AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಒಬ್ಬರ ಮೇಲೆ ಸಖತ್ ಲವ್ ಆಗಿದೆ’; ವೇದಿಕೆ ಮೇಲೆ ಮನಬಿಚ್ಚಿ ಮಾತನಾಡಿದ ರಮೋಲಾ

‘ಕನ್ನಡತಿ’ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿ ಫೇಮಸ್ ಆದವರು ರಮೋಲಾ. ಅವರು ಸಿನಿಮಾ ಒಪ್ಪಿಕೊಂಡ ಬಳಿಕ ಧಾರಾವಾಹಿಯಿಂದ ಹೊರ ಬಂದರು. ಅವರು ‘ರಿಚ್ಚಿ’ ಸಿನಿಮಾ ಮಾಡಿದ್ದಾರೆ. ಈಗ ಅವರು ಮತ್ತೆ ಕಿರುತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ವೇದಿಕೆ ಮೇಲೆ ಹೇಳಿದ ಮಾತು ಗಮನ ಸೆಳೆದಿದೆ.

‘ನನಗೆ ಒಬ್ಬರ ಮೇಲೆ ಸಖತ್ ಲವ್ ಆಗಿದೆ’; ವೇದಿಕೆ ಮೇಲೆ ಮನಬಿಚ್ಚಿ ಮಾತನಾಡಿದ ರಮೋಲಾ
ರಮೋಲಾ
ರಾಜೇಶ್ ದುಗ್ಗುಮನೆ
|

Updated on:Apr 03, 2025 | 1:32 PM

Share

ನಟಿ ರಮೋಲಾ (Ramola) ಅವರು ಈ ಮೊದಲು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನಿಯಾ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ಧಾರಾವಾಹಿಯಿಂದ ಹೊರ ಬಂದರು. ಈಗ ಅವರು ಸಿನಿಮಾ ಮಾಡಿದರು. ಈಗ ಅವರು ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಅವರು ಡ್ಯಾನ್ಸ್ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಿರುವಾಗಲೇ ರಮೋಲಾ ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ. ಒಬ್ಬರ ಮೇಲೆ ತುಂಬಾನೇ ಲವ್ ಆಗಿದೆ ಎಂದು ಹೇಳಿಕೊಂಡಿದ್ದಾರೆ.

ಈ ಬಾರಿ ಜೀ ಕನ್ನಡದಲ್ಲಿ ಮಹಾ ಸಂಗಮ ಆಗಿದೆ. ‘ಭರ್ಜರಿ ಬ್ಯಾಚುಲರ್ಸ್ 2’ ಹಾಗೂ ‘ಸರಿಗಮಪ’ ಶೋಗಳ ಸಂಗಮ ಆಗಿದೆ. ಈ ವಾರಾಂತ್ಯದಲ್ಲಿ ಇದು ಪ್ರಸಾರ ಕಾಣಲಿದೆ. ಈ ವೇದಿಕೆ ಮೇಲೆ ಸರಿಗಮಪ ಸ್ಪರ್ಧಿಗಳು ಹಾಡನ್ನು ಹೇಳಿದರೆ, ‘ಭರ್ಜರಿ ಬ್ಯಾಚುಲರ್ಸ್ 2’ ಸ್ಪರ್ಧಿಗಳು ಡ್ಯಾನ್ಸ್ ಮಾಡಲಿದ್ದಾರೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇದನ್ನೂ ಓದಿ
Image
ಹನುಮಂತ-ಬಾಳು ಬೆಳಗುಂದಿ ಭೇಟಿ; ಎರಡು ದೇಸಿ ಪ್ರತಿಭೆಗಳ ಸಮಾಗಮ
Image
ವಿವಾಹದ ಬಳಿಕ ನಯನಾತಾರ ಜೊತೆ ಅಫೇರ್; ಪ್ರಭುದೇವ ಜೀವನವೇ ಹಾಳಾಯಿತು
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

‘ಭರ್ಜರಿ ಬ್ಯಾಚುಲರ್ಸ್ 2’ನಲ್ಲಿ ರಮೋಲಾ ಅವರು ಬುಲೆಟ್ ಪ್ರಕಾಶ್ ಮಗ ರಕ್ಷಕ್ ಬುಲೆಟ್​ಗೆ ಜೊತೆಯಾಗಿದ್ದಾರೆ. ಇಬ್ಬರೂ ಒಟ್ಟಾಗಿ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್ ಮುಗಿದ ಬಳಿಕ ರಮೋಲಾ ತಮ್ಮ ಮನದಾಳದ ಮಾತನ್ನು ಹೇಳಿಕೊಂಡರು.

View this post on Instagram

A post shared by Zee Kannada (@zeekannada)

‘ಒಬ್ಬರ ಮೇಲೆ ನನಗೆ ಸಖತ್ ಲವ್ ಆಗಿದೆ. ಅದೇ ರಾಜೇಶ್ ಕೃಷ್ಣನ್. ಒಂದು ಡ್ಯಾನ್ಸ್ ಮಾಡಿ’ ಎಂದು ರಮೋಲಾ ಬೇಡಿಕೆ ಇಟ್ಟರು. ಇದನ್ನು ರಾಜೇಶ್ ಕೃಷ್ಣನ್ ಅವರು ಅಲ್ಲಗಳೆಯಲೇ ಇಲ್ಲ. ಅವರು ಒಪ್ಪಿ ಡ್ಯಾನ್ಸ್ ಮಾಡಿದರು. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ‘ಒಪ್ಪಂದ ಮುಗಿದು ವರ್ಷವಾಗಿದೆ’; ಕಾಲ್​ಶೀಟ್ ಕಿರಿಕ್ ಬಗ್ಗೆ ರಮೋಲಾ ಪ್ರತಿಕ್ರಿಯೆ

‘ಸರಿಗಮಪ’ ವೇದಿಕೆ ಮೇಲೆ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ಅವರು ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಇನ್ನು, ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ರವಿಚಂದ್ರನ್ ಹಾಗೂ ರಚಿತಾ ರಾಮ್ ಅವರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Thu, 3 April 25

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?