AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?

‘ತೆಲುಗು ಬಿಗ್​ ಬಾಸ್​  ಸೀಸನ್​ 5’ ಆರಂಭವಾಗಿ ಕೆಲ ದಿನಗಳು ಕಳೆದಿವೆ. ಈ ಶೋನ ಟಿಆರ್​ಪಿ ಎಷ್ಟಿರಬಹುದು ಎನ್ನುವ ಕುತೂಹಲ ಅನೇಕರಲ್ಲಿತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?
ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ಸ್ಟಾರ್​ ನಟನ ಮೊರೆ ಹೋದ ವಾಹಿನಿ; ಅಕ್ಕಿನೇನಿ ನಾಗಾರ್ಜುನ ಕಥೆ ಏನು?
TV9 Web
| Edited By: |

Updated on:Sep 18, 2021 | 7:37 PM

Share

ತೆಲುಗು ಬಿಗ್​ ಬಾಸ್​ ಸೀಸನ್ 5ರ ಟಿಆರ್​ಪಿ ಕುಸಿದಿದೆ. ಪರಿಚಯದ ಮುಖಗಳು ಇಲ್ಲ ಅನ್ನೋದು ಇದಕ್ಕೆ ಪ್ರಮುಖ ಕಾರಣ. ತೀವ್ರವಾಗಿ ಕುಸಿದ ಬಿಗ್​ ಬಾಸ್​ ಟಿಆರ್​ಪಿ ಹೆಚ್ಚಿಸೋಕೆ ವಾಹಿನಿ ನಾನಾ ಕಸರತ್ತು ನಡೆಸುತ್ತಿದೆ. ಈಗ ವಾಹಿನಿಯವರು ತೆಲುಗಿನ ಸ್ಟಾರ್​ ನಟನ ಮೊರೆ ಹೋಗಿದ್ದಾರೆ. ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಹಾಗಾದರೆ, ನಿರೂಪಕ ಅಕ್ಕಿನೇನಿ ನಾಗಾರ್ಜುನ ಕಥೆ ಏನು ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ತೆಲುಗು ಬಿಗ್​ ಬಾಸ್​  ಸೀಸನ್​ 5’ ಆರಂಭವಾಗಿ ಕೆಲ ದಿನಗಳು ಕಳೆದಿವೆ. ಈ ಶೋನ ಟಿಆರ್​ಪಿ ಎಷ್ಟಿರಬಹುದು ಎನ್ನುವ ಕುತೂಹಲ ಅನೇಕರಲ್ಲಿತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದೆ. ಬಿಗ್​ ಬಾಸ್​ ಶೋ 15.70 ಟಿಆರ್​ಪಿ ಪಡೆದುಕೊಂಡಿದೆ. ಉಳಿದ ಧಾರಾವಾಹಿ ಹಾಗೂ ಶೋಗಳಿಗೆ ಹೋಲಿಕೆ ಮಾಡಿದರೆ ಬಿಗ್​ ಬಾಸ್​ ಟಿಆರ್​ಪಿ ಮುಂಚೂಣಿಯಲ್ಲಿದೆ. ಆದರೆ, ಶೋಗೆ ಆಗುತ್ತಿರುವ ವೆಚ್ಚಕ್ಕೆ ಹೋಲಿಕೆ ಮಾಡಿದರೆ ಬಿಗ್​ ಬಾಸ್​ ಟಿಆರ್​ಪಿ ಅಂದುಕೊಂಡ ಗುರಿತಲುಪಿಲ್ಲ. ಇದಕ್ಕೆ ವಾಹಿನಿ ಹೊಸ ಪ್ಲ್ಯಾನ್​ ಒಂದನ್ನು ರೂಪಿಸಿದೆ.

ಟಾಲಿವುಡ್​ನ ಖ್ಯಾತ ನಟ ರಾಮ್​ ಚರಣ್​ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಹಾಗಂತ ನಾಗಾರ್ಜುನ ಬದಲಿಗೆ ಇವರು ಬಿಗ್​ ಬಾಸ್​ ನಿರೂಪಣೆ ಮಾಡುತ್ತಿಲ್ಲ. ರಾಮ್​ ಚರಣ್​ ಬಿಗ್​ ಬಾಸ್​ ಮನೆ ಒಳಗೆ ತೆರಳಲಿದ್ದಾರೆ. ಅಲ್ಲಿ ಸ್ಪರ್ಧಿಗಳ ಜತೆ ಕೆಲ ಸಮಯ ಸಂವಾದ ನಡೆಸಲಿದ್ದಾರೆ.

ರಾಮ್ ಚರಣ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರದ್ದು. ಒಂದೊಮ್ಮೆ ಬಿಗ್​ ಬಾಸ್​ ಮನೆ ಒಳಗೆ ಅವರು ತೆರಳಿದರೆ ಬಿಗ್​ ಬಾಸ್​ ನೋಡುಗರ ಸಂಖ್ಯೆ ಹೆಚ್ಚಲಿದೆ. ಈ ಮೂಲಕ ಜನರನ್ನು ಹೆಚ್ಚು ಸೆಳೆಯುವ ಆಲೋಚನೆಯಲ್ಲಿ ವಾಹಿನಿ ಇದೆ.

ಈ ಬಾರಿ 19 ಸ್ಪರ್ಧಿಗಳು ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ಮತ್ತು ಕಿರುತೆರೆ ಸೆಲೆಬ್ರಿಟಿಗಳ ಜೊತೆಗೆ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿರುವ ವ್ಯಕ್ತಿಗಳಿಗೂ ಈ ಬಾರಿ ತೆಲುಗು ಬಿಗ್​ ಬಾಸ್​ ಚಾನ್ಸ್​ ನೀಡಿದೆ. ಆದರೆ, ಇವರಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಗೊತ್ತಿರುವವರು. ಉಳಿದವರೆಲ್ಲ ಹೊಸ ಮುಖಗಳೇ. ಇದರಿಂದ ವೀಕ್ಷಕರು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ 

ಬಿಗ್​ ಬಾಸ್​ ಟಿಆರ್​ಪಿಯಲ್ಲಿ ತೀವ್ರ ಕುಸಿತ; ಅರ್ಧಕ್ಕೆ ನಿಲ್ಲಲಿದೆ ಶೋ?

Published On - 6:57 pm, Sat, 18 September 21

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ