AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್

ರಕ್ಷಿತಾ ಶೆಟ್ಟಿ ಅವರ ಬಿಗ್ ಬಾಸ್ ಮನೆಯೊಳಗಿನ ವರ್ತನೆ ಬದಲಾಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸೀಕ್ರೆಟ್ ರೂಂ ಟಾಸ್ಕ್‌ನಲ್ಲಿ ಮಹಿಳಾ ಸ್ಪರ್ಧಿಗಳ ವೈಯಕ್ತಿಕ ಮೇಕಪ್ ಬ್ರಷ್‌ಗಳನ್ನು ನೆಲದ ಮೇಲೆ ಚೆಲ್ಲಿದ ಅವರ ಕ್ರಮವನ್ನು ಹಲವರು "ಕೀಳುಮಟ್ಟದ ಆಲೋಚನೆ" ಎಂದು ಟೀಕಿಸಿದ್ದಾರೆ. ವೈಯಕ್ತಿಕ ವಸ್ತುಗಳಿಗೆ ಅಗೌರವ ತೋರಿದ್ದಕ್ಕೆ ರಾಶಿಕಾ ಸೇರಿದಂತೆ ಇತರೆ ಸ್ಪರ್ಧಿಗಳು ನೋವು ವ್ಯಕ್ತಪಡಿಸಿದ್ದು, ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್
ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Dec 20, 2025 | 8:03 AM

Share

ರಕ್ಷಿತಾ ಶೆಟ್ಟಿ (Rakshita Shetty) ಅವರ ಆಟದಲ್ಲಿ ಸಂಪೂರ್ಣ ಬದಲಾವಣೆ ಕಾಣುತ್ತಿದೆ. ಮೊದಲಿನ ರಕ್ಷಿತಾ ಶೆಟ್ಟಿಗೂ ಈಗಿನ ರಕ್ಷಿತಾ ಶೆಟ್ಟಿಗೂ ತುಂಬಾನೇ ವ್ಯತ್ಯಾಸ ಇದೆ. ಇದನ್ನು ಅನೇಕರು ಗಮನಿಸಿದ್ದಾರೆ. ಈಗ ಅವರು ನಡೆದುಕೊಂಡ ರೀತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಅನೇಕರು ರಕ್ಷಿತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ತುಂಬಾನೇ ಕೆಳಮಟ್ಟದಲ್ಲಿ ಯೋಚಿಸುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ಸದ್ಯ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ಈ ವಾರ ಅವರು ಮತ್ತೆ ಬಿಗ್ ಬಾಸ್ ಮನೆ ಒಳಗೆ ಪ್ರವೇಶಿಸೋ ಸಾಧ್ಯತೆ ಇದೆ. ಡಿಸೆಂಬರ್ 19ರ ಎಪಿಸೋಡ್​​ನಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್​​ಗೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದರು. ಇದರ ಅನುಸಾರ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಸೀಕ್ರೆಟ್ ರೂಂನಿಂದ ಬಿಗ್ ಬಾಸ್ ಮನೆ ಒಳಗೆ ತೆರಳಿ ಕಸ ಹರಡಿ ಬರಬೇಕು.

ಇದನ್ನು ಕೇಳುತ್ತಿದ್ದಂತೆ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಎಗ್ಸೈಟ್ ಆದರು. ಸಿಕ್ಕಿದ್ದೇ ಚಾನ್ಸ್ ಎಂದು ಇಡೀ ಮನೆಯ ತುಂಬಾ ಥರ್ಮಕೋಲ್ ಚೂರು, ಪೇಪರ್ ಕಸವನ್ನು ಹರಡಿದರು. ಬಿಗ್ ಬಾಸ್ ಕೊಟ್ಟ ಟಾಸ್ಕ್ ಆದ್ದರಿಂದ ಮಾಡಲೇಬೇಕಿತ್ತು. ಆದರೆ, ಅವರು ಕೆಲವು ಮಹಿಳಾ ಸ್ಪರ್ಧಿಗಳ ವೈಯಕ್ತಿಕ ಮೇಕಪ್ ಬ್ರಶ್​​ಗಳನ್ನು ನೆಲಕ್ಕೆ ಹರಡಿದ್ದಾರೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ ಬ್ರಶ್​ಗಳು ನೆಲದ ಮೇಲೆ ಬಿದ್ದಿದ್ದನ್ನು ನೋಡುತ್ತಿದ್ದಂತೆ ರಾಶಿಕಾಗೆ ಸಾಕಷ್ಟು ಬೇಸರ ಆಯಿತು. ‘ಅವೆಲ್ಲ ನನ್ನ ಬ್ರಶ್​​ಗಳು. ಇದನ್ನು ಹೇಗೆ ಮರು ಜೋಡಿಸೋದು’ ಎಂದು ಅವರು ತಮ್ಮನ್ನು ತಾವು ಕೇಳಿಕೊಂಡರು. ಎಲ್ಲಕ್ಕಿಂತ ಮುಖ್ಯವಾಗಿ ಆ ಎಲ್ಲಾ ಬ್ರಶ್​​ಗಳು ಮುಖಕ್ಕೆ ಬಳಕೆ ಮಾಡೋದು. ನೆಲಕ್ಕೆ ಬಿದ್ದಾಗ ಧೂಳು-ಮಣ್ಣುಗಳು ಅದಕ್ಕೆ ಸೇರಿಕೊಳ್ಳಬಹುದು. ನಂತರ ಅದನ್ನು ಮುಖಕ್ಕೆ ಬಳಕೆ ಮಾಡಿದರೆ ಅಲರ್ಜಿ ಆಗಬಹುದು. ಇನ್ನು ಕಷ್ಟ ಪಟ್ಟು ದುಡಿದ ಹಣದಿಂದ ಮೇಕಪ್​ ಕಿಟ್​​ಗಳನ್ನು ಖರೀದಿ ಮಾಡಿರುತ್ತಾರೆ. ಇದನ್ನು ಹಾಳು ಮಾಡೋದು ಎಷ್ಟು ಸರಿ ಎಂದು ಅನೇಕರು ಕೇಳಿದ್ದಾರೆ. ರಕ್ಷಿತಾ ಈ ಕೀಳು ಬುದ್ಧಿಯನ್ನು ಬಿಡಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!