AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮ ಶ್ಯಾಮ ಭಾಮ’ ಕ್ಲೈಮ್ಯಾಕ್ಸ್ ಹಿಂದಿದೆ ವಿಶೇಷ ಕಥೆ; ರಿವೀಲ್ ಮಾಡಿದ ರಮೇಶ್ ಅರವಿಂದ್

‘ರಾಮ ಶ್ಯಾಮ ಭಾಮ’ ಚಿತ್ರದ ರಿಲೀಸ್‌ಗೆ 20 ವರ್ಷಗಳು ತುಂಬುತ್ತಿವೆ. ಈ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್‌ನಲ್ಲಿ ನಡೆದ ಒಂದು ಆಸಕ್ತಿದಾಯಕ ಘಟನೆಯನ್ನು ರಮೇಶ್ ಅರವಿಂದ್ ಅವರು ಹಂಚಿಕೊಂಡಿದ್ದಾರೆ. ಊರ್ವಶಿ ಅವರು ತಮ್ಮ ಡೈಲಾಗ್ ಬದಲಿಸಿ ನಾಯಿ ರೀತಿ ಬೊಗಳುವುದಾಗಿ ಹೇಳಿದ್ದರು. ರಮೇಶ್ ಅವರು ಅವರ ನಿರ್ಧಾರಕ್ಕೆ ಒಪ್ಪಿ, ಅದರಿಂದ ಚಿತ್ರಕ್ಕೆ ಹೊಸ ಆಯಾಮ ಸೇರಿತು ಮತ್ತು ಚಿತ್ರ ಸೂಪರ್ ಹಿಟ್ ಆಯಿತು ಎಂದು ಹೇಳಿದ್ದಾರೆ.

‘ರಾಮ ಶ್ಯಾಮ ಭಾಮ’ ಕ್ಲೈಮ್ಯಾಕ್ಸ್ ಹಿಂದಿದೆ ವಿಶೇಷ ಕಥೆ; ರಿವೀಲ್ ಮಾಡಿದ ರಮೇಶ್ ಅರವಿಂದ್
ರಮೇಶ್ ಅರವಿಂದ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 10, 2025 | 8:02 AM

Share

‘ರಾಮ ಶ್ಯಾಮ ಭಾಮ’ ಸಿನಿಮಾ ರಿಲೀಸ್ ಆಗಿ 20 ವರ್ಷಗಳು ತುಂಬುತ್ತಾ ಬಂದಿವೆ. ಈ ಚಿತ್ರ 2005ರ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ರಮೇಶ್ ಅರವಿಂದ್, ಕಮಲ್ ಹಾಸನ್, ಊರ್ವಶಿ, ಶ್ರುತಿ, ಡೈಸಿ ಬೋಪಣ್ಣ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ರಮೇಶ್ ಅರವಿಂದ್ ಅವರೇ ನಿರ್ದೇಶನ ಮಾಡಿದ್ದರು. ಈ ಚಿತ್ರದ ಕ್ಲೈಮ್ಯಾಕ್ಸ್ ಶೂಟ್ ಬಗ್ಗೆ ರಮೇಶ್ ಅರವಿಂದ್ ಅವರು ಮಾತನಾಡಿದ್ದಾರೆ. ‘ಜೀ ಕನ್ನಡ’ದ ‘ಸರೆಗಮಪ’ ವೇದಿಕೆ ಮೇಲೆ ಅವರು ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಹೇಳಿದ್ದಾರೆ.

ರಮೇಶ್ ಅರವಿಂದ್ ಅವರು ನಿರ್ದೇಶನ ಮಾಡುವಾಗ ಕಲಾವಿದರು ಹೇಳುವ ಮಾತನ್ನು ಕೇಳುತ್ತಾರೆ. ತಮ್ಮ ಮಾತೇ ಅಂತಿಮ ಎಂದು ಅವರು ನಿರ್ಧಾರಕ್ಕೆ ಬರೋದಿಲ್ಲ. ‘ರಾಮ ಶ್ಯಾಮ ಭಾಮ’ ಸಿನಿಮಾ ಶೂಟ್ ಸಂದರ್ಭದಲ್ಲಿ ಇಂಥದ್ದೇ ಘಟನೆ ನಡೆದಿತ್ತು. ಈ ಬಗ್ಗೆ ಅವರು ಹೇಳಿದ್ದಾರೆ. ಆ ಸಂದರ್ಭ ಯಾವ ರೀತಿ ಇತ್ತು, ಡೈಲಾಗ್​ನ ಯಾವ ರೀತಿ ನೀಡಲಾಗಿತ್ತು ಎಂಬ ಬಗ್ಗೆ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ತಮ್ಮ ಜೀವನದ ಪ್ರಮುಖ ಮಹಿಳೆಯರನ್ನು ಪರಿಚಯಿಸಿದ ರಮೇಶ್ ಅರವಿಂದ್
Image
ಸರಿಗಮಪ ವೇದಿಕೆ ಮೇಲೆ 28 ವರ್ಷಗಳ ಬಳಿಕ ತಮ್ಮದೇ ಚಿತ್ರದ ಹಾಡು ಕೇಳಿದ ರಮೇಶ್
Image
‘ನೀವು ನನ್ನ ಹಾಗೆ ಬೆಳೆಸಿದ್ದೀರಿ’; ತಂದೆ ರಮೇಶ್ ಅರವಿಂದ್ ಬಗ್ಗೆ ಮಗಳ ಮಾತು
View this post on Instagram

A post shared by Zee Kannada (@zeekannada)

‘ರಾಮ ಶ್ಯಾಮ ಭಾಮ ಚಿತ್ರದ ಕ್ಲೈಮ್ಯಾಕ್ಸ್ ಶೂಟ್ ಮಾಡುತ್ತಿದ್ದೆವು. ಶಾಟ್ ಎಲ್ಲವೂ ಡಿಸೈಡ್ ಮಾಡಾಗಿತ್ತು. ಎಲ್ಲರಿಗೂ ಡೈಲಾಗ್ ಕೊಟ್ಟಾಗಿತ್ತು. ಆಗ ಊರ್ವಶಿ ಅವರು ಬಂದು ನಾನು ಡೈಲಾಗ್ ಹೇಳುವುದಿಲ್ಲ, ನಾಯಿ ರೀತಿ ಬೊಗಳುತ್ತೇನೆ ಎಂದರು. ಇಷ್ಟುದ್ದ ಡೈಲಾಗ್​ ಬರೆದಿದ್ದೇನೆ. ಬೊಗಳುತ್ತೇನೆ ಎನ್ನುತ್ತೀರಲ್ಲ ಎಂದು ಅವರಿಗೆ ಕೇಳಿದೆ. ಕಮಲ್ ಹತ್ತಿರ ಹೋಗಿ ಊರ್ವಶಿ ನಾಯಿ ರೀತಿ ಬೊಗಳುತ್ತಾರಂತೆ ಎಂದೆ. ನಾನು ಹಾಗೆಯೇ ಬೊಗಳುತ್ತೇನೆ ಎಂದು ಕಮಲ್ ಹಾಸನ್ ಹೇಳಿದರು. ಈ ದೃಶ್ಯ ಹಿಟ್ ಆಗುತ್ತದೆ ಎಂದುಕೊಂಡೆ’ ಎಂದರು ರಮೇಶ್.

‘ಆ ಬಳಿಕ ದೃಶ್ಯ ಶುರುವಾಯ್ತು. ಸಿನಿಮಾ ಮಾಡುವಾಗ ಯಾವ ಕಿಟಕಿಯಿಂದ ಏನು ಹಾರಿ ಬರುತ್ತದೆ ಎಂದು ಹೇಳೋಕೆ ಆಗಲ್ಲ. ಹೀಗೆ ಹಾರಿ ಬಂದಾಗ ಅದನ್ನು ಹಿಡಿದುಕೊಳ್ಳಬೇಕು. ನಾನು ಪ್ರಿಪರ್​ ಆಗಿದ್ದೇನೆ ಇದನ್ನೇ ಮಾಡುತ್ತೇನೆ ಎಂದು ಹೇಳೋಕೆ ಆಗಲ್ಲ. ಹೊಸ ವಿಚಾರ ಬಂದಿದೆ ಎಂದಾಗ ಅದನ್ನು ಮಾಡಲ್ಲ ಎಂದು ಹೇಳೋಕೆ ಆಗಲ್ಲ’ ಎಂದಿದ್ದಾರೆ ರಮೇಶ್ ಅರವಿಂದ್.

ಇದನ್ನೂ ಓದಿ: ತಮ್ಮ ಜೀವನದ ಪ್ರಮುಖ ಮಹಿಳೆಯರನ್ನು ಪರಿಚಯಿಸಿದ ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ಊರ್ವಶಿಯ ನಿರ್ಧಾರಕ್ಕೆ ಓಕೆ ಎಂದಿದ್ದಕ್ಕೆ ದೃಶ್ಯ ಅಷ್ಟು ಚೆನ್ನಾಗಿ ಮೂಡಿ ಬಂತು. ಸಿನಿಮಾ ಕೂಡ ಸೂಪರ್ ಹಿಟ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ