AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

Bigg Boss Kannada: ಈ ವಾರ ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಯಿತು. ಮೂಗು ತೂರಿಸುತ್ತಾರೆ ಎಂದು ಸ್ಪರ್ಧಿಗಳು ದೂರಿದರು. ವೀಕೆಂಡ್‌ನಲ್ಲಿ ಸುದೀಪ್ ಅವರು ರಕ್ಷಿತಾರನ್ನು ಬೆಂಬಲಿಸಿ ಮಾತನಾಡಿದರು. ಅಶ್ವಿನಿ, ರಿಷಾ ದೂರುಗಳನ್ನು ಆಲಿಸಿ ಕಿವಿಮಾತು ಹೇಳಿದ್ದಾರೆ.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 01, 2025 | 10:27 PM

Share

ರಕ್ಷಿತಾ ಶೆಟ್ಟಿ ಅವರನ್ನು ಈ ವಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾರ್ಗೆಟ್ ಮಾಡಲಾಯಿತು. ರಕ್ಷಿತಾ ಶೆಟ್ಟಿ ಎ ಅವರು ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ ಎಂದು ಅನೇಕರು ದೂರಿದ್ದಾರೆ. ಈ ವಿಚಾರವನ್ನು ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ರಿಷಾ ಅವರು ಪದೇ ಪದೇ ಹೇಳಿದ್ದಾರೆ. ಈ ವಿಚಾರವಾಗಿ ವೀಕೆಂಡ್​ನಲ್ಲಿ ಚರ್ಚೆ ನಡೆದಿದೆ. ಈ ವೇಳೆ ಸುದೀಪ್ (Sudeep) ಅವರು ರಕ್ಷಿತಾ ಶೆಟ್ಟಿ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ.

ರಕ್ಷಿತಾ ಬಗ್ಗೆ ಇರುವ ದೂರುಗಳು ಏನು ಎಂದು ಸ್ಪರ್ಧಿಗಳ ಬಳಿ  ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅಶ್ವಿನಿ ಗೌಡ ಅವರು, ‘ಅವರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರು ಮಾಡಿದ್ದು ಸರಿ ಇಲ್ಲ’ ಎಂದರು. ರಿಷಾ ಗೌಡ ಅವರು ಕೂಡ ರಕ್ಷಿತಾ ಶೆಟ್ಟಿ ಬಗ್ಗೆ ಅಪಸ್ವರ ತೆಗೆದರು. ‘ರಕ್ಷಿತಾ ವಾರದ ದಿನ ಒಂದು ರೀತಿ ಕಾಣ್ತಾರೆ. ವೀಕೆಂಡ್​ನಲ್ಲಿ ಮತ್ತೊಂದು ರೀತಿ ಕಾಣ್ತಾರೆ’ ಎಂದರು. ಇದಕ್ಕೆ ಸುದೀಪ್ ಉತ್ತರಿಸಿದರು.

‘ಜನ ನೋಡ್ತಾ ಇರ್ತಾರೆ. ಶನಿವಾರ ನಾನು ಬೆಸ್ಟ್ ಆಗಿ ಕಾಣಬೇಕು ಎಂದಿರುತ್ತದೆ. ಅದಕ್ಕೆ ಎಲ್ಲರೂ ಆ ರೀತಿ ಇರಬಹುದು. ಮುಖವಾಡ ಹಾಕ್ಕೊಂಡಿರ್ತಾರೆ ಎಂದೆಲ್ಲ ಹೇಳುವ ನೀವೂ ಶನಿವಾರ ಬೇರೆಯದೇ ರೀತಿ ಇರ್ತೀರಾ. ಒಳಗೆ ಹೋಗುವಾಗ ರೋಷದಲ್ಲಿ ಇದ್ದ ರಿಷಾ, ಒಳಗೆ ಹೋದಮೇಲೆ ಬೇರೆ ರೀತಿ ಆದ್ರಿ’ ಎಂದರು ಸುದೀಪ್.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಇದನ್ನೂ ಓದಿ: Bigg Boss Promo: ರಕ್ಷಿತಾ ಶೆಟ್ಟಿ ಫೇಕ್ ಎಂದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

‘ಎಲ್ಲರೂ ಬೇರೆಯವರ ಸರಿ ಮಾಡೋಕೆ ಹೋಗ್ತಾ ಇದೀರ. ಒಳ್ಳೆಯವರು, ಕೆಟ್ಟವರು ಅನ್ನೋದು ಬರಲ್ಲ. ಕೆಲವರು ನಿಮಗೆ ಹೊಂದಿಕೆ ಆಗ್ತಾರೆ, ಹೊಂದಿಕೆ ಆಗಲ್ಲ ಅನ್ನೋದು ಅಷ್ಟೇ ವಿಚಾರ. ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’ ಎಂದು ಸುದೀಪ್ ಅವರು ಕಿವಿಮಾತು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ