AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ

Bigg Boss Kannada: ರಿಯಾಲಿಟಿ ಶೋನಲ್ಲಿ ರಾಶಿಕಾ ಶೆಟ್ಟಿ, ಗಿಲ್ಲಿಗೆ ಟಾಸ್ಕ್ ಸೋಲಿಗೆ ಹಂಗಿಸಿದ್ದಾರೆ. ಇಬ್ಬರ ನಡುವೆ ಮೊದಲಿನಿಂದಲೂ ಗೆಳೆತನ ಇರಲಿಲ್ಲ. ರಕ್ಷಿತಾ ಪರ ನಿಂತ ಗಿಲ್ಲಿ, ರಾಶಿಕಾಳ ಜಗಳದಲ್ಲಿ ಮಧ್ಯ ಪ್ರವೇಶಿಸಿದರು. ಇದು ವಾಗ್ವಾದಕ್ಕೆ ತಿರುಗಿ, ರಾಶಿಕಾ ಗಿಲ್ಲಿಯನ್ನು ಹೀಯಾಳಿಸಿದರು.

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ
ರಾಶಿಕಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Jan 07, 2026 | 7:28 AM

Share

ರಾಶಿಕಾ ಶೆಟ್ಟಿ (Rashika Shetty) ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದು ಕಡಿಮೆ. ಇಡೀ ಸೀಸನ್ ಅಲ್ಲಿ ಒಮ್ಮೆ ಅಥವಾ ಎರಡು ಬಾರಿ ಇಬ್ಬರೂ ಒಟ್ಟಿಗೆ ಇದ್ದರು. ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಟಾಸ್ಕ್ ವಿಷಯವಾಗಿ ಗಿಲ್ಲಿಗೆ ಅವರು ಟಾಂಟ್ ಕೊಟ್ಟಿದ್ದಾರೆ.

ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ ಗಿಲ್ಲಿ ನಿಧಾನಗತಿ ತೋರಿದರು. ಬಾಲ್ ಎಸೆಯುವ ಟಾಸ್ಕ್ ಇದಾಗಿತ್ತು. ಗಿಲ್ಲಿ ಎಲ್ಲಿಯೂ ವೇಗ ತೋರಿಲ್ಲ. ಇದು ಅವರು ಟಾಸ್ಕ್ ಸೋಲಲು ಪ್ರಮುಖ ಕಾರಣ ಆಯಿತು.ಈ ವಿಷಯವನ್ನು ಇಟ್ಟುಕೊಂಡು ರಾಶಿಕಾ ಅವರು ಗಿಲ್ಲಿಯನ್ನು ಹಂಗಿಸಿದ್ದಾರೆ. ಆದರೆ, ಇದಕ್ಕೆ ಗಿಲ್ಲಿ ಅವರು ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣಿಸಿಲ್ಲ.

ಟಾಸ್ಕ್ ಸೋತು ತುಂಬಾ ಸಮಯ ಆಗಿತ್ತು. ಈ ವೇಳೆ ರಕ್ಷಿತಾ ಹಾಗೂ ರಾಶಿಕಾ ಮಧ್ಯೆ ಜಗಳ ನಡೆಯುತ್ತಿತ್ತು. ಇಬ್ಬರೂ ಒಂದೇ ತಂಡದಲ್ಲಿ (ರಘು ಜೊತೆ) ಆಡುವ ಪ್ರಯತ್ನದಲ್ಲಿ ಇದ್ದರು. ಆದರೆ, ರಕ್ಷಿತಾ ತಂಡ ಸೇರೋದು ರಾಶಿಕಾಗೆ ಇಷ್ಟ ಇರಲಿಲ್ಲ. ಹೀಗಾಗಿ, ಅವರು ಈ ಬಗ್ಗೆ ಅಪಸ್ವರ ತೆಗೆದರು. ಈ ಜಗಳದಲ್ಲಿ ಗಿಲ್ಲಿ ಎಂಟ್ರಿ ಆಗಿದೆ.

ಇದನ್ನೂ ಓದಿ: ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ರಕ್ಷಿತಾ ಪರವಾಗಿ ಗಿಲ್ಲಿ ನಟ ಅನೇಕ ಬಾರಿ ನಿಂತಿದ್ದು ಇದೆ. ರಾಶಿಕಾ ಹಾಗೂ ರಕ್ಷಿತಾ ಫೈಟ್ ಮಧ್ಯೆ ಗಿಲ್ಲಿ ಮಧ್ಯ ಪ್ರವೇಶಿಸಲು ಕೂಡ ಇದೇ ಕಾರಣ. ಗಿಲ್ಲಿ ಮಧ್ಯೆ ಬಂದಿದ್ದು ರಾಶಿಕಾಗೆ ಇಷ್ಟ ಆಗಿಲ್ಲ. ಹೀಗಾಗಿ, ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆ ಬಳಿಕ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಗಿಲ್ಲಿಯ ಟಾಸ್ಕ್ ವಿಷಯವನ್ನು ರಾಶಿಕಾ ಪ್ರಸ್ತಾಪಿಸಿದರು. ‘ಟಾಸ್ಕ್ ಆಡೋಕೆ ಬರಲ್ಲ ನಿಂಗೆ’ ಎಂದು ನೇರವಾಗಿ ಹೇಳಿದರು. ಆ ಬಳಿಕ ಗಿಲ್ಲಿ, ‘ಈ ಬಾರಿ ಗೆದ್ದು ತೋರಿಸು’ ಎಂದು ಸವಾಲು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ