AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

ಬಿಗ್ ಬಾಸ್ ಮನೆಯಲ್ಲಿ ‘ಪ್ಯಾರ್’ ಸಿನಿಮಾ ಪ್ರಚಾರಕ್ಕೆ ಬಂದಿದ್ದ ಕ್ರೇಜಿಸ್ಟಾರ್ ರವಿಚಂದ್ರನ್, ಸ್ಪರ್ಧಿ ಗಿಲ್ಲಿ ಹೇಳಿದ ಸುಳ್ಳು ಪ್ರೇಮಕಥೆಯನ್ನು ಬಯಲು ಮಾಡಿದ್ದಾರೆ. ‘ರಾಜಾಹುಲಿ’ ಚಿತ್ರದ ಪ್ರೇಮಕಥೆಯನ್ನೇ ತನ್ನದೆಂದು ಹೇಳಿದ ಗಿಲ್ಲಿಯ ಸುಳ್ಳನ್ನು ರವಿಚಂದ್ರನ್ ಸುಲಭವಾಗಿ ಗುರುತಿಸಿದರು. ಈ ಘಟನೆ ಬಿಗ್ ಬಾಸ್ ವೀಕ್ಷಕರ ಗಮನ ಸೆಳೆದಿದ್ದು, ರವಿಚಂದ್ರನ್ ಬುದ್ಧಿವಂತಿಕೆಯನ್ನು ಪ್ರಶಂಸಿಸಲಾಗಿದೆ.

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್
ರವಿಚಂದ್ರನ್ -ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Dec 19, 2025 | 7:20 AM

Share

ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss)​​ ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ ಸಿನಿಮಾ. ಈ ಚಿತ್ರ ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲೇ ತೆರೆಗೆ ಬರುತ್ತಿದೆ. ರಾಶಿಕಾ ಶೆಟ್ಟಿ ಕೂಡ ಸಿನಿಮಾದಲ್ಲಿ ನಟಿಸಿರುವುದರಿಂದ ಚಿತ್ರಕ್ಕೆ ಮೈಲೇಜ್ ಸಿಕ್ಕಿದೆ. ಸಿನಿಮಾದ ಟೈಟಲ್​ಗೆ ತಕ್ಕಂತೆ ಚಟುವಟಿಕೆ ಒಂದನ್ನು ನೀಡಲಾಯಿತು.

ಈ ಚಟುವಟಿಕೆಯ ಅನುಸಾರ ಎಲ್ಲರೂ ತಮ್ಮ ಲವ್​ಸ್ಟೋರಿನ ಸ್ಪರ್ಧಿಗಳ ಎದುರು ಹೇಳಬೇಕಿತ್ತು. ರವಿಚಂದ್ರನ್ ಅವರ ಮೊದಲ ಪ್ರೇಮಕಥೆ ತುಂಬಾನೇ ಸುಂದರವಾಗಿತ್ತು. ನಂತರ ಎಲ್ಲರೂ ತಮ್ಮ ತಮ್ಮ ಪ್ರೇಮಕಥೆಯನ್ನು ಹೇಳಿಕೊಂಡರು. ಈ ಸಂದರ್ಭದಲ್ಲಿ ಗಿಲ್ಲಿ ಅವರು ಸುಳ್ಳು ಹೇಳಿ ರವಿಚಂದ್ರನ್​ ಕೈಲಿ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: ಕ್ಯಾಪ್ಟನ್ಸಿ ಟಾಸ್ಕ್​​​ಗೆ ನಡೆದಿದೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ

ಗಿಲ್ಲಿ ಕಾಲೇಜು ಸಮಯದ ಲವ್​​ಸ್ಟೋರಿ ಹೇಳಿದ್ದಾರೆ. ಬಸ್​ ಅಲ್ಲಿ ಹೋಗುವಾಗ ಹುಡುಗಿ ಮೇಲೆ ಲವ್ ಆಗಿದ್ದು, ಅವರ ಹಿಂದೆ ಸುತ್ತಿದ್ದು, ಅವಳನ್ನು ಮಾತನಾಡಿಸಲು ಪ್ರಯತ್ನಿಸಿದ್ದು, ಆ ಬಳಿಕ ಅವಳು ಅಣ್ಣ ಹೇಳಿದ್ದು ಎಲ್ಲವನ್ನೂ ವಿವರಿಸಿದ್ದರು. ಆದರೆ, ಇದು ಸೇಮ್ ಟು ಸೇಮ್ ‘ರಾಜಾಹುಲಿ’ಯಲ್ಲಿ ಬರುವ ಲವ್​​ಸ್ಟೋರಿ ರೀತಿ ಇತ್ತು. ಇದನ್ನು ರವಿಚಂದ್ರನ್ ಸುಲಭದಲ್ಲಿ ಕಂಡು ಹಿಡಿದರು. ಗಿಲ್ಲಿ ನಟ ಅವರು ಸಾಕಷ್ಟು ಸಿನಿಮಾಗಳನ್ನು ವೀಕ್ಷಿಸಿಕೊಂಡು ಬಂದಿದ್ದಾರೆ. ಅವರು ಸಿನಿಮಾದ ಕಥೆಯನ್ನು ಸಿಚ್ಯುವೇಷನ್​ಗೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು