AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರದಲ್ಲಿ ಎರಡು ದೊಡ್ಡ ಹೊಡೆತ ತಿಂದ ರಾಶಿಕಾ; ಕಣ್ಣೀರು ಹಾಕಿದ ನಟಿ

ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಒಂದೇ ವಾರದಲ್ಲಿ ಎರಡು ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಕ್ಯಾಪ್ಟನ್ಸಿ ರೇಸ್​ನಲ್ಲಿ ಅವರು ಸ್ಥಾನ ಕಳೆದುಕೊಂಡಿದ್ದಲ್ಲದೆ, ಮನೆಯಿಂದ ಬಂದ ಪತ್ರವನ್ನೂ ಪಡೆಯಲು ಸಾಧ್ಯವಾಗಲಿಲ್ಲ. ಸ್ಪರ್ಧಿಗಳ ಒಮ್ಮತದ ಕೊರತೆಯಿಂದ ಈ ಎರಡೂ ಅವಕಾಶಗಳು ಕೈ ತಪ್ಪಿದ್ದು, ರಾಶಿಕಾ ಕಣ್ಣೀರು ಹಾಕಿದ್ದಾರೆ.

ಒಂದೇ ವಾರದಲ್ಲಿ ಎರಡು ದೊಡ್ಡ ಹೊಡೆತ ತಿಂದ ರಾಶಿಕಾ; ಕಣ್ಣೀರು ಹಾಕಿದ ನಟಿ
ರಾಶಿಕಾ
ರಾಜೇಶ್ ದುಗ್ಗುಮನೆ
|

Updated on: Nov 07, 2025 | 7:34 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ರಾಶಿಕಾ ಶೆಟ್ಟಿ ಅವರು ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಇತ್ತೀಚೆಗೆ ಅವರು ಅಶ್ವಿನಿ ಗೌಡ ಹಾಗೂ ರಿಷಾ ಗೌಡ ಜೊತೆ ಹೆಚ್ಚು ಬೆರೆಯುತ್ತಿದ್ದಾರೆ. ಮೊದಲು ಸೂರಜ್ ಜೊತೆ ಆಪ್ತವಾಗಿದ್ದ ಅವರು, ಈಗ ಅವರಿಂದ ಆದಷ್ಟು ಅಂತರ ಕಾಯ್ದುಕೊಳ್ಳಲು ಪ್ರಾರಂಭಿಸಿದ್ದಾರೆ. ಈ ಮಧ್ಯೆ ರಾಶಿಕಾ ಅವರು ಏಳು ದಿನಗಳ ಅಂತರದಲ್ಲಿ ಎರಡೆರಡು ಬಾರಿ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ.

ಕಳೆದ ವಾರ ರಾಶಿಕಾ ಅವರು ಬ್ಲ್ಯೂ ಟೀಂನ ಪ್ರತಿನಿಧಿಸಿದ್ದರು. ಈ ತಂಡ ಗೆದ್ದಿದ್ದರಿಂದ ಒಬ್ಬರನ್ನು ಕ್ಯಾಪ್ಟನ್ಸಿ ರೇಸ್​ಗೆ ಆಯ್ಕೆ ಮಾಡಬೇಕಿತ್ತು. ಒಮ್ಮತದ ನಿರ್ಧಾರ ಬರಬೇಕು ಎಂದು ಬಿಗ್ ಬಾಸ್ ಸೂಚಿಸಿದ್ದರು. ಎಲ್ಲರೂ ರಾಶಿಕಾ ಹೆಸರನ್ನು ತೆಗೆದುಕೊಂಡರು. ಆದರೆ, ಗಿಲ್ಲಿ ನಟ ಮಾತ್ರ ಇದಕ್ಕೆ ಒಪ್ಪಲೇ ಇಲ್ಲ. ಹೀಗಾಗಿ ಈ ಆಯ್ಕೆಯನ್ನು ಬಿಗ್ ಬಾಸ್ ಹಿಂದಕ್ಕೆ ಪಡೆದರು. ಇದರಿಂದ ರಾಶಿಕಾ ಕ್ಯಾಪ್ಟನ್ ಆಗಬೇಕು ಎಂಬ ಕನಸು ಭಗ್ನವಾಯಿತು.

ಈ ವಾರವೂ ರಾಶಿಕಾಗೆ ಇದೇ ರೀತಿಯ ಪರಿಸ್ಥಿತಿ ಬಂದೊದಗಿತು. ರಾಶಿಕಾ ಹಾಗೂ ರಕ್ಷಿತಾ ಶೆಟ್ಟಿಗೆ ಮನೆಯಿಂದ ಲೆಟರ್ ಕಳುಹಿಸಲಾಗಿತ್ತು. ಎಲ್ಲರ ಒಮ್ಮತದಿಂದ ಒಬ್ಬರಿಗೆ ಲೆಟರ್ ಕೊಡಿಸೋ ನಿರ್ಧಾರಕ್ಕೆ ಬರಬೇಕು ಎಂದು ಬಿಗ್ ಬಾಸ್ ಸೂಚಿಸಿದರು. ಗಿಲ್ಲಿ, ಕಾವ್ಯಾ, ಸ್ಪಂದನಾ ಮೊದಲಾದವರು ರಕ್ಷಿತಾಗೆ ಲೆಟರ್ ಕೊಡಬೇಕು ಎಂದರು. ಅಶ್ವಿನಿ, ರಿಷಾ ಮೊದಲಾದವರು ರಾಶಿಕಾಗೆ ಪತ್ರ ಸಿಗಬೇಕು ಎಂದು ವಾದಿಸಿದರು. ಆದರೆ, ಅಂತಿಮವಾಗಿ ಯಾವುದೇ ಒಮ್ಮತ ಬಂದಿಲ್ಲ. ಹೀಗಾಗಿ, ಇಬ್ಬರಿಗೂ ಪತ್ರ ಕೈ ತಪ್ಪಿದೆ.

ಇದನ್ನೂ ಓದಿ: ಕಾವ್ಯಾಗೋಸ್ಕರ ದೊಡ್ಡ ತ್ಯಾಗ ಮಾಡಿದ ಗಿಲ್ಲಿ; ಸಿಕ್ತು ಪ್ರೀತಿಯ ಅಪ್ಪುಗೆ

ಯಾವಾಗ ಒಮ್ಮತದ ನಿರ್ಧಾರ ಬರಬೇಕು ಎಂದು ಬಿಗ್ ಬಾಸ್ ಸೂಚಿಸಿದರೋ ಆಗಲೇ ರಾಶಿಕಾಗೆ ಪತ್ರ ಕೈ ತಪ್ಪುತ್ತದೆ ಎಂಬುದು ಸ್ಪಷ್ಟವಾಗಿತ್ತು. ಮನೆಯ ಪತ್ರ ಕೈ ತಪ್ಪಿದ್ದರಿಂದ ಅವರು ಕಣ್ಣೀರು ಹಾಕಿದರು. ನನಗೆ ಏಕೆ ಹೀಗೆಲ್ಲ ಆಗುತ್ತದೆ ಎಂದು ಬಿಕ್ಕಿ ಬಿಕ್ಕಿ ಅತ್ತರು. ಪತ್ರ ಕಳೆದುಕೊಂಡಿದ್ದಕ್ಕೆ ರಕ್ಷಿತಾ ಅವರು ಹೆಚ್ಚು ಡ್ರಾಮಾ ಕ್ರಿಯೇಟ್ ಮಾಡಲಿಲ್ಲ. ಇದನ್ನು ಪ್ರಬುದ್ಧವಾಗಿ ಹ್ಯಾಂಡಲ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು