AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರಿಯ ರಿಯಾಲಿಟಿ ಶೋನ ನಿರೂಪಣೆ ಜವಾಬ್ದಾರಿ ಹೊತ್ತ ಸೋನು ಸೂದ್​​; ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ ಶೂಟ್​

ನೇಹಾ ಧೂಪಿಯಾ, ಪ್ರಿನ್ಸ್​ ನುರುಲಾ ಹಾಗೂ ಇತರರು ಗ್ಯಾಂಗ್​ ಲೀಡರ್​ ಆಗಿ ಕಾಣಿಸಿಕೊಂಡಿದ್ದರು. ಆದರೆ, ಈ ಬಾರಿ ಆ ಕಾನ್ಸೆಪ್ಟ್​ ಕೈ ಬಿಡಲಾಗಿದೆ. ಕೆಲ ಮಾಧ್ಯಮಗಳು ವರದಿ ಮಾಡಿದ ಪ್ರಕಾರ, ಈ ಬಾರಿಯ ‘ರೋಡೀಸ್​’ ಸಂಪೂರ್ಣವಾಗಿ ಭಿನ್ನ ರೀತಿಯಲ್ಲಿ ಇರಲಿದೆಯಂತೆ.

ಜನಪ್ರಿಯ ರಿಯಾಲಿಟಿ ಶೋನ ನಿರೂಪಣೆ ಜವಾಬ್ದಾರಿ ಹೊತ್ತ ಸೋನು ಸೂದ್​​; ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ ಶೂಟ್​
TV9 Web
| Edited By: |

Updated on: Feb 07, 2022 | 4:10 PM

Share

ಎಂಟಿವಿಯಲ್ಲಿ ಪ್ರಸಾರವಾಗುವ ‘ರೋಡೀಸ್​’ (MTV Roadies) ಯಶಸ್ವಿಯಾಗಿ 17 ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಶೀಘ್ರದಲ್ಲೇ ಈ ಶೋನ 18ನೇ ಸೀಸನ್​ ಪ್ರಾರಂಭವಾಗಲಿದೆ. ವಿಶೇಷ ಎಂದರೆ, ಈ ಶೋನ ನಿರೂಪಣೆ ಜವಾಬ್ದಾರಿ ನಟ ಸೋನು ಸೂದ್ (Sonu Sood)​ ಅವರ ಹೆಗಲು ಏರಿದೆ. ಈ ವಿಚಾರ ಕೇಳಿ ಒಂದು ವರ್ಗದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇನ್ನೂ ಕೆಲವರು ಬೇಸರ ಹೊರಹಾಕಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಈ ಶೋನ ಶೂಟಿಂಗ್​ ನಡೆಯಲಿದೆ ಅನ್ನೋದು ವಿಶೇಷ. ಈ ಬಗ್ಗೆ ಶೀಘ್ರವೇ ಮುಂದಿನ ಅಪ್​ಡೇಟ್​ ಸಿಗಲಿದೆ. ವಿಜೆ ರಣವಿಜಯ್​ ಸಿಂಘ (Rannvijay Singha) ಅವರು ಈ ಶೋ ನಡೆಸಿಕೊಡುವ ಮೂಲಕ ಹೆಚ್ಚು ಖ್ಯಾತಿ ಗಳಿಸಿದ್ದರು. ಅವರು ಎಲ್ಲಾ ಸೀಸನಗಳಲ್ಲೂ ಭಾಗಿ ಆಗಿದ್ದರು. ಆದರೆ, ಹೊಸ ಸೀಸನಲ್ಲಿ ಅವರು ನಿರೂಪಕರಾಗಿ, ಸ್ಪರ್ಧಿಯಾಗಿ ಅಥವಾ ಕೋಚ್​ ಆಗಿ ಇರುವುದಿಲ್ಲ. ಅವರು ಈ ಶೋನಿಂದ ಹೊರಗುಳಿಯಲಿದ್ದಾರೆ ಎಂದು ಎಂಟಿವಿ ವಾಹಿನಿ ಸ್ಪಷ್ಟಪಡಿಸಿದೆ.  ರಣವಿಜಯ್​ ನಿರೂಪಣೆ ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಹೊಸ ಸೀಸನ್​ನಲ್ಲಿ ಇಲ್ಲ ಎನ್ನುವ ವಿಚಾರ ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ.

ನೇಹಾ ಧೂಪಿಯಾ, ಪ್ರಿನ್ಸ್​ ನುರುಲಾ ಹಾಗೂ ಇತರರು ಗ್ಯಾಂಗ್​ ಲೀಡರ್​ ಆಗಿ ಕಾಣಿಸಿಕೊಂಡಿದ್ದರು. ಆದರೆ, ಈ ಬಾರಿ ಆ ಕಾನ್ಸೆಪ್ಟ್​ ಕೈ ಬಿಡಲಾಗಿದೆ. ಕೆಲ ಮಾಧ್ಯಮಗಳು ವರದಿ ಮಾಡಿದ ಪ್ರಕಾರ, ಈ ಬಾರಿಯ ‘ರೋಡೀಸ್​’ ಸಂಪೂರ್ಣವಾಗಿ ಭಿನ್ನ ರೀತಿಯಲ್ಲಿ ಇರಲಿದೆಯಂತೆ. ಹದಿನೆಂಟನೇ ಸೀಸನ್ ಶೂಟಿಂಗ್​​ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. ಹಲವು ರೀತಿಯ ಟ್ವಿಸ್ಟ್​ಗಳು ಶೋನಲ್ಲಿ ಇರಲಿದೆ ಎಂದು ತಿಳಿದು ಬಂದಿದೆ.

ಸೋನು ಅವರು ಈ ಶೋ ಹೋಸ್ಟ್ ಮಾಡೋಕೆ ಸಖತ್​ ಥ್ರಿಲ್​ ಆಗಿದ್ದಾರೆ. ‘ಈ ಶೋನ ಹೋಸ್ಟ್​ ಮಾಡುತ್ತಿರುವುದಕ್ಕೆ ಖುಷಿ ಇದೆ. ದಕ್ಷಿಣ ಆಫ್ರಿಕಾದಲ್ಲಿ ಶೋ ನಡೆಯುತ್ತಿರುವ ವಿಚಾರ ಸಂತಸ ತಂದಿದೆ’ ಎಂದಿದ್ದಾರೆ ಸೋನು. ಫೆಬ್ರವರಿ ಎರಡನೇ ವಾರದಲ್ಲಿ ಈ ಶೋನ ಶೂಟಿಂಗ್​ ಆರಂಭವಾಗಲಿದ್ದು, ಮಾರ್ಚ್​ ವೇಳೆಗೆ ಶೋ ಪ್ರಸಾರವಾಗಲಿದೆ. ಪಿಪ್ಪಿಪ್​ ಮೀಡಿಯಾ ಈ ಬಾರಿ ರೋಡೀಸ್​ ನಿರ್ಮಾಣ ಮಾಡುತ್ತಿದೆ.

ರೋಡೀಸ್​ ಸೀಸನ್​ ಒಂದರಲ್ಲಿ ರಣವಿಜಯ್​ ಗೆದ್ದಿದ್ದರು. ನಂತರ ಅವರು ಶೋನ ಹೋಸ್ಟ್ ಮಾಡಿದರು. ಈ ಬಾರಿ ಈ ಶೋಅನ್ನು ಹೊಸ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ. ಈ ಕಾರಣಕ್ಕೆ ರಣವಿಜಯ್​ ಅವರನ್ನು ಕೈಬಿಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಡೇಟ್ಸ್​ ಹೊಂದಾಣಿಕೆ ಆಗುತ್ತಿಲ್ಲ ಎನ್ನುವ ಕಾರಣವನ್ನು ರಣವಿಜಯ್​ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕೆಲವರು ಈ ಶೋ ವೀಕ್ಷಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಭರವಸೆ ಈಡೇರಿಸದ ಸೋನು ಸೂದ್​ಗೆ ಹೆಚ್ಚಿತು ಸಂಕಷ್ಟ; ನಟನಿಗೆ ಎರಡನೇ ಬಾರಿಗೆ ನೋಟಿಸ್​

ಪಂಜಾಬ್‌: ಸೋನು ಸೂದ್ ಸಹೋದರಿ ಮಾಳವಿಕಾ ಕಾಂಗ್ರೆಸ್‌ಗೆ ಸೇರ್ಪಡೆ, ಇದು ಗೇಮ್‌ಚೇಂಜರ್ ಎಂದ ಸಿಧು

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ