AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್

ಸದ್ಯ, ಟಾಲಿವುಡ್​ನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಿವೆ. ಚಿತ್ರತಂಡದವರು ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಕಿರುತೆರೆ ವೇದಿಕೆ ಏರಿ ಸಿನಿಮಾಗೆ ಪ್ರಚಾರ ಕೊಡುವ ಕೆಲಸ ಕೂಡ ಆಗುತ್ತಿದೆ.

ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್
TV9 Web
| Edited By: |

Updated on:Dec 19, 2021 | 7:44 PM

Share

ತೆಲುಗು ಬಿಗ್​ ಬಾಸ್​ ಸೀಸನ್​ 5 ಫಿನಾಲೆ (Bigg Boss Telugu 5 Finale) ತಲುಪಿದೆ. ಇಂದು (ಡಿಸೆಂಬರ್​ 19) ಗ್ರ್ಯಾಂಡ್​ ಫಿನಾಲೆ ನಡೆಯುತ್ತಿದೆ. ಯಾರು ವಿನ್​ ಆಗಲಿದ್ದಾರೆ ಎನ್ನುವ ಕುತೂಹಲ ಇದೆ. ಒಟ್ಟೂ ಐದು ಮಂದಿ ಫಿನಾಲೆ ರೇಸ್​ನಲ್ಲಿದ್ದಾರೆ. ಈ ಪೈಕಿ ಒಬ್ಬರಿಗೆ ಬಿಗ್​ ಬಾಸ್​ ಕಿರೀಟ ಸಿಗಲಿದೆ. ಮತ್ತೊಬ್ಬರು ರನ್ನರ್​ ಅಪ್​ ಆಗಲಿದ್ದಾರೆ. ಗೆದ್ದ ವ್ಯಕ್ತಿಗೆ ಹಣ ಹಾಗೂ ಬಿಗ್​ ಬಾಸ್​ ಟ್ರೋಫಿ ಸಿಗಲಿದೆ. ಅಚ್ಚರಿ ಎಂದರೆ, ಬಿಗ್​ ಬಾಸ್​ ಫಿನಾಲೆ ಸ್ಟಾರ್​ ನಟರು ಹಾಗೂ ನಿರ್ದೇಶಕರ ಸಮಾಗಮಕ್ಕೆ ಸಾಕ್ಷಿ ಆಯಿತು.

ಸದ್ಯ, ಟಾಲಿವುಡ್​ನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತಿವೆ. ಚಿತ್ರತಂಡದವರು ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಕಿರುತೆರೆ ವೇದಿಕೆ ಏರಿ ಸಿನಿಮಾಗೆ ಪ್ರಚಾರ ಕೊಡುವ ಕೆಲಸ ಕೂಡ ಆಗುತ್ತಿದೆ. ತೆಲುಗು ಬಿಗ್​ ಬಾಸ್​ ವೇದಿಕೆ ಕೂಡ ಹಲವು ಸ್ಟಾರ್​ಗಳ ಸಮಾಗಮಕ್ಕೆ ಸಾಕ್ಷಿ ಆಯಿತು. ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ, ನಟಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್​, ಆಲಿಯಾ ಭಟ್​, ಸಾಯಿ ಪಲ್ಲವಿ, ನಾನಿ ಹೀಗೆ ಅನೇಕ ಸ್ಟಾರ್​ಗಳು ವೇದಿಕೆ ಏರಿದ್ದರು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರದಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅವರು ಕೂಡ ಬಿಗ್​ ಬಾಸ್​ ವೇದಿಕೆ ಏರಿದ್ದರು. ರಣಬೀರ್​ ಕಪೂರ್ ಹಾಗೂ ಆಲಿಯಾ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು, ಕನ್ನಡ ಮೊದಲಾದ ಭಾಷೆಗಳಲ್ಲಿ ಬರುತ್ತಿದೆ. ಈ ಕಾರಣಕ್ಕೆ ಈ ಜೋಡಿ ಬಿಗ್​ ಬಾಸ್​ ಮನೆಯ ವೇದಿಕೆ ಹತ್ತಿತ್ತು.

ನಾನಿ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಶ್ಯಾಮ್​ ಸಿಂಗ​ ರಾಯ್​’ ಕೂಡ ರಿಲೀಸ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಮಾಹಿತಿ ನೀಡಿದರು ಈ ಜೋಡಿ. ಇನ್ನು, ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾ ತಂಡದ ಪರವಾಗಿ ಆಗಮಿಸಿದ್ದರು. ಈ ಎಲ್ಲರನ್ನೂ ಸ್ವಾಗತ ಮಾಡಿದ್ದು ಅಕ್ಕಿನೇನಿ ನಾಗಾರ್ಜುನ. ‘ತೆಲುಗು ಬಿಗ್​ ಬಾಸ್​ 5’ ನಡೆಸಿಕೊಡುತ್ತಿರುವ ಅವರು, ಈ ಎಲ್ಲರನ್ನೂ ಸ್ವಾಗತಿಸಿ ಪ್ರೀತಿಯಿಂದ ನಾಲ್ಕು ಮಾತನಾಡಿದರು.

ಇದನ್ನೂ ಓದಿ: ‘ರಣಬೀರ್​-ಆಲಿಯಾ ಒಟ್ಟಾಗಿ ನನ್ನ ಸಿನಿಮಾವನ್ನು ಹಾಳು ಮಾಡುತ್ತಿದ್ದಾರೆ ಅನಿಸುತ್ತಿತ್ತು; ‘ಬ್ರಹ್ಮಾಸ್ತ್ರ’ ನಿರ್ದೇಶಕ 

Published On - 7:43 pm, Sun, 19 December 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ