AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಮನೆಯಲ್ಲಿ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಏಪ್ರಿಲ್ 15ರ ಎಪಿಸೋಡ್​ನಲ್ಲಿ ಅವರು ಬಿಗ್ ಬಾಸ್​ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಬಿಗ್ ಬಾಸ್​ನಿಂದಲೇ ಔಟ್ ಆಗಿದ್ದಾರೆ.

ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್
ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್
ರಾಜೇಶ್ ದುಗ್ಗುಮನೆ
|

Updated on:Oct 16, 2024 | 1:55 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್​ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

‘ಬಿಗ್ ಬಾಸ್​’ನಲ್ಲಿ ವಾತಾವರಣ ಹದಗೆಟ್ಟಿದೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋತ್ತೇನೆ’ ಎಂದು ಎಚ್ಚರಿಕೆ ನೀಡಿದ್ದರು. ಈಗ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈ ಮೊದಲು ಹುಚ್ಚ ವೆಂಕಟ್ ಅವರು ಈ ರೀತಿ ಫೈಟ್ ಮಾಡಿಕೊಂಡು ಹೊರ ಹೋಗಿದ್ದರು. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಕೆಲವು ಕಡೆಗಳಲ್ಲಿ ಜಗದೀಶ್ ಮಾತ್ರ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ.

‘ಬಿಗ್ ಬಾಸ್’ ಹೊಸ ಪ್ರೋಮೋದಲ್ಲಿ ಸ್ವತಃ ಬಿಗ್ ಬಾಸ್ ಅವರೇ ಕೋಪ ಮಾಡಿಕೊಂಡಿದ್ದರು. ಸ್ಪರ್ಧಿಗಳ ಮಿತಿ ಮೀರಿದ ವರ್ತನೆಯಿಂದ ಕುಪಿತಗೊಂಡು ಸಿಟ್ಟಲ್ಲಿ ಕೂಗಾಡಿದ್ದರು. ಈಗ ಇದು ಮತ್ತೊಂದು ಹಂತ ತಲುಪಿದೆ. ಈ ಬಗ್ಗೆ ಬಿಗ್ ಬಾಸ್ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ದೊಡ್ಮನೆಯಿಂದ ಹೊರ ಬಂದ ಜಗದೀಶ್? ಬಿಗ್ ಬಾಸ್ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ ಶಿಕ್ಷೆ?

‘ಬಿಗ್ ಬಾಸ್ ಕನ್ನಡ ಸೀಸನ್​’ನಲ್ಲಿ 16 ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ನಡೆದಿದೆ. ಜಗದೀಶ್ ಹಾಗೂ ರಂಜಿತ್ ಹೊರ ಹೋಗಿದ್ದು ನಿಜವೇ ಆದಲ್ಲಿ ಈ ಸಂಖ್ಯೆ 14ಕ್ಕೆ ಇಳಿಕೆ ಆದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:21 pm, Wed, 16 October 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?