ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಮನೆಯಲ್ಲಿ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಏಪ್ರಿಲ್ 15ರ ಎಪಿಸೋಡ್​ನಲ್ಲಿ ಅವರು ಬಿಗ್ ಬಾಸ್​ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಬಿಗ್ ಬಾಸ್​ನಿಂದಲೇ ಔಟ್ ಆಗಿದ್ದಾರೆ.

ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್
ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್
Follow us
|

Updated on:Oct 16, 2024 | 1:55 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್​ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

‘ಬಿಗ್ ಬಾಸ್​’ನಲ್ಲಿ ವಾತಾವರಣ ಹದಗೆಟ್ಟಿದೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋತ್ತೇನೆ’ ಎಂದು ಎಚ್ಚರಿಕೆ ನೀಡಿದ್ದರು. ಈಗ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈ ಮೊದಲು ಹುಚ್ಚ ವೆಂಕಟ್ ಅವರು ಈ ರೀತಿ ಫೈಟ್ ಮಾಡಿಕೊಂಡು ಹೊರ ಹೋಗಿದ್ದರು. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಕೆಲವು ಕಡೆಗಳಲ್ಲಿ ಜಗದೀಶ್ ಮಾತ್ರ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ.

‘ಬಿಗ್ ಬಾಸ್’ ಹೊಸ ಪ್ರೋಮೋದಲ್ಲಿ ಸ್ವತಃ ಬಿಗ್ ಬಾಸ್ ಅವರೇ ಕೋಪ ಮಾಡಿಕೊಂಡಿದ್ದರು. ಸ್ಪರ್ಧಿಗಳ ಮಿತಿ ಮೀರಿದ ವರ್ತನೆಯಿಂದ ಕುಪಿತಗೊಂಡು ಸಿಟ್ಟಲ್ಲಿ ಕೂಗಾಡಿದ್ದರು. ಈಗ ಇದು ಮತ್ತೊಂದು ಹಂತ ತಲುಪಿದೆ. ಈ ಬಗ್ಗೆ ಬಿಗ್ ಬಾಸ್ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ದೊಡ್ಮನೆಯಿಂದ ಹೊರ ಬಂದ ಜಗದೀಶ್? ಬಿಗ್ ಬಾಸ್ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ ಶಿಕ್ಷೆ?

‘ಬಿಗ್ ಬಾಸ್ ಕನ್ನಡ ಸೀಸನ್​’ನಲ್ಲಿ 16 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ನಡೆದಿದೆ. ಜಗದೀಶ್ ಹಾಗೂ ರಂಜಿತ್ ಹೊರ ಹೋಗಿದ್ದು ನಿಜವೇ ಆದಲ್ಲಿ ಈ ಸಂಖ್ಯೆ 14ಕ್ಕೆ ಇಳಿಕೆ ಆದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:21 pm, Wed, 16 October 24

ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್