AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ

ಧಾರಾವಾಹಿಗಳು, ರಿಯಾಲಿಟಿ ಶೋ ಮೊದಲಾದ ಕಾರ್ಯಕ್ರಮಗಳ ಪ್ರಮೋಷನ್​ಗೆ ಹೊಸ ಹೊಸ ತಂತ್ರ ಬಳಸಲಾಗುತ್ತದೆ. ಈಗ ‘ಜೀ ಪಿಚ್ಚರ್​’ನ ಶಾರ್ಟ್​ ಫಿಲ್ಮ್ ಸ್ಪರ್ಧೆ ಏರ್ಪಡಿಸಿದೆ. ಇದರ ಪ್ರಮೋಷನ್​ಗೆ ಪೆನ್​ಡ್ರೈವ್ ಡ್ರಾಮಾ ಮಾಡಲಾಗಿದೆ.

ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on: May 25, 2024 | 7:44 AM

Share

ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಲವು ಹುಡುಗಿಯರ ಜೊತೆ ಅವರು ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೈರಲ್ ಆಗಿದೆ. ಪೆನ್​ಡ್ರೈವ್​ನಲ್ಲಿ ಈ ವಿಡಿಯೋಗಳನ್ನು ಹಾಕಿ ಎಲ್ಲ ಕಡೆ ಹಂಚಲಾಗಿದೆ ಎನ್ನುವ ಆರೋಪವೂ ಇದೆ. ಈ ಮಧ್ಯೆ ಅಭಿಮಾನಿಯೋರ್ವ ರಮೇಶ್​ ಅರವಿಂದ್​ಗೆ ಪೆನ್​ಡ್ರೈವ್ ನೀಡಿದ್ದಾರೆ. ಇದನ್ನು ನೋಡಿ ಅವರು ಶಾಕ್ ಆಗಿದ್ದಾರೆ. ಅಷ್ಟಕ್ಕೂ ಅಭಿಮಾನಿ ರಮೇಶ್ ಅರವಿಂದ್​ಗೆ ಪೆನ್​ಡ್ರೈವ್ ಕೊಟ್ಟಿದ್ದು ಏಕೆ? ಆ ಪೆನ್​ಡ್ರೈವ್​ನಲ್ಲಿ ಏನಿತ್ತು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಧಾರಾವಾಹಿಗಳು, ರಿಯಾಲಿಟಿ ಶೋ ಮೊದಲಾದ ಕಾರ್ಯಕ್ರಮಗಳ ಪ್ರಮೋಷನ್​ಗೆ ಹೊಸ ಹೊಸ ತಂತ್ರ ಬಳಸಲಾಗುತ್ತದೆ. ಈಗ ‘ಜೀ ಪಿಚ್ಚರ್​’ನ ಶಾರ್ಟ್​ ಫಿಲ್ಮ್ ಸ್ಪರ್ಧೆ ಏರ್ಪಡಿಸಿದೆ. ಇದರ ಪ್ರಮೋಷನ್​ಗೆ ಪೆನ್​ಡ್ರೈವ್ ಡ್ರಾಮಾ ಮಾಡಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಮೇಶ್ ಅರವಿಂದ್ ಅವರು ಸೆಟ್​ನಿಂದ ಬರುತ್ತಾ ಇರುತ್ತಾರೆ. ಆಗ ಅವರ ಸಹಾಯಕರು ಬಂದು, ‘ಇವರು ನಿಮಗೆ ಏನನ್ನೋ ಕೊಡಬೇಕು ಎಂದು ಬೆಳಗಿನಿಂದ ಕಾಯುತ್ತಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ. ಆಗ ಕುತೂಹಲಕ್ಕೆ ಒಳಗಾಗುವ ರಮೇಶ್ ಅರವಿಂದ್ ಎದುರಿದ್ದ ವ್ಯಕ್ತಿ ಬಳಿ ಅದನ್ನು ಕೊಡುವಂತೆ ಕೇಳುತ್ತಾರೆ. ಆಗ ಎದುರಿದ್ದ ಅಭಿಮಾನಿ ಪೆನ್​​ಡ್ರೈವ್ ನೀಡುತ್ತಾರೆ.

ಇದನ್ನೂ ಓದಿ: ರಮೇಶ್ ಅರವಿಂದ್, ಅನುಶ್ರೀ ಸೇರಿ ‘ಮಹಾನಟಿ’ ತಂಡದ ವಿರುದ್ಧ ದಾಖಲಾಯ್ತು ದೂರು; ಕಾರಣವೇನು?

ಆಗ ರಮೇಶ್ ಅರವಿಂದ್ ಶಾಕ್​ಗೆ ಒಳಗಾಗುತ್ತಾರೆ. ‘ಏನಿದು? ಮೊದಲು ಪೆನ್​ಡ್ರೈವ್​ನ ಫ್ರೆಮ್​ನಿಂದ ತೆಗೆಯಿರಿ’ ಎಂದು ಕೇಳುತ್ತಾರೆ. ‘ನಾನೊಂದು ಶಾರ್ಟ್​ ಫಿಲ್ಮ್​ ಮಾಡಿದ್ದೇನೆ. ಅದನ್ನು ನೀಡಬೇಕಿತ್ತು’ ಎಂದು ಅಭಿಮಾನಿ ಮಾಹಿತಿ ಹಂಚಿಕೊಳ್ಳುತ್ತಾರೆ. ‘ಕೆಳಗೆ ಕ್ಯೂಆರ್​ ಕೋಡ್ ಇದೆ ಅಥವಾ ಲಿಂಕ್ ಇದೆ. ಅಲ್ಲಿಗೆ ಹೋಗಿ ಏನ್ ಮಾಡಬೇಕು ಎಂದು ನಿಮಗೆ ಗೊತ್ತಾಗುತ್ತದೆ’ ಎಂದಿದ್ದಾರೆ ಅವರು.

ಕಿರುಚಿತ್ರದ ಷರತ್ತಿನ ವಿವರ

  1. ಕಿರುಚಿತ್ರ ನೋಂದಾಯಿಸಲು ಮೇ 21ರಿಂದ ಜೂನ್ 8ರವರೆಗೆ ‘ಜೀ ಆ್ಯಪ್​’ನಲ್ಲಿ ಅವಕಾಶ ಇದೆ.
  2. ಒಂದು ಅಥವಾ ಹಲವು ಕಿರುಚಿತ್ರ ಸ್ವೀಕರಿಸಲಾಗುತ್ತದೆ
  3. ಕಿರುಚಿತ್ರ ಕನ್ನಡ ಭಾಷೆಯಲ್ಲೇ ಇರಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ