AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​

ಶಮಿತಾ ಮತ್ತು ರಾಕೇಶ್​ ಬಿಗ್​ ಬಾಸ್​ ಮನೆಯಲ್ಲಿ ಒಂದಾಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ. ಇವರ ರೊಮ್ಯಾನ್ಸ್​ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​
ರಾಕೆಶ್​-ಶಮಿತಾ
TV9 Web
| Edited By: |

Updated on:Nov 05, 2021 | 4:07 PM

Share

ರಾಕೇಶ್​ ಬಾಪಟ್​ ಹಾಗೂ ಶಮಿತಾ ಶೆಟ್ಟಿ ಬಿಗ್​ ಬಾಸ್​ ಒಟಿಟಿಯಲ್ಲಿ ತುಂಬಾನೇ ಕ್ಲೋಸ್​ ಆಗಿದ್ದರು. ಈ ಜೋಡಿ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಇಬ್ಬರೂ ಒಂದೇ ವಯಸ್ಸಿನವರಾದ್ದರಿಂದ ಬೇಗ ಕನೆಕ್ಟ್​ ಆಗಿದ್ದರು. ಇವರ ಆಪ್ತತೆ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿರಲಿಲ್ಲ. ಬಿಗ್​ಬಾಸ್​ ಒಟಿಟಿಯಿಂದ ಹೊರ ಬಂದ ನಂತರವೂ ಇವರು ಕ್ಲೋಸ್​ ಆಗಿಯೇ ಇದ್ದರು. ಈಗ ಈ ಜೋಡಿ ಮತ್ತೆ ಬಿಗ್​ ಬಾಸ್​ 15ರಲ್ಲಿ ಒಂದಾಗಿದೆ. ಇಬ್ಬರೂ ಮೊದಲ ದಿನವೇ ರೊಮ್ಯಾನ್ಸ್​ ಶುರು ಮಾಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಬಿಗ್​ ಬಾಸ್​ 15 ಆರಂಭವಾಗಿತ್ತು. ಸಲ್ಮಾನ್​ ಖಾನ್​ ಅವರು ಗ್ರ್ಯಾಂಡ್​ ಆಗಿ ಇದಕ್ಕೆ ಚಾಲನೆ ನೀಡಿದ್ದರು. ರಣವೀರ್​ ಸಿಂಗ್​ ಸೇರಿ ಕೆಲ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಈ ಬಾರಿ ಕಾಡಿನ ಥೀಮ್​ನಲ್ಲಿ ಬಿಗ್​​ ಬಾಸ್​ ನಡೆಯುತ್ತಿದೆ. ಶಮಿತಾ ಶೆಟ್ಟಿ ಅವರು ದೊಡ್ಮನೆಗೆ ಎಂಟ್ರಿ ಪಡೆದಿದ್ದರು. ಆದರೆ, ರಾಕೇಶ್​ ಬಾಪಟ್​ಗೆ ಈ ಅವಕಾಶ ಇರಲಿಲ್ಲ. ಈಗ ಬಿಗ್​ ಬಾಸ್​ ಮನೆ ಒಳಗೆ ವೈಲ್ಡ್​ ಕಾರ್ಡ್​ ಮೂಲಕ ಅವರು ಎಂಟ್ರಿ ಪಡೆದಿದ್ದಾರೆ. ಬಂದ ಮೊದಲ ದಿನವೇ ರಾಕೇಶ್​ ಅವರು ಶಮಿತಾರನ್ನು ಹಗ್​ ಮಾಡಿಕೊಂಡು ಕಿಸ್​ ಮಾಡಿದ್ದಾರೆ.

ಕಲರ್ಸ್​ ಟಿವಿ ಅವರು ಈ ಬಗ್ಗೆ ಪ್ರೋಮೋ ಹಂಚಿಕೊಂಡಿದೆ. ಕಾಡಿನ ಥೀಮ್​ನಲ್ಲಿ ಬಿಗ್​ ಬಾಸ್​ ನಡೆಯುತ್ತಿರುವುದರಿಂದ ಕರಡಿ ವೇಶದಲ್ಲಿ ರಾಕೇಶ್​ ಬಂದಿದ್ದಾರೆ. ಹೀಗಾಗಿ, ಶಮಿತಾಗೆ ಕರಡಿ ವೇಶದಲ್ಲಿರುವ ವ್ಯಕ್ತಿ ರಾಕೇಶ್​ ಎಂದು ತಿಳಿದಿಲ್ಲ. ಹೀಗಾಗಿ, ಅವರು ನಾರ್ಮಲ್​ ಆಗಿಯೇ ಇದ್ದರು. ಈ ವೇಳೆ ಮುಖವಾಡ ತೆಗೆದ ರಾಕೇಶ್​ ಅವರು ಶಮಿತಾ ಅವರನ್ನು ಹಿಂದಿನಿಂದ ಹಗ್​ ಮಾಡಿ, ಮುತ್ತುಕೊಟ್ಟಿದ್ದಾರೆ. ರಾಕೇಶ್​ ನೋಡಿ ಶಮಿತಾ ನಿಜಕ್ಕೂ ಖುಷಿಪಟ್ಟಿದ್ದಾರೆ.

View this post on Instagram

A post shared by ColorsTV (@colorstv)

ಶಮಿತಾ ಮತ್ತು ರಾಕೇಶ್​ ಬಿಗ್​ ಬಾಸ್​ ಮನೆಯಲ್ಲಿ ಒಂದಾಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ. ಇವರ ರೊಮ್ಯಾನ್ಸ್​ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರವಾಗಿದೆ. ಮುಂದಿನ ಎಪಿಸೋಡ್​ನಲ್ಲಿ ಈ ಬಗ್ಗೆ ಗೊತ್ತಾಗಲಿದೆ.

ಇದನ್ನೂ ಓದಿ: Raj Kundra: ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ; ಅನುಮಾನ ಹುಟ್ಟಿಸಿದೆ ಈ ನಡೆ

ಬಿಗ್​ ಬಾಸ್​ನಲ್ಲಿ ಶಮಿತಾ ಶೆಟ್ಟಿಗೆ ಕಾದಿದೆ ಬಿಗ್​ ಸರ್​ಪ್ರೈಸ್​; ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆ ಸೇರುವವರು ಯಾರು?

Published On - 4:02 pm, Fri, 5 November 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!