AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತಾ ಚಂಗಪ್ಪ ಮನೆಯಲ್ಲಿ ರವಿಚಂದ್ರನ್​; ಮಜಾ ಟಾಕೀಸ್​ ರಾಣಿ ಮಗನ ಜತೆ ‘ಕ್ರೇಜಿ ಸ್ಟಾರ್​’ ವಿಡಿಯೋ ವೈರಲ್​

ಶ್ವೇತಾ ಚಂಗಪ್ಪ ನಿವಾಸಕ್ಕೆ ಭೇಟಿ ನೀಡಿದ ರವಿಚಂದ್ರನ್​ ಅವರು ಜಿಯಾನ್​ಗಾಗಿ ಚಾಕೊಲೇಟ್​ ತಂದಿದ್ದರು. ಪುಟ್ಟ ಬಾಲಕನ ಜೊತೆ ತಾವು ಕೂಡ ಮಗುವಾಗಿ ಕೆಲವು ಸಮಯ ಕಳೆದರು.

ಶ್ವೇತಾ ಚಂಗಪ್ಪ ಮನೆಯಲ್ಲಿ ರವಿಚಂದ್ರನ್​; ಮಜಾ ಟಾಕೀಸ್​ ರಾಣಿ ಮಗನ ಜತೆ ‘ಕ್ರೇಜಿ ಸ್ಟಾರ್​’ ವಿಡಿಯೋ ವೈರಲ್​
ರವಿಚಂದ್ರನ್, ಶ್ವೇತಾ ಚಂಗಪ್ಪ, ಜಿಯಾನ್ ಅಯ್ಯಪ್ಪ
TV9 Web
| Updated By: ಮದನ್​ ಕುಮಾರ್​|

Updated on: Oct 03, 2021 | 8:44 AM

Share

ಕಿರುತೆರೆಯ ನಟಿ ಶ್ವೇತಾ ಚಂಗಪ್ಪ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಜಾ ಟಾಕೀಸ್​’ ಕಾರ್ಯಕ್ರಮದಲ್ಲಿ ಅವರಿಗೆ ರಾಣಿ ಪಾತ್ರದ ಮೂಲಕ ಹೆಚ್ಚು ಜನಪ್ರಿಯತೆ ಸಿಕ್ಕಿತು. ಮಗು ಮತ್ತು ಸಂಸಾರದ ಕಡೆಗೆ ಈಗ ಅವರು ಹೆಚ್ಚು ಗಮನ ನೀಡುತ್ತಿದ್ದಾರೆ. ಪುತ್ರ ಜಿಯಾನ್​ ಅಯ್ಯಪ್ಪ ಫೋಟೋಗಳನ್ನು ಶ್ವೇತಾ ಆಗಾಗ ಅಪ್​ಲೋಡ್​ ಮಾಡುತ್ತಲೇ ಇರುತ್ತಾರೆ. ಈಗ ಜಿಯಾನ್​ನನ್ನು ನೋಡಲು ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರು ಶ್ವೇತಾ ಚಂಗಪ್ಪ ಅವರ ಮನೆಗೆ ಬಂದಿರುವುದು ವಿಶೇಷ. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ಶ್ವೇತಾ ಅವರು ಸಖತ್​ ಸಂಭ್ರಮಿಸಿದ್ದಾರೆ.

ಶ್ವೇತಾ ಚಂಗಪ್ಪ ನಿವಾಸಕ್ಕೆ ಭೇಟಿ ನೀಡಿದ ರವಿಚಂದ್ರನ್​ ಅವರು ಜಿಯಾನ್​ಗಾಗಿ ಚಾಕೊಲೇಟ್​ ತಂದಿದ್ದರು. ಪುಟ್ಟ ಬಾಲಕನ ಜೊತೆ ತಾವು ಕೂಡ ಮಗುವಾಗಿ ಕೆಲವು ಸಮಯ ಕಳೆದರು. ಆ ಕ್ಷಣಗಳನ್ನು ತಮ್ಮ ಕ್ಯಾಮೆರಾದಲ್ಲಿ ಶ್ವೇತಾ ಚಂಗಪ್ಪ ಸೆರೆ ಹಿಡಿದಿದ್ದಾರೆ. ಒಟ್ಟಾರೆ ಆ ಸಮಯ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ.

‘ನಿಮ್ಮೆಲ್ಲರೊಂದಿಗೆ ಈ ಸ್ಪೆಷಲ್​ ವಿಡಿಯೋ ಹಂಚಿಕೊಳ್ಳುತ್ತಿದ್ದೇನೆ. ಜನರ ಜೊತೆ ಬೆರೆಯಲು ಜಿಯಾನ್​ ಹೆಚ್ಚು ಸಮಯ ತೆಗೆದುಕೊಳ್ಳುತ್ತಾನೆ. ಅಚ್ಚರಿ ಎಂದರೆ ರವಿ ಸರ್​ ಜೊತೆ ಅವನು ತುಂಬ ಕಂಫರ್ಟಬಲ್​ ಆಗಿದ್ದ. ಅವರನ್ನು ರವಿ ಮಾಮ ಎಂದು ಕೂಡ ಕರೆದ. ಅವರು ತಂದ ಚಾಕೊಲೇಟ್​ ಅನ್ನು ಅವರಿಗೆ ತಿನಿಸಿದ. ಜಿಯಾನ್​ ಜನಿಸಿದಾಗ ರವಿ ಸರ್​ ಬಂದು ನೋಡಿದ್ದರು. ಈಗ ಎರಡು ವರ್ಷಗಳ ಬಳಿಕ ಮತ್ತೆ ಭೇಟಿ ಮಾಡಿದ್ದಾರೆ. ಬಿಡುವು ಮಾಡಿಕೊಂಡು ಬಂದಿದ್ದಕ್ಕೆ ಪ್ರೀತಿಪೂರ್ವಕ ಧನ್ಯವಾದಗಳು ರವಿ ಸರ್​’ ಎಂದು ಶ್ವೇತಾ ಚಂಗಪ್ಪ ಬರೆದುಕೊಂಡಿದ್ದಾರೆ.

ಮಕ್ಕಳೊಂದಿಗೆ ಮಗುವಾಗಿ ಬೆರೆಯುವ ರವಿಚಂದ್ರನ್​ ಅವರ ಇನ್ನೊಂದು ಮುಖವನ್ನು ಪರಿಚಯ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ಎರಡು ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೋ ಕಂಡು ಮೆಚ್ಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶ್ವೇತಾ ಚಂಗಪ್ಪ ಪುತ್ರ ಜಿಯಾನ್​ ಅಯ್ಯಪ್ಪ ಫೇಮಸ್​ ಆಗಿದ್ದಾನೆ. ಆತನ ಹೆಸರಿನಲ್ಲಿ ಇರುವ ಇನ್​ಸ್ಟಾಗ್ರಾಮ್​ ಖಾತೆಯನ್ನು 28 ಸಾವಿರಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಮೆಗಾ ಸ್ಟಾರ್’​ ಚಿರಂಜೀವಿ ಮತ್ತು ರವಿಚಂದ್ರನ್​ ನಡುವಿನ ಸ್ನೇಹ ವಿವರಿಸಲು ಈ ಒಂದು ಘಟನೆ ಸಾಕು

ಪ್ರೇಮಲೋಕ ಸೃಷ್ಟಿಸಿದ ರವಿಚಂದ್ರನ್​ಗೆ ಕಾಡಿತ್ತು ಏಕಾಂಗಿತನ? ಕ್ರೇಜಿ ಸ್ಟಾರ್​ ಬಿಚ್ಚು ಮಾತು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ