Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿಲ್ಪಾ ಶೆಟ್ಟಿ ಕರೆದ್ರೆ ಬರ್ತಾ ಇರಲಿಲ್ಲ, ಒಂದೇ ವಾರದಲ್ಲಿ ನಾನ್ಯಾರು ಅಂತ ಗೊತ್ತಾಯ್ತು’; ರವಿಚಂದ್ರನ್

ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ರಲ್ಲಿ ರವಿಚಂದ್ರನ್ ಅವರು ಶಿಲ್ಪಾ ಶೆಟ್ಟಿ ಅವರೊಂದಿಗಿನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ಸಮಯದಲ್ಲಿ ಶಿಲ್ಪಾ ಶೆಟ್ಟಿ ಅವರ ಪ್ರತಿಕ್ರಿಯೆ ನಿಧಾನವಾಗಿದ್ದರೂ, ಒಂದು ವಾರದ ನಂತರ ಅವರು ರವಿಚಂದ್ರನ್ ಅವರನ್ನು ಚೆನ್ನಾಗಿ ಅರ್ಥಮಾಡಿಕೊಂಡರು ಎಂದು ಅವರು ಹೇಳಿದ್ದಾರೆ.

‘ಶಿಲ್ಪಾ ಶೆಟ್ಟಿ ಕರೆದ್ರೆ ಬರ್ತಾ ಇರಲಿಲ್ಲ, ಒಂದೇ ವಾರದಲ್ಲಿ ನಾನ್ಯಾರು ಅಂತ ಗೊತ್ತಾಯ್ತು’; ರವಿಚಂದ್ರನ್
ರವಿಚಂದ್ರನ್-ಶಿಲ್ಪಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 10, 2025 | 9:31 AM

ರವಿಚಂದ್ರನ್ ಹಾಗೂ ರಚಿತಾ ರಾಮ್ (Rachita Ram) ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರೂ ಜಡ್ಜ್ ಸ್ಥಾನದಲ್ಲಿ ಇರೋದು ಗೊತ್ತೇ ಇದೆ. ಇವರನ್ನು ವೇದಿಕೆ ಮೇಲೆ ಕರೆದ ಆ್ಯಂಕರ್ ನಿರಂಜನ್ ಅವರು ಒಂದಷ್ಟು ಪ್ರಶ್ನೆಗಳನ್ನು ಕೇಳಿದರು. ಶಿಲ್ಪಾ ಶೆಟ್ಟಿ ಡ್ಯಾನ್ಸ್ ವಿಚಾರದಲ್ಲಿ ಯಾವ ರೀತಿ ನಡೆದುಕೊಳ್ಳುತ್ತಿದ್ದರು, ನಂತರ ಒಂದು ವಾರದಲ್ಲಿ ಯಾವ ರೀತಿಯಲ್ಲಿ ಬದಲಾಗಿ ಬಿಟ್ಟರು ಎಂಬುದನ್ನು ರವಿಚಂದ್ರನ್ ಹೇಳಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರವಿಚಂದ್ರನ್ ಅವರು ಅನೇಕ ಹೀರೋಯಿನ್​ಗಳನ್ನು ಕನ್ನಡಕ್ಕೆ ಕರೆತಂದಿದ್ದಾರೆ. ಇದರಲ್ಲಿ ಖುಷ್ಬೂ, ಶಿಲ್ಪಾ ಶೆಟ್ಟಿ ಸೇರಿದಂತೆ ಅನೇಕರು ಇದ್ದಾರೆ. ಶಿಲ್ಪಾ ಶೆಟ್ಟಿ ಜೊತೆ ರವಿಚಂದ್ರನ್ ಅವರು ‘ಪ್ರೀತ್ಸೋದ್ ತಪ್ಪಾ’ ಎನ್ನುವ ಸಿನಿಮಾ ಮಾಡಿದ್ದರು. ರವಿಚಂದ್ರನ್ ನಿರ್ದೇಶನದ ಈ ಸಿನಿಮಾ 1998ರಲ್ಲಿ ತೆರೆಗೆ ಬಂತು. ಈ ಸಿನಿಮಾ ಶೂಟಿಂಗ್ ಸಮಯದಲ್ಲಿ ನಡೆದ ಘಟನೆ ಬಗ್ಗೆ ರವಿಚಂದ್ರನ್ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ
Image
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ
Image
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
Image
‘ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್​ ಇಂಡಿಯಾಗಾಗಿ ಅಲ್ಲ’; ದರ್ಶನ್
Image
ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್

ಮೊದಲು ರಚಿತಾ ರಾಮ್ ಅವರಿಗೆ ಕೆಮಿಸ್ಟ್ರಿ ಬಗ್ಗೆ ಮಾತನಾಡಲಾಯಿತು. ‘ಯಾರ ಜೊತೆ ನಿಮಗೆ ಒಳ್ಳೆಯ ಕೆಮಿಸ್ಟ್ರಿ ಇದೆ ಎನಿಸುತ್ತದೆ ಹೇಳಿ’ ಎಂದು ರಚಿತಾ ರಾಮ್ ಅವರಿಗೆ ನಿರಂಜನ್ ಪ್ರಶ್ನೆ ಮಾಡಿದರು. ‘ದರ್ಶನ್​ ಸರ್ ಜೊತೆ. ಅದನ್ನು ನಾವು ಹೇಳಬೇಕಿಲ್ಲ. ಇಡೀ ಕರ್ನಾಟಕದ ಜನತೆಗೆ ಗೊತ್ತು’ ಎಂದು ರಚಿತಾ ರಾಮ್ ಹೇಳಿದ್ದಾರೆ. ಈ ಹೇಳಿಕೆ ಅವರ ಅಭಿಮಾನಿಗೆ ಖುಷಿ ಕೊಟ್ಟಿದೆ.

View this post on Instagram

A post shared by Zee Kannada (@zeekannada)

‘ರವಿಚಂದ್ರನ್ ಅವರಿಗೆ ಈ ಪ್ರಶ್ನೆ ಕೇಳಬೇಕು ಎಂದರೆ ಮೂರು ಆಯ್ಕೆ ನೀಡಬೇಕು’ ಎಂದು ನಿರಂಜನ್ ಕೇಳಿದರು. ‘ಮೊದಲು ಖುಷ್ಬೂ, ಎರಡನೇ ಸ್ಥಾನದಲ್ಲಿ ಮೀನಾ ಹಾಗೂ ಮೂರನೇ ಸ್ಥಾನದಲ್ಲಿ ಶಿಲ್ಪಾ ಶೆಟ್ಟಿ ಇದಾರೆ’ ಎಂದರು ರವಿಚಂದ್ರನ್.

ಇದನ್ನೂ ಓದಿ: ‘ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಹೆಚ್ಚಾದಾಗ ಇದು ಬೇಕಿತ್ತಾ ಅನಿಸುತ್ತದೆ..’; ರವಿಚಂದ್ರನ್ ಅಸಮಾಧಾನ

‘ಡ್ಯಾನ್ಸ್ ಮಾಡುವಾಗ ಕೈ ಎಳೆದ ತಕ್ಷಣ ಬರ್ತಿದ್ರಾ’ ಎಂದು ನಿರಂಜನ್ ಕೇಳಿದರು. ‘ಮೊದಲ ಒಂದು ವಾರ ಬರಲಿಲ್ಲ. ಆ ಬಳಿಕ ರವಿಚಂದ್ರನ್ ಅಂದ್ರೆ ಏನು ಅಂತ ಗೊತ್ತಾಯ್ತು’ ಎಂದು ಅವರು ಹೇಳಿದ್ದಾರೆ. ಈ ಡೈಲಾಗ್ ಕೇಳಿ ಅಲ್ಲಿದ್ದವರೆಲ್ಲ ಜೋರಾಗಿ ಶಿಳ್ಳೆ ಹೊಡೆದರು. ರವಿಚಂದ್ರನ್ ಕೂಡ ಈ ಡೈಲಾಗ್ ಹೇಳಿದ ಬಳಿಕ ಖುಷಿಯಿಂದ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?