AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಜನರ ಊಟಕ್ಕೆ ಮಣ್ಣು ಹಾಕಿ ಅಸಲಿ ಬುದ್ಧಿ ತೋರಿಸಿದ ರಕ್ಷಿತಾ ಶೆಟ್ಟಿ

ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಊಟ ಹಾಗೂ ಇತರೆ ಸವಲತ್ತುಗಳಿಗೆ ಕಷ್ಟಪಡಬೇಕು. ಪರಿಸ್ಥಿತಿ ಹೀಗಿರುವಾಗ ರಕ್ಷಿತಾ ಶೆಟ್ಟಿ ಅವರು 12 ಜನರ ಊಟವನ್ನು ಹಾಳು ಮಾಡಿದ್ದಾರೆ. ರಕ್ಷಿತಾ ಶೆಟ್ಟಿ ಮಾಡಿದ ಈ ಕೆಲಸದಿಂದ ಮಂಜು ಭಾಷಿಣಿ ಅವರಿಗೆ ವಿಪರೀತ ಕೋಪ ಬಂದಿದೆ.

12 ಜನರ ಊಟಕ್ಕೆ ಮಣ್ಣು ಹಾಕಿ ಅಸಲಿ ಬುದ್ಧಿ ತೋರಿಸಿದ ರಕ್ಷಿತಾ ಶೆಟ್ಟಿ
Rakshitha Shetty
ಮದನ್​ ಕುಮಾರ್​
|

Updated on: Oct 09, 2025 | 10:40 PM

Share

ಮೊದಲ ವಾರವೇ ಬಿಗ್ ಬಾಸ್ (Bigg Boss Kannada Season 12) ಮನೆಯಿಂದ ಔಟ್ ಆಗಿದ್ದ ರಕ್ಷಿತಾ ಶೆಟ್ಟಿ ಅವರು ನಂತರ ಮತ್ತೆ ರೀ-ಎಂಟ್ರಿ ನೀಡಿದರು. ದೊಡ್ಮನೆಗೆ ಪುನಃ ಕಾಲಿಡುತ್ತಿದ್ದಂತೆಯೇ ರಕ್ಷಿತಾ ಶೆಟ್ಟಿ ಅವರು ಪಟಾಕಿ ರೀತಿ ಸಿಡಿಯುತ್ತಿದ್ದಾರೆ. ಸದ್ಯಕ್ಕೆ ಅವರು ಒಂಟಿಗಳ ಜೊತೆಯಲ್ಲಿ ಇದ್ದಾರೆ. ಅಕ್ಟೋಬರ್ 9ರ ಸಂಚಿಕೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಸೌಂಡು ಜಾಸ್ತಿ ಆಗಿದೆ. ಅವರ ಆರ್ಭಟ ನೋಡಿ ಧ್ರುವಂತ್, ಅಶ್ವಿನಿ ಗೌಡ ಮುಂತಾದವರಿಗೆ ಅಚ್ಚರಿ ಆಗಿದೆ. ಅಸುರಾಧಿಪತಿ ಆಗಿರುವ ಕಾಕ್ರೋಚ್ ಸುಧಿಗೆ ರಕ್ಷಿತಾ ಶೆಟ್ಟಿ ಆವಾಜ್ ಹಾಕಿದ್ದಾರೆ. ಅಷ್ಟೇ ಅಲ್ಲ, 12 ಜನರು ತಿನ್ನುವ ಅನ್ನಕ್ಕೆ ಮಣ್ಣು ಹಾಕಿದ್ದಾರೆ!

ಒಂಟಿಗಳು ವರ್ಸಸ್ ಜಂಟಿಗಳು ಎಂಬ ಥೀಮ್​​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ನಡೆಯುತ್ತಿದೆ. ರಕ್ಷಿತಾ ಶೆಟ್ಟಿ ಅವರು ಒಂಟಿಗಳ ತಂಡದಲ್ಲಿ ಇದ್ದಾರೆ. ಕಾಕ್ರೂಚ್ ಸುಧಿ ಅವರಿಗೆ ಅಸುರಾಧಿಪತಿಯಾಗಿ ವಿಶೇಷ ಅಧಿಕಾರ ನೀಡಲಾಗಿದೆ. ಮನೆಯವರನ್ನು ಅವರು ಹೇಗೆ ಬೇಕಾದರೂ ಶಿಕ್ಷಿಸಬಹುದು. ಆದರೆ ರಕ್ಷಿತಾ ಶೆಟ್ಟಿಗೆ ಬುದ್ಧಿ ಕಲಿಸಲು ಕಾಕ್ರೋಚ್ ಸುಧಿ ಕಷ್ಟಪಡುವಂತಾಗಿದೆ.

ಮೊದಲು ರಕ್ಷಿತಾ ಶೆಟ್ಟಿ ಅವರು ಮಾಡುತ್ತಿದ್ದ ಅಡುಗೆಯನ್ನು ಕಾಕ್ರೂಚ್ ಸುಧಿ ಕೆಡಿಸಿದರು. ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ರಕ್ಷಿತಾ ಶೆಟ್ಟಿ ಅವರು ನಿರ್ಧಾರ ಮಾಡಿದರು. ಜಂಟಿಗಳಾಗಿರುವ 12 ಜನರಿಗೆ ಚಿಕನ್ ಬೇಯಿಸಲಾಗುತ್ತಿತ್ತು. ಆಗ ರಕ್ಷಿತಾ ಶೆಟ್ಟಿ ಅವರು ಚಿಕನ್ ಬೇಯುತ್ತಿದ್ದ ಪಾತ್ರೆಗೆ ಟೀ ಸುರಿದರು. ಅದರಿಂದಾಗಿ ತಿನ್ನುವ ಅನ್ನಕ್ಕೆ ಮಣ್ಣು ಹಾಕಿದಂತಾಯಿತು.

ರಕ್ಷಿತಾ ಶೆಟ್ಟಿ ಮಾಡಿದ ಈ ಕೆಲಸದಿಂದ ಬಿಗ್ ಬಾಸ್ ಮನೆಯ ಜಂಟಿಗಳಿಗೆ ತೀವ್ರ ಕೋಪ ಬಂತು. ಕಾಕ್ರೋಜ್ ಸುಧಿ ಒಬ್ಬರು ಮಾಡಿದ ತಪ್ಪಿಗಾಗಿ ರಕ್ಷಿತಾ ಶೆಟ್ಟಿ ಅವರು 12 ಜನರ ಊಟ ಕೆಡಿಸಬಾರದಾಗಿತ್ತು ಎಂದು ಎಲ್ಲರೂ ರೇಗಾಡಿದರು. ಆ ವೇಳೆ ಮಂಜು ಭಾಷಿಣಿ ಅವರು ರಕ್ಷಿತಾ ಶೆಟ್ಟಿಗೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡರು. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ಇದನ್ನೂ ಓದಿ: ಜಾನ್ವಿ ಮೇಲೆ ಮುಗಿಬಿದ್ದ ಮನೆ ಮಂದಿ, ರಕ್ಷಿತಾ ಮಾತಿಗೆ ಚಪ್ಪಾಳೆ

ರಕ್ಷಿತಾ ಶೆಟ್ಟಿ ಅವರಲ್ಲಿ ಮುಗ್ಧತೆ ಇದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅಸಲಿಗೆ ಆಗುತ್ತಿರುವುದೇ ಬೇರೆ. ಆಟದ ಭರದಲ್ಲಿ ಅವರು 12 ಜನರ ಊಟವನ್ನು ಕೆಡಿಸಿದ್ದಕ್ಕೆ ಎಲ್ಲರಿಗೂ ಕೋಪ ಬಂದಿದೆ. ರಕ್ಷಿತಾ ಶೆಟ್ಟಿ ಅವರು ಅಂದುಕೊಂಡಷ್ಟು ಮುಗ್ಧೆ ಅಲ್ಲ ಎಂಬುದು ಅರ್ಥ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಊಟಕ್ಕೆ ಎಲ್ಲರೂ ಕಷ್ಟ ಪಡಬೇಕು. ಹಾಗಿರುವಾಗ ಊಟವನ್ನು ಹಾಳು ಮಾಡಿದ ರಕ್ಷಿತಾ ಮೇಲೆ ಮನೆ ಮಂದಿ ಕೋಪ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!