AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?

‘ತೆಲುಗು ಬಿಗ್​ ಬಾಸ್​  ಸೀಸನ್​ 5’ ಆರಂಭವಾಗಿ ಕೆಲ ದಿನಗಳು ಕಳೆದಿವೆ. ಈ ಶೋನ ಟಿಆರ್​ಪಿ ಎಷ್ಟಿರಬಹುದು ಎನ್ನುವ ಕುತೂಹಲ ಅನೇಕರಲ್ಲಿತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?
ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?
TV9 Web
| Edited By: |

Updated on:Sep 18, 2021 | 7:37 PM

Share

ತೆಲುಗು ಬಿಗ್​ ಬಾಸ್​ ಸೀಸನ್ 5ರ ಟಿಆರ್​ಪಿ ಕುಸಿದಿದೆ. ಪರಿಚಯದ ಮುಖಗಳು ಇಲ್ಲ ಅನ್ನೋದು ಇದಕ್ಕೆ ಪ್ರಮುಖ ಕಾರಣ. ತೀವ್ರವಾಗಿ ಕುಸಿದ ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ವಾಹಿನಿ ನಾನಾ ಕಸರತ್ತು ನಡೆಸುತ್ತಿದೆ. ಈಗ ವಾಹಿನಿಯವರು ತೆಲುಗಿನ ಸ್ಟಾರ್​ ನಟನ ಮೊರೆ ಹೋಗಿದ್ದಾರೆ. ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಹಾಗಾದರೆ, ನಿರೂಪಕ ಅಕ್ಕಿನೇನಿ ನಾಗಾರ್ಜುನ ಕಥೆ ಏನು ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ತೆಲುಗು ಬಿಗ್​ ಬಾಸ್​  ಸೀಸನ್​ 5’ ಆರಂಭವಾಗಿ ಕೆಲ ದಿನಗಳು ಕಳೆದಿವೆ. ಈ ಶೋನ ಟಿಆರ್​ಪಿ ಎಷ್ಟಿರಬಹುದು ಎನ್ನುವ ಕುತೂಹಲ ಅನೇಕರಲ್ಲಿತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದೆ. ಬಿಗ್​ ಬಾಸ್​ ಶೋ 15.70 ಟಿಆರ್​ಪಿ ಪಡೆದುಕೊಂಡಿದೆ. ಉಳಿದ ಧಾರಾವಾಹಿ ಹಾಗೂ ಶೋಗಳಿಗೆ ಹೋಲಿಕೆ ಮಾಡಿದರೆ ಬಿಗ್​ ಬಾಸ್​ ಟಿಆರ್​ಪಿ ಮುಂಚೂಣಿಯಲ್ಲಿದೆ. ಆದರೆ, ಶೋಗೆ ಆಗುತ್ತಿರುವ ವೆಚ್ಚಕ್ಕೆ ಹೋಲಿಕೆ ಮಾಡಿದರೆ ಬಿಗ್​ ಬಾಸ್​ ಟಿಆರ್​ಪಿ ಅಂದುಕೊಂಡ ಗುರಿತಲುಪಿಲ್ಲ. ಇದಕ್ಕೆ ವಾಹಿನಿ ಹೊಸ ಪ್ಲ್ಯಾನ್​ ಒಂದನ್ನು ರೂಪಿಸಿದೆ.

ಟಾಲಿವುಡ್​ನ ಖ್ಯಾತ ನಟ ರಾಮ್​ ಚರಣ್​ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಹಾಗಂತ ನಾಗಾರ್ಜುನ ಬದಲಿಗೆ ಇವರು ಬಿಗ್​ ಬಾಸ್​ ನಿರೂಪಣೆ ಮಾಡುತ್ತಿಲ್ಲ. ರಾಮ್​ ಚರಣ್​ ಬಿಗ್​ ಬಾಸ್​ ಮನೆ ಒಳಗೆ ತೆರಳಲಿದ್ದಾರೆ. ಅಲ್ಲಿ ಸ್ಪರ್ಧಿಗಳ ಜತೆ ಕೆಲ ಸಮಯ ಸಂವಾದ ನಡೆಸಲಿದ್ದಾರೆ.

ರಾಮ್ ಚರಣ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರದ್ದು. ಒಂದೊಮ್ಮೆ ಬಿಗ್​ ಬಾಸ್​ ಮನೆ ಒಳಗೆ ಅವರು ತೆರಳಿದರೆ ಬಿಗ್​ ಬಾಸ್​ ನೋಡುಗರ ಸಂಖ್ಯೆ ಹೆಚ್ಚಲಿದೆ. ಈ ಮೂಲಕ ಜನರನ್ನು ಹೆಚ್ಚು ಸೆಳೆಯುವ ಆಲೋಚನೆಯಲ್ಲಿ ವಾಹಿನಿ ಇದೆ.

ಈ ಬಾರಿ 19 ಸ್ಪರ್ಧಿಗಳು ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ಮತ್ತು ಕಿರುತೆರೆ ಸೆಲೆಬ್ರಿಟಿಗಳ ಜೊತೆಗೆ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿರುವ ವ್ಯಕ್ತಿಗಳಿಗೂ ಈ ಬಾರಿ ತೆಲುಗು ಬಿಗ್​ ಬಾಸ್​ ಚಾನ್ಸ್​ ನೀಡಿದೆ. ಆದರೆ, ಇವರಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಗೊತ್ತಿರುವವರು. ಉಳಿದವರೆಲ್ಲ ಹೊಸ ಮುಖಗಳೇ. ಇದರಿಂದ ವೀಕ್ಷಕರು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ 

ಬಿಗ್​ ಬಾಸ್​ ಟಿಆರ್​ಪಿಯಲ್ಲಿ ತೀವ್ರ ಕುಸಿತ; ಅರ್ಧಕ್ಕೆ ನಿಲ್ಲಲಿದೆ ಶೋ?

Published On - 6:57 pm, Sat, 18 September 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ