AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ

ಧಾರಾವಾಹಿಗಳು, ರಿಯಾಲಿಟಿ ಶೋ ಮೊದಲಾದ ಕಾರ್ಯಕ್ರಮಗಳ ಪ್ರಮೋಷನ್​ಗೆ ಹೊಸ ಹೊಸ ತಂತ್ರ ಬಳಸಲಾಗುತ್ತದೆ. ಈಗ ‘ಜೀ ಪಿಚ್ಚರ್​’ನ ಶಾರ್ಟ್​ ಫಿಲ್ಮ್ ಸ್ಪರ್ಧೆ ಏರ್ಪಡಿಸಿದೆ. ಇದರ ಪ್ರಮೋಷನ್​ಗೆ ಪೆನ್​ಡ್ರೈವ್ ಡ್ರಾಮಾ ಮಾಡಲಾಗಿದೆ.

ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on: May 25, 2024 | 7:44 AM

Share

ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಲವು ಹುಡುಗಿಯರ ಜೊತೆ ಅವರು ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಆಗಿದೆ. ಪೆನ್​ಡ್ರೈವ್​ನಲ್ಲಿ ಈ ವಿಡಿಯೋಗಳನ್ನು ಹಾಕಿ ಎಲ್ಲ ಕಡೆ ಹಂಚಲಾಗಿದೆ ಎನ್ನುವ ಆರೋಪವೂ ಇದೆ. ಈ ಮಧ್ಯೆ ಅಭಿಮಾನಿಯೋರ್ವ ರಮೇಶ್​ ಅರವಿಂದ್​ಗೆ ಪೆನ್​ಡ್ರೈವ್ ನೀಡಿದ್ದಾರೆ. ಇದನ್ನು ನೋಡಿ ಅವರು ಶಾಕ್ ಆಗಿದ್ದಾರೆ. ಅಷ್ಟಕ್ಕೂ ಅಭಿಮಾನಿ ರಮೇಶ್ ಅರವಿಂದ್​ಗೆ ಪೆನ್​ಡ್ರೈವ್ ಕೊಟ್ಟಿದ್ದು ಏಕೆ? ಆ ಪೆನ್​ಡ್ರೈವ್​ನಲ್ಲಿ ಏನಿತ್ತು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಧಾರಾವಾಹಿಗಳು, ರಿಯಾಲಿಟಿ ಶೋ ಮೊದಲಾದ ಕಾರ್ಯಕ್ರಮಗಳ ಪ್ರಮೋಷನ್​ಗೆ ಹೊಸ ಹೊಸ ತಂತ್ರ ಬಳಸಲಾಗುತ್ತದೆ. ಈಗ ‘ಜೀ ಪಿಚ್ಚರ್​’ನ ಶಾರ್ಟ್​ ಫಿಲ್ಮ್ ಸ್ಪರ್ಧೆ ಏರ್ಪಡಿಸಿದೆ. ಇದರ ಪ್ರಮೋಷನ್​ಗೆ ಪೆನ್​ಡ್ರೈವ್ ಡ್ರಾಮಾ ಮಾಡಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಮೇಶ್ ಅರವಿಂದ್ ಅವರು ಸೆಟ್​ನಿಂದ ಬರುತ್ತಾ ಇರುತ್ತಾರೆ. ಆಗ ಅವರ ಸಹಾಯಕರು ಬಂದು, ‘ಇವರು ನಿಮಗೆ ಏನನ್ನೋ ಕೊಡಬೇಕು ಎಂದು ಬೆಳಗಿನಿಂದ ಕಾಯುತ್ತಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ. ಆಗ ಕುತೂಹಲಕ್ಕೆ ಒಳಗಾಗುವ ರಮೇಶ್ ಅರವಿಂದ್ ಎದುರಿದ್ದ ವ್ಯಕ್ತಿ ಬಳಿ ಅದನ್ನು ಕೊಡುವಂತೆ ಕೇಳುತ್ತಾರೆ. ಆಗ ಎದುರಿದ್ದ ಅಭಿಮಾನಿ ಪೆನ್​​ಡ್ರೈವ್ ನೀಡುತ್ತಾರೆ.

ಇದನ್ನೂ ಓದಿ: ರಮೇಶ್ ಅರವಿಂದ್, ಅನುಶ್ರೀ ಸೇರಿ ‘ಮಹಾನಟಿ’ ತಂಡದ ವಿರುದ್ಧ ದಾಖಲಾಯ್ತು ದೂರು; ಕಾರಣವೇನು?

ಆಗ ರಮೇಶ್ ಅರವಿಂದ್ ಶಾಕ್​ಗೆ ಒಳಗಾಗುತ್ತಾರೆ. ‘ಏನಿದು? ಮೊದಲು ಪೆನ್​ಡ್ರೈವ್​ನ ಫ್ರೆಮ್​ನಿಂದ ತೆಗೆಯಿರಿ’ ಎಂದು ಕೇಳುತ್ತಾರೆ. ‘ನಾನೊಂದು ಶಾರ್ಟ್​ ಫಿಲ್ಮ್​ ಮಾಡಿದ್ದೇನೆ. ಅದನ್ನು ನೀಡಬೇಕಿತ್ತು’ ಎಂದು ಅಭಿಮಾನಿ ಮಾಹಿತಿ ಹಂಚಿಕೊಳ್ಳುತ್ತಾರೆ. ‘ಕೆಳಗೆ ಕ್ಯೂಆರ್​ ಕೋಡ್ ಇದೆ ಅಥವಾ ಲಿಂಕ್ ಇದೆ. ಅಲ್ಲಿಗೆ ಹೋಗಿ ಏನ್ ಮಾಡಬೇಕು ಎಂದು ನಿಮಗೆ ಗೊತ್ತಾಗುತ್ತದೆ’ ಎಂದಿದ್ದಾರೆ ಅವರು.

ಕಿರುಚಿತ್ರದ ಷರತ್ತಿನ ವಿವರ

  1. ಕಿರುಚಿತ್ರ ನೋಂದಾಯಿಸಲು ಮೇ 21ರಿಂದ ಜೂನ್ 8ರವರೆಗೆ ‘ಜೀ ಆ್ಯಪ್​’ನಲ್ಲಿ ಅವಕಾಶ ಇದೆ.
  2. ಒಂದು ಅಥವಾ ಹಲವು ಕಿರುಚಿತ್ರ ಸ್ವೀಕರಿಸಲಾಗುತ್ತದೆ
  3. ಕಿರುಚಿತ್ರ ಕನ್ನಡ ಭಾಷೆಯಲ್ಲೇ ಇರಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​