AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಶೆಟ್ಟಿ ಬುದ್ಧಿವಂತಿಕೆ ನೋಡಿ ಬೆರಗಾದ ರಘು; ಬಾಯ್ತುಂಬ ಹೊಗಳಿಕೆ

ರಘು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಸೂರಜ್ ಹಾಗೂ ಅಶ್ವಿನಿ ಮೊದಲಾದವರನ್ನು ಬಾತ್​ರೂಂ ಕ್ಲೀನ್ ಮಾಡುವ ಟೀಂಗೆ ನೇಮಕ ಮಾಡಿದ್ದಾರೆ. ಈ ಬಗ್ಗೆ ರಕ್ಷಿತಾ ಅವರು ರಘು ಬಳಿ ತಮ್ಮ ಅಭಿಪ್ರಾಯ ಹೊರಹಾಕಿದರು. ಆಗ ರಕ್ಷಿತಾ ಅವರ ಆಲೋಚನೆ ಏನು ಎಂಬುದರ ಸ್ಪಷ್ಟ ಚಿತ್ರಣ ರಘುಗೆ ಸಿಕ್ಕಿದೆ.

ರಕ್ಷಿತಾ ಶೆಟ್ಟಿ ಬುದ್ಧಿವಂತಿಕೆ ನೋಡಿ ಬೆರಗಾದ ರಘು; ಬಾಯ್ತುಂಬ ಹೊಗಳಿಕೆ
ರಘು-ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Oct 25, 2025 | 4:33 PM

Share

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಉತ್ತಮವಾದ ಆಟ ಆಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ವಿಡಿಯೋ ನೋಡಿದ ಅನೇಕರು ‘ಇವರು ಇನ್ನೂ ಚಿಕ್ಕವಳು’ ಎಂಬರ್ಥದಲ್ಲಿ ಮಾತನಾಡಿದ್ದರು. ಆದರೆ, ಅವರ ಆಟ ನೋಡಿದ ಬಳಿಕ ಅನೇಕರ ಅಭಿಪ್ರಾಯ ಬದಲಾಗಿದೆ. ರಘು ಕೂಡ ರಕ್ಷಿತಾ ಶೆಟ್ಟಿ ಬುದ್ಧಿವಂತಿಕೆ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ರಘು-ರಕ್ಷಿತಾ ಸಂಭಾಷಣೆ

ರಘು ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಸೂರಜ್ ಹಾಗೂ ಅಶ್ವಿನಿ ಮೊದಲಾದವರನ್ನು ಬಾತ್​ರೂಂ ಕ್ಲೀನ್ ಮಾಡುವ ಟೀಂಗೆ ನೇಮಕ ಮಾಡಿದ್ದಾರೆ. ಈ ಬಗ್ಗೆ ರಕ್ಷಿತಾ ಅವರು ರಘು ಬಳಿ ತಮ್ಮ ಅಭಿಪ್ರಾಯ ಹೊರಹಾಕಿದರು.

‘ಕೆಲವರು ನಿಮ್ಮ ಪರ ಇದ್ದಾರೆ, ಇನ್ನೂ ಕೆಲವರು ನಿಮ್ಮ ವಿರುದ್ಧ ಇದ್ದಾರೆ. ಕೆಲವರು ನಿಮ್ಮ ವಿರುದ್ಧ ಇದ್ದರೆ ಅದು ನಿಮಗೆ ತೊಂದರೆ ಉಂಟುಮಾಡಬಹುದು. ಅಶ್ವಿನಿ ಜೊತೆ ಇರುವಾಗ ಸೂರಜ್ ಅವರು ಮ್ಯಾನ್ಯುಪಲೇಟ್ ಮಾಡಬಹುದು. ಹೀಗಾಗಿ, ಸೂರಜ್​ನ ಕಿಚನ್​ಗೆ ಹಾಕಿಬಿಡಿ. ಆಗ ಅಶ್ವಿನಿ-ಸೂರಜ್ ಒಟ್ಟಾಗಿ ಇರಲ್ಲ’ ಎಂದಿದ್ದಾರೆ ರಕ್ಷಿತಾ. ‘ಒಳ್ಳೆಯ ಯೋಚನೆ ಇದೆ’ ಎಂದು ರಕ್ಷಿತಾ ಬಗ್ಗೆ ರಘು ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ: ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ? ಒಂದೇ ಪ್ರೋಮೋದಲ್ಲಿ ಹಲವು ವಿಚಾರ

ಉಪವಾಸ ಮಾಡಿ; ಅಶ್ವಿನಿಗೆ ಕಿವಿಮಾತು

ಅಶ್ವಿನಿ ಅವರು ಬಿಗ್ ಬಾಸ್ ಮನೆಯಲ್ಲಿ ಕಳಪೆ ಆಗಿದ್ದಾರೆ. ಹೀಗಾಗಿ, ಜೈಲು ಸೇರಿದ್ದಾರೆ. ಈ ವೇಳೆ ಅವರು ಉಪವಾಸ ಇರಲು ನಿರ್ಧರಿಸಿದರು. ಈ ವೇಳೆ ರಕ್ಷಿತಾ ಅವರು ಬಂದು, ‘ನಿಮಗೆ ಹಸಿವು ಆಗಲ್ವ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಶ್ವಿನಿ, ‘ಆಗುತ್ತೆ, ಆದರೆ, ನಾನು ಗಟ್ಟಿ ನಿರ್ಧಾರ ಮಾಡಿದ್ದೇನೆ’ ಎಂದರು. ಇದಕ್ಕೆ ಉತ್ತರಿಸಿದ ರಕ್ಷಿತಾ, ‘ಮಾಡಿ ನಿಮಗೆ ಒಳ್ಳೆಯದು’ ಎಂದರು. ಇದು ಕೂಡ ವೀಕ್ಷಕರ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ