AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಪಾಡಿಗೆ ನೀನಿರು, ನನ್ನ ಪಾಡಿಗೆ ನಾನಿರ್ತೀನಿ’; ಸೂರಜ್​ಗೆ ನೇರವಾಗಿ ಹೇಳಿದ ರಾಶಿಕಾ

ಸೂರಜ್-ರಾಶಿಕಾ ಪ್ರೀತಿ ಕಥೆ ಅಂತ್ಯ ಆಗಿದೆ ಎಂದರೂ ತಪ್ಪಾಗಲಾರದು. ದೊಡ್ಮನೆಯಲ್ಲಿ ಸೂರಜ್ ಜೊತೆಗಿನ ನಿಕಟತೆಯನ್ನು ರಾಶಿಕಾ ಕಡಿತಗೊಳಿಸಿದ್ದಾರೆ. ಸುದೀಪ್ ಅವರ ಬುದ್ಧಿವಾದದ ನಂತರ ತಮ್ಮ ಆಟದ ಬಗ್ಗೆ ಗಂಭೀರವಾಗಿ ಯೋಚಿಸಿರುವ ರಾಶಿಕಾ, ಸೂರಜ್ ಜೊತೆ 'ನಾವು ಸ್ನೇಹಿತರು ಮಾತ್ರ' ಎಂದು ಸ್ಪಷ್ಟಪಡಿಸಿದ್ದಾರೆ.

‘ನಿನ್ನ ಪಾಡಿಗೆ ನೀನಿರು, ನನ್ನ ಪಾಡಿಗೆ ನಾನಿರ್ತೀನಿ’; ಸೂರಜ್​ಗೆ ನೇರವಾಗಿ ಹೇಳಿದ ರಾಶಿಕಾ
ಸೂರಜ್-ರಾಶಿಕಾ
ರಾಜೇಶ್ ದುಗ್ಗುಮನೆ
|

Updated on:Nov 04, 2025 | 12:34 PM

Share

ಸೂರಜ್ ಹಾಗೂ ರಾಶಿಕಾ (Rashika) ಮಧ್ಯೆ ಏನೋ ಇದೆ ಎಂದು ಎಲ್ಲರೂ ಭಾವಿಸಿದ್ದರು. ಇದಕ್ಕೆ ಅವರ ನಡೆಯೇ ಕಾರಣ. ಸೂರಜ್ ಕೈ ಹಿಡಿದುಕೊಂಡು ‘ಪ್ರೀತಿ ಹೇಗೆ ಹುಟ್ಟುತ್ತೆ ಅಂತ ಹೇಳೋಕಾಗಲ್ಲ’ ಎಂದು ಹೇಳಿದ್ದ ರಾಶಿಕಾ, ಈಗ ಸುದೀಪ್ ಹೇಳಿದ ಪಾಠದ ಬಳಿಕ ಬದಲಾಗಿದ್ದಾರೆ. ರಾಶಿಕಾ ಅವರು ದೊಡ್ಮನೆಯಲ್ಲಿ ತಮ್ಮ ಆಟವನ್ನು ಪ್ರದರ್ಶನ ಮಾಡಲು ರೆಡಿ ಆಗಿದ್ದಾರೆ. ಅದಕ್ಕೂ ಮೊದಲು ಸೂರಜ್ ಜೊತೆ ಅಂತರ ಕಾಯ್ದುಕೊಂಡಿದ್ದಾರೆ.

ಸೂರಜ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಅವರು ಬಂದ ದಿನವೇ ರಾಶಿಕಾಗೆ ರೋಸ್ ಕೊಟ್ಟರು. ಅಲ್ಲಿಂದ ಇಬ್ಬರ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಇಬ್ಬರೂ ಕೈ ಕೈ ಹಿಡಿದು ಸುತ್ತಾಡಲು ಆರಂಭಿಸಿದರು. ಇವರ ಜೋಡಿ ನೋಡಿ ಅನೇಕರಿಗೆ ಅಸಮಾಧಾನ ಮೂಡಿತ್ತು. ‘ಕಾಲೇಜು ಹೋಗೋರ ಲವ್​ಸ್ಟೋರಿ ರೀತಿ ಇದೆ’ ಎಂದು ಅನೇಕರು ಆರೋಪ ಮಾಡಿದ್ದರು. ಸುದೀಪ್ ಕೂಡ ವೇದಿಕೆ ಮೇಲೆ ಈ ವಿಚಾರವನ್ನು ಸೂಕ್ಷ್ಮವಾಗಿ ಹೇಳಿದ್ದರು. ಈ ವಿಚಾರವನ್ನು ರಾಶಿಕಾ ಗಂಭೀರವಾಗಿ ಸ್ವೀಕರಿಸಿದಂತೆ ಇದೆ.

‘ನಾವು ಜಸ್ಟ್ ಫ್ರೆಂಡ್ಸ್. ಇದಕ್ಕಿಂತ ಮೇಲೆ ಏನೂ ಇಲ್ಲ’ ಎಂದು ಸೂರಜ್ ಬಳಿ ಬಂದು ರಾಶಿಕಾ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಸೂರಜ್ ಕೂಡ ತಲೆ ಆಡಿಸಿದ್ದಾರೆ. ‘ಕೈ ಕೈ ಹಿಡ್ಕೊಳೋದು ಬೇಡ. ನಮ್ಮಿಬ್ಬರ ಮಧ್ಯೆ ಬೇರೆ ಸ್ಟೋರಿ ಇದೆ ಎಂದ್ರೆ ನಾನು ಒಪ್ಪಿಕೊಳ್ಳಲ್ಲ. ಫ್ರೆಂಡ್​ಶಿಪ್​ನಲ್ಲೂ ಹುಡುಗ-ಹುಡುಗಿ ಕ್ಲೋಸ್ ಆಗಿರ್ತಾರೆ. ಅದು ತಪ್ಪಲ್ಲ’ ಎಂದು ರಾಶಿಕಾ ಮಾತನಾಡಿದರು.

ಇದನ್ನೂ ಓದಿ: ರಾಶಿಕಾ ಜೊತೆಗಿನ ವಿಡಿಯೋ ಹಾಕಬೇಡಿ: ಸುದೀಪ್​​ಗೆ ಮನವಿ ಮಾಡಿದ ಸೂರಜ್

‘ನಮ್ಮಿಬ್ಬರ ಮಧ್ಯೆ ಇರೋದು ಗೆಳೆತನ ಮಾತ್ರ. ಇನ್ನುಮುಂದೆ  ಜಾಸ್ತಿ ಮಾತನಾಡೋದು ಬೇಡ. ನಿನ್ನ ಪಾಡಿಗೆ ನೀನಿರು, ನನ್ನ ಪಾಡಿಗೆ ನಾನಿರ್ತೀನಿ’ ಎಂದು ರಾಶಿಕಾ ಮುಖಕ್ಕೆ ಹೊಡೆದಂತೆ ಹೇಳಿದರು. ಈ ವಿಚಾರ ಸೂರಜ್​ಗೆ ಬೇಸರ ಮೂಡಿಸಿತು. ‘ನಾಳೆಯಿಂದ ಹೊಸ ದಿನ’ ಎಂದು ಹೇಳಿ ಸೂರಜ್ ಅಲ್ಲಿಂದ ನಡೆದುಬಿಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:32 pm, Tue, 4 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್