AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನೇ ಕನ್​​ಫ್ಯೂಸ್ ಮಾಡಿದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ 12 ಮನೆಗೆ ಪ್ರವೇಶಿಸಿದ್ದಾರೆ. ಕನ್ನಡ ಮಾತನಾಡಲು ಹೆಣಗಾಡಿದರು. ಇದರಿಂದ ಸುದೀಪ್ ಎದುರು ವೇದಿಕೆಯಲ್ಲಿ ಭಾರಿ ಗೊಂದಲಕ್ಕೊಳಗಾದರು. ಮುಂಬೈನಲ್ಲಿ ಹುಟ್ಟಿ ಬೆಳೆದು, ಯೂಟ್ಯೂಬರ್ ಆಗಿ ಗುರುತಿಸಿಕೊಂಡಿರುವ ಅವರು, ತಮ್ಮ ಅರೆಬರೆ ಕನ್ನಡದಿಂದ ಸುದೀಪ್ ಅವರನ್ನೂ ಕನ್ಫ್ಯೂಸ್ ಮಾಡಿದರು.

ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನೇ ಕನ್​​ಫ್ಯೂಸ್ ಮಾಡಿದ ರಕ್ಷಿತಾ ಶೆಟ್ಟಿ
ಸುದೀಪ್-ರಕ್ಷಿತ್
ರಾಜೇಶ್ ದುಗ್ಗುಮನೆ
|

Updated on: Sep 29, 2025 | 1:23 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಮಂಗಳೂರು ಮೂಲದ ರಕ್ಷಿತಾ ಶೆಟ್ಟಿ ಕೂಡ ಸುದೀಪ್ ಅವರನ್ನು ನೋಡಿ ಸಾಕಷ್ಟು ಭಯಗೊಂಡರು. ಈ ವೇಳೆ ಅವರ ಕೈ ನಡುಗುತ್ತಾ ಇತ್ತು. ಅವರು ತಾವು ಕನ್​ಫ್ಯೂಸ್ ಆಗುವುದು ಅಲ್ಲದೆ, ಸುದೀಪ್ ಅವರನ್ನೂ ಕನ್​ಫ್ಯೂಸ್ ಮಾಡಿದರು.

ರಕ್ಷಿತಾ ಶೆಟ್ಟಿ ಅವರು ಮಂಗಳೂರು ಮೂಲದವರು. ಅವರು ಮುಂಬೈನಲ್ಲಿ ಹುಟ್ಟಿ ಬೆಳೆದವರು. ಅವರಿಗೆ ಕನ್ನಡ ಅಷ್ಟು ಸ್ಪಷ್ಟವಾಗಿ ಮಾತನಾಡೋಕೆ ಬರಲ್ಲ. ತಮ್ಮ ಅರೆಬರೆ ಕನ್ನಡದಲ್ಲೇ ಅವರು ಕುಕಿಂಗ್ ವಿಡಿಯೋ ಮಾಡುತ್ತಿದ್ದರು. ಈ ಕಾರಣಕ್ಕೆ ಅವರು ಟ್ರೋಲ್ ಆಗಿದ್ದರು. ಆದರೆ, ಈಗ ಅವರು ಬಿಗ್ ಬಾಸ್​ ಸ್ಪರ್ಧಿಯಾಗುವ ಅವಕಾಶ ಪಡೆದಿದ್ದಾರೆ.

ಬಿಗ್ ಬಾಸ್ ವೇದಿಕೆ ಏರಿ ಸುದೀಪ್ ಎದುರು ನಿಂತಾಗ ಅವರಿಗೆ ಏನು ಮಾತನಾಡಬೇಕು ಎಂಬುದೇ ಗೊತ್ತಾಗುತ್ತಾ ಇರಲಿಲ್ಲ. ಅವರು ಭಯದಲ್ಲೇ ಏನೇನೋ ಮಾತನಾಡಿದರು. ‘ಏಡಿ ತಿಂತೀರಾ’ ಎಂದು ಸುದೀಪ್ ಕೇಳಿದರು. ‘ಹೌದು ತಿಂತೇನೆ’ ಎಂದರು. ‘ಇಲ್ಲಿ ಏಡಿ ಕೊಡೋಕೆ ಆಗಲ್ಲ’ ಎಂದು ಸುದೀಪ್ ಹೇಳಿದರು.

ಇದನ್ನೂ ಓದಿ
Image
ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆ ಸಿನಿಮಾ ಆಗಿದೆ; JR NTR
Image
‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್
Image
‘ಬಿಗ್ ಬಾಸ್’ ಮನೆ ಪ್ರವೇಶಿಸಿದ ಎಲ್ಲಾ ಸ್ಪರ್ಧಿಗಳ ಫೋಟೋ, ಹೆಸರು, ವಿವರ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ನಾನು ರಕ್ಷಿತಾ ಶೆಟ್ಟಿ, ಹುಟ್ಟಿದ್ದು ಬೆಳೆದಿದ್ದು ಮುಂಬೈಲ್ಲಿ, ಶಾಲಾ-ಕಾಲೇಜ್ ಓದಿದ್ದು ಮುಂಬೈನಲ್ಲಿ. ಶಾಲಾ ಕಾಲೇಜು ಆದ್ಮೇಲೆ ಉಡುಪಿಗೆ ಬಂದೆ. ಶಾಲೆ-ಕಾಲೇಜು ಸಮಯದಲ್ಲಿ ರಜೆ ಸಿಕ್ಕಾಗ ಬರುತ್ತಿದೆ. ಕಾಲೇಜು ಮುಗಿದ ಬಳಿಕ ನಾನು ಸಂಪುರ್ಣವಾಗಿ ಅಜ್ಜಿ ಮನೆಗೆ ಶಿಫ್ಟ್ ಆದೆ. ಕೊರೊನಾ ಬಳಿಕ ಯೂಟ್ಯೂಬ್​ನೇ ವೃತ್ತಿಯಾಗಿ ಆಯ್ಕೆ ಮಾಡಿಕೊಂಡೆ’ ಎಂದರು. ಇದು ಸುದೀಪ್​ಗೆ ಸರಿಯಾಗಿ ಅರ್ಥ ಆಯಿತು.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆ ಪ್ರವೇಶಿಸಿದ 19 ಸ್ಪರ್ಧಿಗಳ ಫೋಟೋ, ಹೆಸರು, ವಿವರ ಇಲ್ಲಿದೆ

‘ಕೊರೊನಾ ಟೈಮ್​ನಲ್ಲಿ ಮೂರು ತಿಂಗಳು ಊರಿಗೆ ಹೋಗಿ ಬಂದಿದೀವಿ’ ಎಂದರು ರಕ್ಷಿತಾ. ‘ಉಡುಪಿ ಹೋಗಿ ಮುಂಬೈಗೆ ಬಂದಿದೀವಿ’ ಎಂದರು ರಕ್ಷಿತಾ. ಇದೆಲ್ಲ ಕೇಳಿ ಸುದೀಪ್ ಸಖತ್ ಕನ್​ಫ್ಯೂಸ್ ಆದರು. ಆ ಬಳಿಕ ಅವರು ಹೇಳಿದ ಒಂದಷ್ಟು ವಿಚಾರವನ್ನು ಹೇಗೋ ಅರ್ಥ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ