AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಿಲ್ಲಿ ರೀತಿಯ ಹುಡುಗ ಬೇಕು’; ಮನಸ್ಸಿನ ಭಾವನೆ ಹೊರಹಾಕಿದ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ತಮ್ಮ ಮನಸ್ಸಿನ ಭಾವನೆಗಳನ್ನು ಹೊರಹಾಕಿದ್ದಾರೆ. ಗಿಲ್ಲಿಯ ಸ್ವಯಂವರದ ನಂತರ, 'ಗಿಲ್ಲಿ ರೀತಿಯ ಹುಡುಗ ಬೇಕು, ಆದರೆ ಗಿಲ್ಲಿ ಬೇಡ' ಎಂದು ಹೇಳುವ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ. ಕಾವ್ಯಾ ಮತ್ತು ಗಿಲ್ಲಿ ಸ್ನೇಹದ ಬಗ್ಗೆ ಅವರಿಗೆ ಅಸಮಾಧಾನ ಇದೆ ಎಂದು ಹೇಳಲಾಗಿದೆ.

‘ಗಿಲ್ಲಿ ರೀತಿಯ ಹುಡುಗ ಬೇಕು’; ಮನಸ್ಸಿನ ಭಾವನೆ ಹೊರಹಾಕಿದ ರಕ್ಷಿತಾ ಶೆಟ್ಟಿ
ಗಿಲ್ಲಿ-ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Dec 29, 2025 | 9:55 AM

Share

ಬಿಗ್ ಬಾಸ್ ಮನೆಯಲ್ಲಿರೋ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಆ್ಯಕ್ಟಿವ್ ಆಗಿದ್ದಾರೆ. ಅವರು ಒಮ್ಮೊಮ್ಮೆ ಆಡುವ ರೀತಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕುತ್ತದೆ. ಈಗ ರಕ್ಷಿತಾ ಶೆಟ್ಟಿ ಅವರು ತಮ್ಮ ಮನಸ್ಸಿನ ಭಾವನೆ ಹೇಳಿಕೊಂಡಿದ್ದಾರೆ. ಅವರಿಗೆ ಗಿಲ್ಲಿ ರೀತಿಯ ಹುಡುಗ ಬೇಕೆಂತೆ! ಆದರೆ, ಗಿಲ್ಲಿಯೇ ಆಗಬೇಕು ಎಂದು ಅವರು ಹೇಳಿಲ್ಲ. ಈ ವಿಡಿಯೋ ಸಾಕಷ್ಟು ವೈರಲ್ ಆಗಿ ಗಮನ ಸೆಳೆದಿದೆ. ಇದರ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆದಿವೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಳೆದ ವಾರ ಸುದೀಪ್ ಅವರು ಗೈರಾಗಿದ್ದರು. ಹೀಗಾಗಿ, ಅನೇಕ ಅತಿಥಿಗಳು ಬಿಗ್ ಬಾಸ್ ಮನೆ ಒಳಗೆ ಪ್ರವೇಶ ಮಾಡಿದ್ದರು. ಇವರ ಪೈಕಿ ‘ಗೌರಿ ಕಲ್ಯಾಣ’ ಧಾರಾವಾಹಿ ತಂಡ ಕೂಡ ಒಂದು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಕಲರ್ಸ್​​ನಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಧಾರಾವಾಹಿ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ವೇಳೆ ಗಿಲ್ಲಿಗೆ ಸ್ವಯಂವರ ಮಾಡಲಾಗಿದೆ.

ಸ್ವಯಂವರದ ಬಳಿಕ ರಕ್ಷಿತಾ ಅವರ ಹುಡುಗ ಯಾವ ರೀತಿ ಇರಬೇಕು ಎಂಬ ಚರ್ಚೆ ಬಂದಿದೆ. ಇದಕ್ಕೆ ರಕ್ಷಿತಾ ಅವರು, ‘ನನ್ನ ಹುಡುಗ ಗಿಲ್ಲಿ ರೀತಿಯೇ ಇರಬೇಕು’ ಎಂದು ನೇರವಾಗಿ ಹೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಆ ಬಳಿಕ ‘ಗಿಲ್ಲಿಯನ್ನೇ ಮದುವೆ ಆಗಬಹುದಲ್ಲ’ ಎಂದು ಮನೆಯವರು ಪ್ರಶ್ನೆ ಹೇಳಿದರು. ‘ನನಗೆ ಗಿಲ್ಲಿ ಬೇಡ. ಗಿಲ್ಲಿಯ ರೀತಿಯ ಗುಣ ಇರೋ ಹುಡುಗ ಸಿಕ್ಕರೆ ಸಾಕು. ನಾನು ಅವನು ಬೆಸ್ಟ್ ಫ್ರೆಂಡ್ಸ್’ ಎಂದು ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು?

ಕಾವ್ಯಾ ಅವರನ್ನು ಕಂಡರೆ ರಕ್ಷಿತಾಗೆ ಸ್ವಲ್ಪವೂ ಆಗೋದಿಲ್ಲ. ಅವರ ವಿರುದ್ಧ ರಕ್ಷಿತಾ ಸಿಟ್ಟನ್ನು ತೋರಿಸುತ್ತಾ ಇರುತ್ತಾರೆ. ಇದಕ್ಕೆ ಕಾರಣ ಕಾವ್ಯಾ ಹಾಗೂ ಗಿಲ್ಲಿ ನಡುವಿನ ಗೆಳೆತನ ಎಂಬ ಮಾತೂ ಇದೆ. ಗಿಲ್ಲಿ ಸದಾ ಕಾವ್ಯಾನ ಜಪ ಮಾಡೋದನ್ನು ರಕ್ಷಿತಾಗೆ ಸಹಿಸಿಕೊಳ್ಳೋಕೆ ಸಾಧ್ಯವಾಗುವುದಿಲ್ಲ ಎನ್ನಲಾಗಿದೆ. ಗಿಲ್ಲಿ ಬಗ್ಗೆ ರಕ್ಷಿತಾಗೆ ವಿಶೇಷ ಭಾವನೆ ಇದೆ ಎಂಬ ಮಾತುಗಳು ಚರ್ಚೆಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ