟಿ ಅವರ ಆಟದ ಶೈಲಿ ಬಗ್ಗೆ ಅನೇಕರಿಗೆ ಮೆಚ್ಚುಗೆ ಇತ್ತು. ಅವರು ಅಶ್ವಿನಿ ಗೌಡ ಹಾಗೂ ಜಾನ್ವಿಯನ್ನು ಎದುರು ಹಾಕಿಕೊಂಡಾಗ ಅವರ ಆಟಕ್ಕೆ ಸಖತ್ ಮೈಲೇಜ್ ಸಿಕ್ಕಿತು. ಆದರೆ, ರಕ್ಷಿತಾಗಿರೋ ಓವರ್ ಕಾನ್ಫಿಡೆನ್ಸ್ ಅವರನ್ನು ಹಾಳು ಮಾಡುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ರಕ್ಷಿತಾ ಶೆಟ್ಟಿ ಆಟವೇಕೆ ಹೀಗಾಯ್ತು? ಬದಲಾಗದಿದ್ದರೆ ಇದೆ ಕಷ್ಟ
ರಕ್ಷಿತಾ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Dec 17, 2025 | 8:53 AM

Share

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್​ಗೆ ಬಂದಾಗ ಸಾಕಷ್ಟು ಗಮನ ಸೆಳೆದರು. ಅವರ ಆಟದ ಶೈಲಿ ಎಲ್ಲರಿಗೂ ಇಷ್ಟ ಆಗಿತ್ತು. ಆದರೆ, ರಕ್ಷಿತಾ ಶೆಟ್ಟಿ ಈಗ ಸಂಪೂರ್ಣವಾಗಿ ಬದಲಾಗಿದ್ದಾರೆ. ಅವರಲ್ಲಿ ಓವರ್ ಕಾನ್ಫಿಡೆನ್ಸ್ ಎದ್ದು ಕಾಣಿಸುತ್ತಿದೆ. ಧ್ರುವಂತ್ ಅವರು ರಕ್ಷಿತಾನ ತಿದ್ದುವ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಅದು ಕೆಲಸ ಮಾಡುತ್ತಿಲ್ಲ. ರಕ್ಷಿತಾ ಆಟ ಇದೇ ರೀತಿ ಮುಂದುವರಿದರೆ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.

ರಕ್ಷಿತಾ ಶೆಟ್ಟಿ ಅವರ ಆಟದ ಶೈಲಿ ಬಗ್ಗೆ ಅನೇಕರಿಗೆ ಮೆಚ್ಚುಗೆ ಇತ್ತು. ಅವರು ಅಶ್ವಿನಿ ಗೌಡ ಹಾಗೂ ಜಾನ್ವಿಯನ್ನು ಎದುರು ಹಾಕಿಕೊಂಡಾಗ ಅವರ ಆಟಕ್ಕೆ ಸಖತ್ ಮೈಲೇಜ್ ಸಿಕ್ಕಿತು. ಆದರೆ, ರಕ್ಷಿತಾಗಿರೋ ಓವರ್ ಕಾನ್ಫಿಡೆನ್ಸ್ ಅವರನ್ನು ಹಾಳು ಮಾಡುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರನ್ನು ಸೋಲಿಸಲು ಅವರು ಯಾವ ಹಂತಕ್ಕೆ ಬೇಕಿದ್ದರೂ ಇಳಿಯಲು ರೆಡಿ ಇದ್ದಾರೆ.

ಇದನ್ನೂ ಓದಿ: ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಕ್ಷಿತಾ ಹಾಗೂ ಧ್ರುವಂತ್ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ತಂಡ ರಚಿಸಲು ಬಿಗ್ ಬಾಸ್ ಇವರಿಗೆ ಅವಕಾಶ ನೀಡಿದರು. ಕಾವ್ಯಾನ ಕಂಡರೆ ರಕ್ಷಿತಾಗೆ ಸ್ವಲ್ಪವೂ ಇಷ್ಟ ಇಲ್ಲ. ಅವರನ್ನು ಟಾಸ್ಕ್​ನಲ್ಲಿ ಸೋಲಿಸಲು ವೀಕ್ ಟೀಂ ರಚಿಸಲು ಮುಂದಾಗಿದ್ದರು. ಆದರೆ, ಇದಕ್ಕೆ ಧ್ರುವಂತ್ ಅವಕಾಶ ಕೊಡಲಿಲ್ಲ. ಇದರಿಂದ ಕಾವ್ಯಾ ಗೆದ್ದರು. ಕಾವ್ಯಾ ಗೆದ್ದಿದ್ದಕ್ಕೆ ರಕ್ಷಿತಾ ಮಾಡಿಕೊಂಡ ಬೇಸರ ಅಷ್ಟಿಷ್ಟಲ್ಲ.

ಇನ್ನು, ರಕ್ಷಿತಾ ಮಾತೇ ಅವರಿಗೆ ಮುಳ್ಳಾಗುತ್ತಿದೆ. ಅವರು ಏನು ಹೇಳುತ್ತಿದ್ದಾರೆ ಎಂಬುದು ಅವರಿಗೆ ತಿಳಿಯುತ್ತಿಲ್ಲ. ಯಾವ ಮಾತಿನಲ್ಲೂ ಸ್ಪಷ್ಟನೆ ಇಲ್ಲ. ತೆಗೆದುಕೊಳ್ಳುವ ನಿರ್ಧಾರಕ್ಕೆ ಅರ್ಥವಿಲ್ಲ. ಇದು ಅವರ ಆಟಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಅವರು ಟಾಪ್ 5 ಅಲ್ಲಿ ಇರ್ತಾರಾ ಎಂಬುದೇ ಪ್ರಶ್ನೆಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Wed, 17 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?