AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

Bigg Boss Kannada: ಈ ವಾರ ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಯಿತು. ಮೂಗು ತೂರಿಸುತ್ತಾರೆ ಎಂದು ಸ್ಪರ್ಧಿಗಳು ದೂರಿದರು. ವೀಕೆಂಡ್‌ನಲ್ಲಿ ಸುದೀಪ್ ಅವರು ರಕ್ಷಿತಾರನ್ನು ಬೆಂಬಲಿಸಿ ಮಾತನಾಡಿದರು. ಅಶ್ವಿನಿ, ರಿಷಾ ದೂರುಗಳನ್ನು ಆಲಿಸಿ ಕಿವಿಮಾತು ಹೇಳಿದ್ದಾರೆ.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 01, 2025 | 10:27 PM

Share

ರಕ್ಷಿತಾ ಶೆಟ್ಟಿ ಅವರನ್ನು ಈ ವಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾರ್ಗೆಟ್ ಮಾಡಲಾಯಿತು. ರಕ್ಷಿತಾ ಶೆಟ್ಟಿ ಎ ಅವರು ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ ಎಂದು ಅನೇಕರು ದೂರಿದ್ದಾರೆ. ಈ ವಿಚಾರವನ್ನು ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ರಿಷಾ ಅವರು ಪದೇ ಪದೇ ಹೇಳಿದ್ದಾರೆ. ಈ ವಿಚಾರವಾಗಿ ವೀಕೆಂಡ್​ನಲ್ಲಿ ಚರ್ಚೆ ನಡೆದಿದೆ. ಈ ವೇಳೆ ಸುದೀಪ್ (Sudeep) ಅವರು ರಕ್ಷಿತಾ ಶೆಟ್ಟಿ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ.

ರಕ್ಷಿತಾ ಬಗ್ಗೆ ಇರುವ ದೂರುಗಳು ಏನು ಎಂದು ಸ್ಪರ್ಧಿಗಳ ಬಳಿ  ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅಶ್ವಿನಿ ಗೌಡ ಅವರು, ‘ಅವರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರು ಮಾಡಿದ್ದು ಸರಿ ಇಲ್ಲ’ ಎಂದರು. ರಿಷಾ ಗೌಡ ಅವರು ಕೂಡ ರಕ್ಷಿತಾ ಶೆಟ್ಟಿ ಬಗ್ಗೆ ಅಪಸ್ವರ ತೆಗೆದರು. ‘ರಕ್ಷಿತಾ ವಾರದ ದಿನ ಒಂದು ರೀತಿ ಕಾಣ್ತಾರೆ. ವೀಕೆಂಡ್​ನಲ್ಲಿ ಮತ್ತೊಂದು ರೀತಿ ಕಾಣ್ತಾರೆ’ ಎಂದರು. ಇದಕ್ಕೆ ಸುದೀಪ್ ಉತ್ತರಿಸಿದರು.

‘ಜನ ನೋಡ್ತಾ ಇರ್ತಾರೆ. ಶನಿವಾರ ನಾನು ಬೆಸ್ಟ್ ಆಗಿ ಕಾಣಬೇಕು ಎಂದಿರುತ್ತದೆ. ಅದಕ್ಕೆ ಎಲ್ಲರೂ ಆ ರೀತಿ ಇರಬಹುದು. ಮುಖವಾಡ ಹಾಕ್ಕೊಂಡಿರ್ತಾರೆ ಎಂದೆಲ್ಲ ಹೇಳುವ ನೀವೂ ಶನಿವಾರ ಬೇರೆಯದೇ ರೀತಿ ಇರ್ತೀರಾ. ಒಳಗೆ ಹೋಗುವಾಗ ರೋಷದಲ್ಲಿ ಇದ್ದ ರಿಷಾ, ಒಳಗೆ ಹೋದಮೇಲೆ ಬೇರೆ ರೀತಿ ಆದ್ರಿ’ ಎಂದರು ಸುದೀಪ್.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಇದನ್ನೂ ಓದಿ: Bigg Boss Promo: ರಕ್ಷಿತಾ ಶೆಟ್ಟಿ ಫೇಕ್ ಎಂದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

‘ಎಲ್ಲರೂ ಬೇರೆಯವರ ಸರಿ ಮಾಡೋಕೆ ಹೋಗ್ತಾ ಇದೀರ. ಒಳ್ಳೆಯವರು, ಕೆಟ್ಟವರು ಅನ್ನೋದು ಬರಲ್ಲ. ಕೆಲವರು ನಿಮಗೆ ಹೊಂದಿಕೆ ಆಗ್ತಾರೆ, ಹೊಂದಿಕೆ ಆಗಲ್ಲ ಅನ್ನೋದು ಅಷ್ಟೇ ವಿಚಾರ. ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’ ಎಂದು ಸುದೀಪ್ ಅವರು ಕಿವಿಮಾತು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ