AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷಾ ವಿರುದ್ಧ ದೂರು, ಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ಪೊಲೀಸರು

Bigg Boss: ಬಿಗ್​ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ, ಬಿಗ್​ಬಾಸ್ ಮನೆಯಲ್ಲಿ ಜಾತಿ ನಿಂದನೆ ಮಾತೊಂದನ್ನು ಆಡಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಿಗ್​ಬಾಸ್​ಗೆ ನೊಟೀಸ್ ನೀಡಿದ್ದಾರೆ.

ತನಿಷಾ ವಿರುದ್ಧ ದೂರು, ಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ಪೊಲೀಸರು
ಮಂಜುನಾಥ ಸಿ.
|

Updated on: Nov 16, 2023 | 8:41 PM

Share

ಈ ಬಾರಿ ಬಿಗ್​ಬಾಸ್ ಮನೆಯ ಒಳಗಿನ ಜಗಳ, ವಿವಾದಗಳಿಗಿಂತಲೂ ಹೊರಗೆ ಸೃಷ್ಟಿಸುತ್ತಿರುವ ವಿವಾದಗಳಿಂದ ಹೆಚ್ಚು ಹೆಚ್ಚು ಸುದ್ದಿಯಾಗುತ್ತಿದೆ. ಮೊದಲಿಗೆ ಬಿಗ್​ಬಾಸ್ ಸ್ಪರ್ಧಿ ವರ್ತೂರು ಪ್ರಕಾಶ್ ಹುಲಿ ಉಗುರು ಧರಿಸಿದ್ದು ವಿವಾದವಾಗಿ ಅವರು ಜೈಲು ಪಾಲಾದರು. ಅದರ ಬಳಿಕ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳಿಗೆ ಹುಲಿ ಉಗುರಿನ ಪ್ರಕರಣದಲ್ಲಿ ನೊಟೀಸ್ ಜಾರಿ ಆಗಿ, ವಿಚಾರಣೆ ಎದುರಿಸಬೇಕಾಯ್ತು. ಅದು ಮುಗಿಯುತ್ತಿದ್ದಂತೆ ಈಗ ಮತ್ತೊಬ್ಬ ಸ್ಪರ್ಧಿ ತನಿಷಾ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಎಫ್​ಐಆರ್ ನಮೂದು ಮಾಡಿಕೊಂಡಿದ್ದಾರೆ.

ತನಿಷಾ, ಬಿಗ್​ಬಾಸ್ ಮನೆಯಲ್ಲಿ ಆಡಿದ ಮಾತೊಂದು ವಿವಾದಕ್ಕೆ ಕಾರಣವಾಗಿದೆ. ತನಿಷಾ, ಜಾತಿ ನಿಂದನೆ ಮಾಡಿದ್ದಾರೆಂದು ಭೋವಿ ಸಮುದಾಯದ ಮಹಿಳಾ ವಿಭಾಗ ಅಧ್ಯಕ್ಷರಾದ ಪದ್ಮಾ ಎಂಬುವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಮನಗರ ಪೊಲೀಸರು ಬಿಗ್​ಬಾಸ್​ ರಿಯಾಲಿಟಿ ಶೋನ ಆಯೋಜಕರಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ಪ್ರಕರಣ ಸಂಬಂಧ ಮಾಧ್ಯಮದೊಟ್ಟಿಗೆ ಮಾತನಾಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ”ಬಿಗ್​ಬಾಸ್ ಶೋನ ಸ್ಪರ್ಧಿ ತನಿಷಾ ಕುಪ್ಪಂಡ ಭೋವಿ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆಂದು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂತೆಯೇ ಸ್ಪರ್ಧಿ ತನಿಷಾ ವಿರುದ್ಧ ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಷಾ ನಿಂದನಾತ್ಮಕ ಪದ ಬಳಸಿದ್ದಾರೆ ಎನ್ನಲಾದ ಪ್ರೋಮೋ ಅನ್ನು ಪರಿಶೀಲಿಸಿದ್ದು, ಮೂಲ ದೃಶ್ಯಗಳ ವಿಡಿಯೋವನ್ನು ನೀಡುವಂತೆ ನೋಟೀಸ್ ನೀಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ:‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’

”ಪ್ರಕರಣವನ್ನು ನಿಯಮಾನುಸಾರ ತನಿಖೆ ನಡೆಸುತ್ತಿದ್ದೇವೆ. ಬಿಗ್​ಬಾಸ್​ನವರು ಕೊಡುವ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮಾಗಡಿಯ ಡಿವೈಎಸ್​ಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ” ಎಂದಿದ್ದಾರೆ.

ಟಾಸ್ಕ್​ ಒಂದರಲ್ಲಿ ಉಸ್ತುವಾರಿಯಾಗಿದ್ದ ಡ್ರೋನ್ ಪ್ರತಾಪ್, ತಮ್ಮ ತಂಡಕ್ಕೆ ಅನುಕೂಲವಾಗುವಂತೆ ಆಡಲಿಲ್ಲ ಎಂದು ತನಿಷಾ, ಡ್ರೋನ್ ಪ್ರತಾಪ್ ಅನ್ನು ಬೈಯ್ಯುವ ಸಮಯದಲ್ಲಿ ಮಾಡಿದ್ದ ಪದ ಬಳಕೆಯ ಬಗ್ಗೆ ಭೋವಿ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದ್ದು, ತನಿಷಾ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು