Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ನಿರೂಪಕರ ಬದಲಾವಣೆ; ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ​

ಬಿಗ್​ ಬಾಸ್​ ಸ್ಪರ್ಧಿಗಳು ಯಾರು ಎಂಬುದಕ್ಕಿಂತಲೂ ಆ ಕಾರ್ಯಕ್ರಮದ ನಿರೂಪಕರು ಯಾರು ಎಂಬುದೇ ಪ್ರೇಕ್ಷಕರಿಗೆ ಹೆಚ್ಚು ಮುಖ್ಯವಾಗುತ್ತದೆ. ಈಗ ಬಿಗ್​ ಬಾಸ್​ ನಿರೂಪಕರ ಸ್ಥಾನಕ್ಕೆ ನಟಿ ರಮ್ಯಾ ಕೃಷ್ಣ​ ಆಗಮಿಸಿದ್ದಾರೆ.

ಬಿಗ್​ ಬಾಸ್​ ನಿರೂಪಕರ ಬದಲಾವಣೆ; ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ​
ರಮ್ಯಾ ಕೃಷ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Nov 27, 2021 | 8:47 AM

ಕಿರುತೆರೆ ಪ್ರೇಕ್ಷಕರಿಗೆ ಬಿಗ್​ ಬಾಸ್ (Bigg Boss)​ ರಿಯಾಲಿಟಿ ಶೋ ಬಗ್ಗೆ ಸಖತ್​ ಕ್ರೇಜ್​. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್​ ಆಗಿದೆ. ಎಷ್ಟೋ ಬಾರಿ ಬಿಗ್​ ಬಾಸ್​ ಸ್ಪರ್ಧಿಗಳು ಯಾರು ಎಂಬುದಕ್ಕಿಂತಲೂ ಆ ಕಾರ್ಯಕ್ರಮದ ನಿರೂಪಣೆ ಯಾರು ಮಾಡುತ್ತಾರೆ ಎಂಬುದೇ ಹೆಚ್ಚು ಮುಖ್ಯವಾಗುತ್ತದೆ. ಕನ್ನಡದಲ್ಲಿ ಕಿಚ್ಚ ಸುದೀಪ್​ (Kichcha Sudeep), ಹಿಂದಿಯಲ್ಲಿ ಸಲ್ಮಾನ್​ ಖಾನ್​ ಅವರು ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ತೆಲುಗು ಮತ್ತು ತಮಿಳಿನಲ್ಲಿ ಬದಲಾವಣೆಗಳು ಆಗುತ್ತಿವೆ. ತಮಿಳು ಬಿಗ್​ ಬಾಸ್​ 5 (, Bigg Boss Tamil 5) ನಿರೂಪಣೆ ಮಾಡುತ್ತಿದ್ದ ಕಮಲ್​ ಹಾಸನ್​ (Kamal Haasan) ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಈಗ ನಟಿ ರಮ್ಯಾ ಕೃಷ್ಣ (Ramya Krishnan) ಆಗಮಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ.​

ಕಮಲ್​ ಹಾಸನ್​ ಅವರಿಗೆ ಕೊವಿಡ್​ ಸೋಂಕು ತಗುಲಿರುವುದು ಕೆಲವೇ ದಿನಗಳ ಹಿಂದೆ ಖಚಿತಗೊಂಡಿತು. ಸದ್ಯ ಅವರು ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಗೆ ಬ್ರೇಕ್​ ನೀಡಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಿರೂಪಣೆಯ ಜಬಾವ್ದಾರಿಯನ್ನು ಯಾರು ಹೊತ್ತುಕೊಳ್ಳುತ್ತಾರೆ ಎಂಬ ಪ್ರಶ್ನೆ ಮೂಡಿತು. ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ಅವರಿಗೆ ಈ ಕೆಲಸ ವಹಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಡಿತ್ತು. ಆದರೆ ಅದು ನಿಜವಾಗಿಲ್ಲ. ಸದ್ಯ ಬಹುಭಾಷಾ ಕಲಾವಿದೆ ರಮ್ಯಾ ಕೃಷ್ಣ ಹೆಸರು ಕೇಳಿಬರುತ್ತಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿರುವ ರಮ್ಯಾ ಕೃಷ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಕಾರ್ಯಕ್ರಮಗಳಿಗೆ ನಿರೂಪಕಿಯಾಗಿ, ಜಡ್ಜ್​ ಆಗಿ ಕೆಲಸ ಮಾಡಿದ ಅನುಭವವೂ ಅವರಿಗೆ ಇದೆ. ನಂ.1 ಜೋಡಿ, ಬಿಗ್​ ಬಾಸ್​ ಜೋಡಿಗಳ್​ ಮುಂತಾದ ಶೋಗಳಿಗೆ ಅವರು ನಿರ್ಣಾಯಕಿ ಆಗಿದ್ದರು.

2019ರಲ್ಲಿ ‘ಬಿಗ್​ ಬಾಸ್​ ತೆಲುಗು ಸೀಸನ್​ 3’ ನಿರೂಪಣೆಯನ್ನು ನಾಗಾರ್ಜುನ ಮಾಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಕೆಲವು ವಾರಗಳ ಕಾಲ ನಿರೂಪಣೆ ಮಾಡಲು ಸಾಧ್ಯವಾಗಿರಲಿಲ್ಲ. ಆಗ ಅವರ ಸ್ಥಾನವನ್ನು ತುಂಬಿದ್ದರು ರಮ್ಯಾ ಕೃಷ್ಣ. ಆ ಅನುಭವವನ್ನೇ ಇಟ್ಟುಕೊಂಡು ಅವರೀಗ ‘ತಮಿಳು ಬಿಗ್​ ಬಾಸ್​ ಸೀಸನ್​ 5’ ನಿರೂಪಣೆ ಮಾಡಲಿದ್ದಾರೆ ಎನ್ನಲಾಗಿದೆ. ಅವರು ಆಯ್ಕೆ ಆಗಿರುವ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.

ಇದನ್ನೂ ಓದಿ:

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

ದೇವರಿಗೆ ಮುಡಿ ಕೊಟ್ಟು, ಪುನೀತ್​ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್